ಹಾಸನದಲ್ಲಿ21 ವರ್ಷದ ಯುವಕನ ಜೀ*ವ ಕಸಿದ ಹೃದಯಾಘಾತ, ಜೀ*ವ ಕಳೆದುಕೊಂಡವರ ಸಂಖ್ಯೆ 34ಕ್ಕೆ ಏರಿಕೆ!

ಹಾಸನ :  ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರಿದಿವೆ. ಇದೀಗ ಚಿಕ್ಕಕೊಂಡಗುಳ ಗ್ರಾಮದ 21 ವರ್ಷದ ಮದನ್ ಎಂಬಾತ ಹೃದಯಾಘಾತಕ್ಕೆ ಕಣ್ಮುಚ್ಚಿದ್ದಾನೆ. ಮದನ್ ಮೂಲತಃ ಹಾಸನ ತಾಲ್ಲೂಕಿನ ಚಿಟ್ನಳ್ಳಿ ಗ್ರಾಮದವರಾಗಿದ್ದರು. ಕಳೆದ ಎರಡು ದಿನಗಳಿಂದ ಚಿಕ್ಕಕೊಂಡಗುಳದ ಬಾವನ ಮನೆಗೆ ಬಂದಿದ್ದರು. ನಿನ್ನೆ ರಾತ್ರಿ ಮನೆಯಲ್ಲಿದ್ದ ವೇಳೆ ಮದನ್ಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ.


ಎದೆನೋವಿನಿಂದ ಮದನ್ ಕುಸಿದು ಬಿದ್ದಿದ್ದಾನೆ. ಕೂಡಲೇ ಸಂಬಂಧಿಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟರಲ್ಲೇ ಮದನ್ ಮೃಪಟ್ಟಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಹೃದಯಾಘಾತದಿಂದ ಜೀವ ಕಳೆದುಕೊಂಡವರ ಸಂಖ್ಯೆ 34ಕ್ಕೆ ಏರಿಕೆ ಆಗಿದೆ.

ಸಂಪತ್ಕುಮಾರ್ (53), ಸಿ.ಬಿ ವಿರೂಪಾಕ್ಷ (70), ಸಂತೋಷ್ (41), ದೇವಮ್ಮ (72) ಮೃತಪಟ್ಟವರು. ಹಾಸನ ನಗರದ ಕರಿಗೌಡ ಕಾಲೋನಿ ನಿವಾಸಿ ಸಂಪತ್ಕುಮಾರ್ಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಕುಟುಂಬಸ್ಥರು ಹಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಂಪತ್ಕುಮಾರ್ ಸಾವನ್ನಪ್ಪಿದ್ದಾರೆ.

 

 

 

ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ದುರಂತ
ಸಕಲೇಶಪುರ ತಾಲ್ಲೂಕಿನ, ಬೆಳಗೋಡು ಹೋಬಳಿ ಚಿಕ್ಕನಾಯಕನಹಳ್ಳಿ ಗ್ರಾಮದ ಸಿ.ಬಿ ವಿರೂಪಾಕ್ಷ ಅವರಿಗೆ ಕಳೆದ ರಾತ್ರಿ 11:30ರ ಸುಮಾರಿನಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಕುಟುಂಬಸ್ಥರು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಆದ್ರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.

ಮಲಗಿದ್ದಲ್ಲೇ ಸಾವು

ಗ್ರಾಪಂ ಸದಸ್ಯ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಆಲೂರು ತಾಲ್ಲೂಕಿನ, ಕಲ್ಲಾರೆ ಗ್ರಾಮದಲ್ಲಿ ನಡೆದಿದೆ. ಸಂತೋಷ್ (41) ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ. ರಾತ್ರಿ ಮಲಗಿದ್ದಲ್ಲಿಯೇ ಹೃದಯಾಘಾತವಾಗಿದೆ. ಬೆಳಗ್ಗೆ ಮೇಲೆಳದಿದ್ದಾಗ ಕುಟುಂಬಸ್ಥರು ನೋಡಿದ್ದು ಕೂಡಲೇ ಹಾಸನದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ಅಷ್ಟರಲ್ಲಿ ಹೃದಯಾಘಾತದಿಂದ ಸಂತೋಷ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಸಂತೋಷ್ ಕಾರಗೋಡು ಗ್ರಾ.ಪಂ. ಸದಸ್ಯರಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

ಚಿಕಿತ್ಸೆ ಪಡೆದು ವಾಪಸ್ ಬರುವಾಗ ಸಾವು
ಮತ್ತೊಂದು ಪ್ರಕರಣದಲ್ಲಿ ಹೃದಯಾಘಾತದಿಂದ ವೃದ್ದೆ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಅರೆಕೆರೆ ಗ್ರಾಮದಲ್ಲಿ ನಡೆದಿದೆ. ದೇವಮ್ಮ (72) ಹೃದಯಾಘಾತಕ್ಕೆ ಬಲಿಯಾದ ವೃದ್ದೆ. ದೇವಮ್ಮ ಮನೆಯಲ್ಲಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಎದೆನೋವು ಹೆಚ್ಚಾಗುತ್ತಲೇ ಬೆಂಗಳೂರು ಜಯದೇವ ಆಸ್ಪತ್ರೆಗೆ ತೆರಳಿ ವೈದ್ಯರ ಸಲಹೆ, ಚಿಕಿತ್ಸೆ, ಔಷಧಿ ಪಡೆದು ಗ್ರಾಮಕ್ಕೆ ವಾಪಾಸ್ಸಾಗುತ್ತಿದ್ದರು. ಬೆಂಗಳೂರಿನಿಂದ ಗ್ರಾಮಕ್ಕೆ ವಾಪಸ್ಸಾಗುವ ಮಾರ್ಗ ಮಧ್ಯೆ ದೇವಮ್ಮ ಮೃತಪಟ್ಟಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದ್ದು ಜಿಲ್ಲೆಯ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!