ಆಷಾಢ ಮಾಸದ 2ನೇ ಶುಕ್ರವಾರ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರ. ಡಿಸಿಎಂ, ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ.

ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆ. ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದ್ದು, ಬೆಳಗ್ಗೆಯಿಂದಲೇ ವಿಶೇಷ ಪೂಜೆ ನೆರವೇರುತ್ತಿದೆ. ಇಂದು ಮುಂಜಾನೇ 5 ಗಂಟೆಯಿಂದಲೇ ತಾಯಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.


ಕಳೆದ ಶುಕ್ರವಾರ ತಡರಾತ್ರಿಯಿಂದಲೇ ಮೆಟ್ಟಿಲುಗಳ ಮೂಲಕ ದರ್ಶನಕ್ಕೆ ಭಕ್ತರು ಬಂದ ಕಾರಣ ಸಾಕಷ್ಟು ಗೊಂದಲಗಳಾಗಿದ್ದವು. ಹೀಗಾಗಿ ಈ ಬಾರಿ ಬೆಳಿಗ್ಗೆ 5 ರಿಂದ ಸಂಜೆ 6 ಗಂಟೆವರೆಗೆ ಮಾತ್ರ ಮೆಟ್ಟಿಲುಗಳನ್ನೇರಿ ಬಂದವರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಚಾಮುಂಡಿ ಬೆಟ್ಟಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕುಟುಂಬ ಸಮೇತರಾಗಿ ಭೇಟಿ   


ಆಷಾಢ ಮಾಸದ 2ನೇ ಶುಕ್ರವಾರ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.
ಪತ್ನಿ ಉಷಾ, ಪುತ್ರಿ ಐಶ್ವರ್ಯ ಅವರ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಬಳಿಕ 11 ಇಡುಗಾಯಿ ಒಡೆದು ಪ್ರಾರ್ಥನೆ ಸಲ್ಲಿಸಿದರು.
ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪ್ರಯತ್ನ ವಿಫಲ ಆದ್ರೂ ಪ್ರಾರ್ಥನೆ ವಿಫಲ ಆಗಲ್ಲ. ನನಗೆ ಏನು ಬೇಕೋ ಅದನ್ನೇ ಪ್ರಾರ್ಥನೆ ಮಾಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಅವರು ಬುದ್ದಿ ಹೇಳಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಮಾತಿನಂತೆ ನಡೆದುಕೊಂಡು ಹೋಗೋಣ ನಾವೆಲ್ಲರೂ ಸೇರಿ ಒಟ್ಟಾಗಿ ಕೆಲಸ ಮಾಡೋಣ ಎಂದರು.

ನಟ ದರ್ಶನ್ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ


ನಟ ದರ್ಶನ್ ಆಷಾಡಮಾಸದ ಎರಡನೇ ಶುಕ್ರವಾರದಂದು ಪತ್ನಿ ವಿಜಯಲಕ್ಷ್ಮಿ ಮತ್ತು ಸಹೋದರ ದಿನಕರ್ ಜೊತೆಗೂಡಿ ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಮಾಡಿದ್ದಾರೆ. ಇಂದು ಚಾಮುಂಡೇಶ್ವರಿ ತಾಯಿಗೆ ಲಕ್ಷ್ಮೀ ಅಲಂಕಾರ, ಹೂವು, ಬಳೆ, ತೋತಾಪುರಿ ಮಾವಿನ ಕಾಯಿಯಿಂದ ಅಲಂಕಾರ ಮಾಡಲಾಗಿತ್ತು. ದರ್ಶನ್ ಆಗಮಿಸಿದ ವೇಳೆ ಸಾಕಷ್ಟು ಮಂದಿ ಅಭಿಮಾನಿಗಳು ಅವರನ್ನು ಕಾಣಲು ಬಂದ ಕಾರಣ, ದೇವಾಲಯದಲ್ಲಿ ನೂಕು-ನುಗ್ಗಲು ಉಂಟಾಯ್ತು.

Related Posts

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ನಡುವಿನ ಆತ್ಮೀಯ ಸ್ನೇಹ ಇಡೀ ವಿಶ್ವದ ಗಮನ ಸೆಳೆದಿದೆ. ಇವರಿಬ್ಬರ ರಾಜತಾಂತ್ರಿಕ ಒಡನಾಟವು ಭಾರತ ಮತ್ತು ಇಟಲಿ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿದೆ. ಪ್ರಸ್ತುತ ನಡೆಯುತ್ತಿರುವ ಜಿ7…

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ರಾಜ್ಯದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ಎಸ್‌ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಕೇರಳದ ಮಾದರಿಯಲ್ಲಿ ನಮ್ಮಲ್ಲೂ ಈ…

You Missed

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!