
ಕಳೆದ ಶುಕ್ರವಾರ ತಡರಾತ್ರಿಯಿಂದಲೇ ಮೆಟ್ಟಿಲುಗಳ ಮೂಲಕ ದರ್ಶನಕ್ಕೆ ಭಕ್ತರು ಬಂದ ಕಾರಣ ಸಾಕಷ್ಟು ಗೊಂದಲಗಳಾಗಿದ್ದವು. ಹೀಗಾಗಿ ಈ ಬಾರಿ ಬೆಳಿಗ್ಗೆ 5 ರಿಂದ ಸಂಜೆ 6 ಗಂಟೆವರೆಗೆ ಮಾತ್ರ ಮೆಟ್ಟಿಲುಗಳನ್ನೇರಿ ಬಂದವರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಚಾಮುಂಡಿ ಬೆಟ್ಟಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕುಟುಂಬ ಸಮೇತರಾಗಿ ಭೇಟಿ

ಆಷಾಢ ಮಾಸದ 2ನೇ ಶುಕ್ರವಾರ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.
ಪತ್ನಿ ಉಷಾ, ಪುತ್ರಿ ಐಶ್ವರ್ಯ ಅವರ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಬಳಿಕ 11 ಇಡುಗಾಯಿ ಒಡೆದು ಪ್ರಾರ್ಥನೆ ಸಲ್ಲಿಸಿದರು.
ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪ್ರಯತ್ನ ವಿಫಲ ಆದ್ರೂ ಪ್ರಾರ್ಥನೆ ವಿಫಲ ಆಗಲ್ಲ. ನನಗೆ ಏನು ಬೇಕೋ ಅದನ್ನೇ ಪ್ರಾರ್ಥನೆ ಮಾಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಅವರು ಬುದ್ದಿ ಹೇಳಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಮಾತಿನಂತೆ ನಡೆದುಕೊಂಡು ಹೋಗೋಣ ನಾವೆಲ್ಲರೂ ಸೇರಿ ಒಟ್ಟಾಗಿ ಕೆಲಸ ಮಾಡೋಣ ಎಂದರು.
ನಟ ದರ್ಶನ್ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ

ನಟ ದರ್ಶನ್ ಆಷಾಡಮಾಸದ ಎರಡನೇ ಶುಕ್ರವಾರದಂದು ಪತ್ನಿ ವಿಜಯಲಕ್ಷ್ಮಿ ಮತ್ತು ಸಹೋದರ ದಿನಕರ್ ಜೊತೆಗೂಡಿ ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಮಾಡಿದ್ದಾರೆ. ಇಂದು ಚಾಮುಂಡೇಶ್ವರಿ ತಾಯಿಗೆ ಲಕ್ಷ್ಮೀ ಅಲಂಕಾರ, ಹೂವು, ಬಳೆ, ತೋತಾಪುರಿ ಮಾವಿನ ಕಾಯಿಯಿಂದ ಅಲಂಕಾರ ಮಾಡಲಾಗಿತ್ತು. ದರ್ಶನ್ ಆಗಮಿಸಿದ ವೇಳೆ ಸಾಕಷ್ಟು ಮಂದಿ ಅಭಿಮಾನಿಗಳು ಅವರನ್ನು ಕಾಣಲು ಬಂದ ಕಾರಣ, ದೇವಾಲಯದಲ್ಲಿ ನೂಕು-ನುಗ್ಗಲು ಉಂಟಾಯ್ತು.





