ಕನ್ನಡದ ಬಗ್ಗೆ ವಿವಾದ ಹೇಳಿಕೆ ; ಕಮಲ್ ಹಾಸನ್ಗೆ ಹೊಸ ನಿರ್ಬಂಧ ಹೇರಿದ ಕೋರ್ಟ್!

ನಟ ಕಮಲ್ ಹಾಸನ್ ಅವರು ಇತ್ತೀಚೆಗೆ ಬೇಡದ ಕಾರಣಕ್ಕೆ ಸುದ್ದಿ ಆಗುತ್ತಲೇ ಇದ್ದಾರೆ. ‘ಥಗ್ ಲೈಫ್’ ಸಿನಿಮಾ ರಿಲೀಸ್ ವೇಳೆ ಅವರು ಎಡವಟ್ಟೊಂದನ್ನು ಮಾಡಿಕೊಂಡಿದ್ದರು. ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬ ಹೇಳಿಕೆ ನೀಡಿ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದರು. ಈ ವಿವಾದ ಇನ್ನೂ ಕಡಿಮೆ ಆಗಿಲ್ಲ. ಅವರ ಬಗ್ಗೆ ಕೋರ್ಟ್ನಲ್ಲಿ ಕೇಸ್ಗಳು ನಡೆಯುತ್ತಲೇ ಇವೆ. ಈಗ ಕನ್ನಡದ ಬಗ್ಗೆ ಹೇಳಿಕೆ ನೀಡದಂತೆ ಕಮಲ್ ಹಾಸನ್ಗೆ ಕೋರ್ಟ್ ನಿರ್ಬಂಧ ಹೇರಿದೆ. ಒಂದೊಮ್ಮೆ ಅವರು ಆದೇಶ ಮೀರಿದರೆ ನ್ಯಾಯಾಂಗ ನಿಂದನೆ ಮಾಡಿದಂತೆ ಆಗುತ್ತದೆ.

 

 

 

 

 

 

ಕಮಲ್ ಹಾಸನ್ ಅವರು ‘ಥಗ್ ಲೈಫ್’ ಸಿನಿಮಾ ಪ್ರಚಾರದ ವೇಳೆ ‘ಕನ್ನಡ ತಮಿಳಿನಿಂದ ಹುಟ್ಟಿದ್ದು’ ಎಂದಿದ್ದರು. ಇದಕ್ಕೆ ವಿರೋಧ ವ್ಯಕ್ತವಾಯಿತು. ಈ ಸಿನಿಮಾ ರಿಲೀಸ್ ಆಗಲು ಕರ್ನಾಟಕದಲ್ಲಿ ಅವಕಾಶ ನೀಡಿರಲೇ ಇಲ್ಲ. ಸಿನಿಮಾ ರಿಲೀಸ್ಗೆ ಕರ್ನಾಟಕದಲ್ಲಿ ಅಸಹಕಾರ ತೋರಿಸಲಾಯಿತು. ಇದನ್ನು ಬ್ಯಾನ್ ಎಂದು ಚಿತ್ರತಂಡದವರು ಕರೆದರು. ಈ ಕಾರಣದಿಂದ ನೇರವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರು.

ಹಲವು ದಿನಗಳ ಹೋರಾಟಗಳ ಬಳಿಕ ಪ್ರಕರಣ ಕಮಲ್ ಹಾಸನ್ ಪರ ಆಯಿತು. ಆದಾಗ್ಯೂ ಸಿನಿಮಾ ಕರ್ನಾಟಕದಲ್ಲಿ ರಿಲೀಸ್ ಆಗಿಯೇ ಇಲ್ಲ. ಈಗ ಕಮಲ್ ಹಾಸನ್ ಅವರು ಕನ್ನಡದ ಬಗ್ಗೆ ಹೇಳಿಕೆ ನೀಡದಂತೆ ನಿರ್ಬಂಧ ಹೇರಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಕೋರ್ಟ್ ಎದುರು ಕೋರಿತ್ತು. ಇದಕ್ಕೆ ಕೋರ್ಟ್ ಒಪ್ಪಿ ಕನ್ನಡ ನೆಲ, ಭಾಷೆ, ಸಂಸ್ಕೃತಿ ಬಗ್ಗೆ ಹೇಳಿಕೆ ನೀಡದಂತೆ ನಿರ್ಬಂಧ ಹೇರಿ ಬೆಂಗಳೂರಿನ 31ನೇ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ.

ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ಒಟಿಟಿಗೆ ಬಂದಿದೆ. ಜುಲೈ 2ರಂದು ಸಿನಿಮಾ ನೆಟ್ಫ್ಲಿಕ್ಸ್ನಲ್ಲಿ ತಮಿಳು, ಕನ್ನಡ, ಹಿಂದಿ, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಪ್ರಸಾರ ಕಂಡಿದೆ. ಈ ಚಿತ್ರ ಕನ್ನಡ ವರ್ಷನ್ ಸಿದ್ಧವಿದ್ದರೂ ಅದನ್ನು ಈ ಮೊದಲು ರಿಲೀಸ್ ಮಾಡಲು ತಂಡ ಮುಂದೆ ಬಂದಿರಲಿಲ್ಲ. ಈಗ ಒಟಿಟಿಯಲ್ಲಿ ಕನ್ನಡ ವರ್ಷನ್ ರಿಲೀಸ್ ಆಗಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!