ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ಹಲವು ಮೃ*ತದೇಹಗಳ ರಹಸ್ಯ ವಿಲೇವಾರಿ ದೂರು: ಪ್ರಕರಣ ದಾಖಲು.

ಮಂಗಳೂರು: ತಾನು ರಹಸ್ಯವಾಗಿ ಹಲವು ಮೃತದೇಹಗಳನ್ನು ವಿಲೇವಾರಿ ಮಾಡಿದ್ದೆ ಎಂದು ವ್ಯಕ್ತಿಯೊಬ್ಬರು ವಕೀಲರ ಮೂಲಕ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಿಂದ ಪತ್ರಿಕಾ ಪ್ರಕಟಣೆ ನೀಡಲಾಗಿದೆ. ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದಿನಿಂದ ಹಲವಾರು ಅಪರಾಧ ಕೃತ್ಯಗಳು ನಡೆದಿದ್ದು, ದೂರುದಾರರಿಗೆ ಜೀವಬೆದರಿಕೆ ಒಡ್ಡಿ, ಸದ್ರಿ ಅಪರಾದ ಕೃತ್ಯಗಳ ಮೃತದೇಹಗಳನ್ನು ದೂರುದಾರರ ಮೂಲಕ ರಹಸ್ಯವಾಗಿ ವಿಲೇವಾರಿ ಮಾಡಿಸಿರುತ್ತಾರೆ. ಈ ಹಿನ್ನೆಲೆ ಹಲವಾರು ಮೃತದೇಹಗಳನ್ನು ದೂರುದಾರರು ವಿಲೇವಾರಿ ಮಾಡಿದ್ದು, ಪ್ರಸ್ತುತ ದೂರುದಾರರಿಗೆ ಪಾಪಪ್ರಜ್ಞೆ ಕಾಡುತ್ತಿರುವುದರಿಂದ, ತನಗೆ ಹಾಗೂ ತನ್ನ ಕುಟುಂಬಕ್ಕೆ ಕಾನೂನಾತ್ಮಕವಾಗಿ ರಕ್ಷಣೆ ದೊರೆತ ಕೂಡಲೇ, ಈ ಅಪರಾಧ ಕೃತ್ಯಗಳನ್ನು ನಡೆಸಿದವರ ಸಂಪೂರ್ಣ ಮಾಹಿತಿಯನ್ನು ಹಾಗೂ ತಾನು ಮೃತದೇಹಗಳನ್ನು ವಿಲೇವಾರಿ ಮಾಡಿದ ಸ್ಥಳಗಳನ್ನು ಪೊಲೀಸರಿಗೆ ತೋರಿಸಲು ಸಿದ್ದವಿರುವುದಾಗಿ ಜುಲೈ 3ರಂದು ಪೊಲೀಸ್ ಅಧೀಕ್ಷಕರ ಕಚೇರಿಗೆ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗೆ ಸದ್ರಿ ವ್ಯಕ್ತಿಯಿಂದ ದೂರು ಸಲ್ಲಿಕೆಯಾಗಿರುತ್ತದೆ.


ಈ ದೂರಿನ ಬಗ್ಗೆ ನ್ಯಾಯಾಲಯದಿಂದ ಅಗತ್ಯ ಅನುಮತಿಯನ್ನು ಪಡೆದುಕೊಂಡು, ದಿನಾಂಕ 04.07.2025 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 39/2025, ಕಲಂ: 211(a) ಬಿಎನ್ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಜರಗಿಸಲಾಗುವುದು. ದೂರುದಾರರು ದೂರಿನಲ್ಲಿ ತನ್ನ ಹೆಸರು ಮತ್ತು ಮಾಹಿತಿಯನ್ನು ಗೌಪ್ಯವಾಗಿ ಇಡುವಂತೆ ವಿನಂತಿಸಿಕೊಂಡ ಮೇರೆಗೆ, ದೂರುದಾರರ ಮಾಹಿತಿಯನ್ನು ಪೊಲೀಸ್ ಮೂಲಗಳಿಂದ ನೀಡಲಾಗುವುದಿಲ್ಲ ಎಂದು ತಿಳಿಸಲಾಗಿದೆ.

ಈ ಬಗ್ಗೆ ನೀಡಿದ ಇನ್ನೊಂದು ಪ್ರಕಟಣೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ: 39/2025 ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ದೂರಿಗೆ ಅನ್ವಯವಾಗುವಂತೆ, ಈವರೆಗೆ ಪೊಲೀಸ್ ಠಾಣೆಗೆ ತಲೆಬುರುಡೆ ಹಾಗೂ ಅವಶೇಷದ ಕೆಲಭಾಗಗಳಿರುವ ಎರಡು ಫೋಟೋಗಳ ಕಲರ್ ಝೆರಾಕ್ಸ್ ಪ್ರತಿಯನ್ನು ಮಾತ್ರ ಸಲ್ಲಿಸಿರುತ್ತಾರೆ. ಇದನ್ನು ಹೊರತುಪಡಿಸಿದಂತೆ ಯಾವುದೇ ಕಳೇಬರವನ್ನು ಈವರೆಗೆ ಪೊಲೀಸ್ ಠಾಣೆಗೆ ನೀಡಿರುವುದಿಲ್ಲ. ದೂರುದಾರರ ಪರವಾಗಿ ವಕೀಲರು ದೂರು ಸಲ್ಲಿಸುವ ವೇಳೆ ಕಳೇಬರವನ್ನು ಮುಂದಿನ ಹಂತದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ಲಿಖಿತವಾಗಿ ತಿಳಿಸಿರುತ್ತಾರೆ ಎಂದು ತಿಳಿಸಲಾಗಿದೆ.

 

 

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!