ಮದುವೆ ಆಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಆಂಟಿ !

ಮದುವೆಯಾಗಿ 20 ವರ್ಷದ ಮಕ್ಕಳಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಚಾಟಿಂಗ್ ಮಾಡುತ್ತಾ ಮದುವೆ ಆಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಮದುವೆಯಾಗಿ 20 ವರ್ಷದ ಮಕ್ಕಳಿರುವ ಕೋಮಲಾ ಅಂಟಿಯ ಕಣ್ಸನ್ನೆ ಹಾಗೂ ಮೆಸೇಜ್ಗಳಿಗೆ ಫಿದಾ ಆಗದ ಅಂಕಲ್ಗಳೇ ಇಲ್ಲ. ಸಾಮಾಜಿಕ ಜಾಲತಾಣದಲ್ಲಿ ಬಣ್ಣ ಬಣ್ಣದ ರೀಲ್ಸ್ ಮಾಡುತ್ತಾ ಪೋಸ್ಟ್ ಹಂಚಿಕೊಳ್ಳುವ ಈ ಆಂಟಿ ಆನ್ಲೈನ್ನಲ್ಲಿ ತನಗೆ ಸಂದೇಶ ಕಳಿಸುವ ಅಂಕಲ್ಗಳೇ ಈಕೆಯ ಟಾರ್ಗೆಟ್ ಆಗಿದ್ದಾರೆ. ನಾನು ವಿಧವೆ ಗಂಡನಿಲ್ಲ, ಮಕ್ಕಳಿಲ್ಲ ಎಂದೆಲ್ಲಾ ಹೇಳಿಕೊಳ್ಳುವ ಈ ಕೋಮಲಾ ಆಂಟಿ ಮದುವೆ ಪ್ರಸ್ತಾಪ ಮಾಡಿ ಅಂಕಲ್ಗಳಿಂದ ಲಕ್ಷ ಲಕ್ಷ ಹಣ, ಆಭರಣ ದುಬಾರಿ ಉಡುಗೊರೆಗಳನ್ನು ಪಂಗನಾಮ ಹಾಕುತ್ತಿದ್ದಾಳೆ.

ಮದುವೆ ಮಾಡಿಕೊಳ್ಳುವ ನೆಪದಲ್ಲಿ ರಾಜ್ಯದ ಅನೇಕ ಪುರುಷರಿಗೆ ವಂಚನೆ ಮಾಡುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಬಂಧಿತ ಮಹಿಳೆ ಕೋಮಲ ಎಂಬಾಕೆ ಆಗಿದ್ದಾಳೆ. ಸುಮಾರು 38ರಿಂದ 40 ವರ್ಷದ ಈ ಮಹಿಳೆಗೆ ಈಗಾಗಲೇ ಮದುವೆ ಆಗಿ 21 ವರ್ಷವಾಗಿದೆ. ಈಕೆಗೆ 20 ವರ್ಷದ ಮಗ ಹಾಗೂ 16 ವರ್ಷದ ಮಗಳಿದ್ದಾಳೆ. ತಾನಾಯ್ತು, ತನ್ನ ಸಂಸಾರವಾಯ್ತು ಎಂದು ಯಾವುದಾದರೂ ದುಡಿಮೆ ಮಾಡಿಕೊಂಡು ಮಕ್ಕಳಿಗೆ ಒಳ್ಳೆಯ ಭವಿಷ್ಯ ರೂಪಿಸುವುದನ್ನು ಬಿಟ್ಟು ರೀಲ್ಸ್ ಮಾಡುತ್ತಾ ಅಂಕಲ್ಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಮುಂದಾಗಿದ್ದಾಳೆ. ಹೀಗೆ, ನಾಲ್ಕೈದು ಅಂಕಲ್ಗಳನ್ನು ಬುಟ್ಟಿಗೆ ಬೀಳಿಸಿಕೊಂಡು ಲಕ್ಷಾಂತರ ರೂ. ಹಣ ವಂಚನೆ ಮಾಡಿದ ನಂತರ ಈಗ ಪೊಲೀಸರ ಅತಿಥಿಯಾಗಿದ್ದಾಳೆ.

 

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ನಿವಾಸಿ ರಾಘವೇಂದ್ರ ಎಂಬುವರ ಜೊತೆಯಲ್ಲಿ ಚಾಟಿಂಗ್ ಮಾಡುತ್ತಾ ಮದುವೆಯಾಗುವುದಾಗಿ ಹೇಳಿ ವಂಚನೆ ಮಾಡಿದ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುತ್ತಾ ಪೋಸ್ಟ್ ಮಾಡುತ್ತುದ್ದ ಕೋಮಲಾ ಆಂಟಿಗೆ ಯಾರಾದರೂ ಲೈಕ್ ಮಾಡಿದರೆ, ಕಾಮೆಂಟ್ ಮಾಡಿದರೆ ಅವರೊಂದಿಗೆ ಚಾಟಿಂಗ್ ಮಾಡುತ್ತಾರೆ. ನಂತರ, ಕಾಮೆಂಟ್ ಮಾಡಿದವರ ಪೂರ್ವಾಪರ ತಿಳಿದುಕೊಂಡು ಅಲುಗೆ ಬೆಳೆಸಿಕೊಳ್ಳುತ್ತಾರೆ. ನಂತರ, ಮದುವೆ ಆಗದಿರುವ ಪುರುಷರು, ಹೆಂಡತಿಗೆ ಡಿವೋರ್ಸ್ ನೀಡಿ ಒಬ್ಬಂಟಿಯಾಗಿರುವ ಪುರುಷರಿಗೆ ಮದುವೆ ಮಾಡಿಕೊಳ್ಳುವುದಾಗಿ ನಂಬಿಸುತ್ತಾಳೆ. ತನಗೆ ಈಗಾಗಲೇ ಮದುವೆ ಆಗಿದ್ದು, ಗಂಡ ತೀರಿ ಹೋಗಿದ್ದಾರೆ. ನನಗೆ ಮಕ್ಕಳಿಲ್ಲ, ಮದುವೆ ಮಾಡಿಕೊಂಡು ಬಾಳು ಕೊಡುತ್ತೀರಾ? ಎಂದು ಕೇಳುತ್ತಾಳೆ. ಇನ್ನು ಮೊದಲೇ ಹೆಣ್ಣು ಸಿಗದೇ ಪರಿತಪಿಸುವವರು ಈಕೆಯ ಬುಟ್ಟಿಗೆ ಸುಲಭವಾಗಿ ಬೀಳುತ್ತಾರೆ.

ತನ್ನ ಮೋಸಲ ಜಾಲಕ್ಕೆ ಬಿದ್ದ ಅಂಕಲ್ಗಳೊಂದಿಗೆ ಸ್ವಲ್ಪ ಸಲುಗೆಯಿಂದಲೇ ಚಾಟಿಂಗ್ ಮಾಡುವ ಕೋಮಲಾ ಆಂಟಿ, ತೀರಾ ಪರ್ಸನಲ್ ಎನ್ನುವಂತೆ ಅವರೊಂದಿಗೆ ಮಾತನಾಡುತ್ತಾಳೆ. ನಂತರ, ಮನೆ ನಿರ್ವಹಣೆ, ಇತ್ಯಾದಿ ಎಂದು ಹೇಳಿ ಲಕ್ಷ ಲಕ್ಷ ರೂ. ಹಣವನ್ನು ಪೀಕುತ್ತಾಳೆ. ನಂತರ ಅವರ ಸಂಪರ್ಕಕ್ಕೆ ಸಿಗದೇ ವಂಚನೆ ಮಾಡಿ ಚಾಟಿಂಗ್ ಮಾಡುತ್ತಿದ್ದವರನ್ನು ಬ್ಲ್ಯಾಕ್ ಲಿಸ್ಟ್ಗೆ ಸೇರಿಸುತ್ತಾಳೆ. ಹೀಗೆ, ರಾಘವೇಂದ್ರ ಎಂಬುವವರನ್ನು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಬರೋಬ್ಬರಿ 7.40 ಲಕ್ಷ ರೂಪಾಯಿ ಪಡೆದು ವಂಚನೆ ಮಾಡಿದ್ದಾಳೆ. ಈ ಹಿನ್ನೆಲೆಯಲ್ಲಿ ರಾಘವೇಂದ್ರ ಅವರು ವಂಚನೆಗೊಳಗಾದ ಮಹಿಳೆಯ ವಿರುದ್ಧ ಪೊಲೀಸರಿಗೆ ದೂರು ನಿಡಿದ್ದಾರೆ.

Related Posts

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂ*ಟೌಟ್‌ನಲ್ಲಿ ಮೂವರು ಮೃ*ತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ…

ಚಾಮರಾಜನಗರ ಶೂ*ಟೌಟ್ ಪ್ರಕರಣ: ಅರಣ್ಯ ಇಲಾಖೆ ವಿರುದ್ಧ ಮೃ*ತರ ಕುಟುಂಬಸ್ಥರ ಗಂಭೀರ ಆರೋಪ

ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿಧಾಮದ ಶಾಗ್ಯ ಬೀಟ್‌ನ ಹೊಳೆಮುರಿದಟ್ಟಿ ಅರಣ್ಯ (ತೋಮಿಯರ್ಪಾಳ್ಯ ಗ್ರಾಮದ ಬಳಿ) ಪ್ರದೇಶದಲ್ಲಿ ನಡೆದ ಮೂವರ ಶೂ*ಟೌಟ್ ಪ್ರಕರಣ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಾವನ್ನಪ್ಪಿದ ಮೂವರೂ ಹವ್ಯಾಸಿ ಬೇಟೆಗಾರರಾಗಿದ್ದು, ಸ್ವಾತಂತ್ರ್ಯ ದಿನಾಚರಣೆ ರಜೆಯ ಸಂದರ್ಭದಲ್ಲಿ ಜಿಂಕೆ ಬೇಟೆಗೆ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!