ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ.

ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ, ಜುಲೈ 9 : ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಉತ್ತರಪ್ರದೇಶ ಹಾಗೂ ತಮಿಳುನಾಡುಯ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ರಕ್ಷಣಾ ಕಾರಿಡಾರ್ ಸ್ಥಾಪನೆ ಹಾಗೂ ಟನಲ್ ಯೋಜನೆ , ಬಳ್ಳಾರಿ ರಸ್ತೆಯಲ್ಲಿ ಲಿಂಕ್ ರೋಡ್ ಯೋಜನೆ, ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಯ ನಿರ್ಮಾಣಕ್ಕೆ ಅವಶ್ಯವಿರುವ ಕೇಂದ್ರ ರಕ್ಷಣಾ ಇಲಾಖೆಗೆ ಸೇರಿದ ಜಾಗವನ್ನು ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ನೀಡುವಂತೆ ಕೋರಿ ಮನವಿ ಸಲ್ಲಿಸಿರುವ ಬಗ್ಗೆ ವಿವರಿಸಿದರು.

ರಾಹುಲ್ ಗಾಂಧಿಯನ್ನು ಭೇಟಿಯಾಗುವ ಕಾರ್ಯಕ್ರಮವಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ರಾಹುಲ್ ಗಾಂಧಿಯವರ ಸಮಯವನ್ನು ಸಾಧ್ಯವಾದರೆ ಭೇಟಿಯಾಗುವುದಾಗಿ ತಿಳಿಸಿದರು. ಕಾಂಗ್ರೆಸ್ ನ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ನಾಳೆ ನವದೆಹಲಿಗೆ ಆಗಮಿಸಲಿದ್ದು, ಅವರೊಂದಿಗೆ ವಿಧಾನಪರಿಷತ್ ಸದಸ್ಯರು ಹಾಗೂ ನಿಗಮಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಲಾಗುವುದು. ಅಂತೆಯೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಭೇಟಗೆ ಸಮಯವನ್ನು ಕೋರಲಾಗಿದ್ದು, ನಾಳೆ ಭೇಟಿಯಾಗುವ ಸಾಧ್ಯತೆಯಿದೆ ಎಂದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!