ಸ್ಟಾರ್ ಆಫ್ ಮೈಸೂರು ಮತ್ತು ಮೈಸೂರು ಮಿತ್ರ ಪತ್ರಿಕೆಗಳ ಸಂಸ್ಥಾಪಕ-ಸಂಪಾದಕ ಡಾ.ಕೆ.ಬಿ. ಗಣಪತಿ ನಿಧನ
ಮೈಸೂರು: ಸ್ಟಾರ್ ಆಫ್ ಮೈಸೂರು’ ಮತ್ತು ‘ಮೈಸೂರು ಮಿತ್ರ’ ಪತ್ರಿಕೆಗಳ ಸಂಸ್ಥಾಪಕ-ಸಂಪಾದಕ ಗಣಪತಿ (85) ಇಂದು ಬೆಳಗ್ಗೆ ನಗರದಲ್ಲಿ ನಿಧನರಾದರು. ಅವರು ತಮ್ಮ ಪತ್ನಿ ರಾಲಿ ಗಣಪತಿ, ಪುತ್ರರಾದ ವಿಕ್ರಮ್ ಮುತ್ತಣ್ಣ ಮತ್ತು ಮಿಕ್ಕಿ ಬೋಪಣ್ಣ, ಸೊಸೆಯಂದಿರು, ಮೊಮ್ಮಕ್ಕಳು ಮತ್ತು ಅಪಾರ ಬಂಧುಗಳು, ಸ್ನೇಹಿತರು, ಹಿತೈಷಿಗಳು, ಗೌರವಾನ್ವಿತ ಓದುಗರು, ಜಾಹೀರಾತುದಾರರು ಮತ್ತು ಪೋಷಕರನ್ನು ಅಗಲಿದ್ದಾರೆ. ಪಾರ್ಥಿವ ಶರೀರವನ್ನು ಮಧ್ಯಾಹ್ನ 12 ಗಂಟೆಗೆ ಅವರ ನಿವಾಸಕ್ಕೆ ತರಲಾಗುವುದು.
ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ. ಗಣಪತಿ ಮೂಲತಃ ಕೊಡಗಿನವರು. ಮ್ಮದೇ ಅಂಕಣದ ಮೂಲಕ ಗಮನ ಸೆಳೆದಿದ್ದ ಗಣಪತಿ ಅವರು ಸದಾ ಸುದ್ದಿ ಮನೆಯಲ್ಲಿ ಕ್ರೀಯಾಶೀವಾಗಿದ್ದವರು.
ಹಿರಿಯ ಪತ್ರಕರ್ತರಾದ ಕೆ.ಬಿ.ಗಣಪತಿ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಘನತೆಯಿಂದ ಪತ್ರಿಕೋದ್ಯಮ ನಡೆಸಿದ ಗಣಪತಿ ಅವರ ನಿಧನದಿಂದ
ಸುದ್ದಿಮನೆಯ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶೋಕಿಸಿದ್ದಾರೆ. ಗಣಪತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
ವಿಳಾಸ: ‘ಫೋರ್ತ್ ಎಸ್ಟೇಟ್’ #375, 8ನೇ ಮುಖ್ಯ, 9ನೇ ಅಡ್ಡ ಲಲಿತಾದ್ರಿ ರಸ್ತೆ, ಕೆ.ಸಿ. ಲೇಔಟ್, ಮೈಸೂರು – 5700 11]. ಇಂದು (ಜುಲೈ 13) ಸಂಜೆ 4 ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಕುಟುಂಬವನ್ನು ಮೊ.: 98805-31002 ಅಥವಾ 99005-01179 ನಲ್ಲಿ ಸಂಪರ್ಕಿಸಬಹುದು.





