ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಬೆಂಕಿ ; 5 ಬೋಗಿಗಳು ಸುಟ್ಟು ಕರಕಲು.

ತಿರುವಳ್ಳೂರು : ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲು ಹಳ್ಳಿ ತಪ್ಪಿದ ಪರಿಣಾಮ, ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ಇಂದು ಬೆಳಗ್ಗೆ ತಮಿಳುನಾಡಿನ ತಿರುವಳ್ಳೂರು ಬಳಿ ಸಂಭವಿಸಿದೆ.

ಚೆನ್ನೈ ಬಂದರಿನಿಂದ ಡೀಸೆಲ್ ಸಾಗಿಸುತ್ತಿದ್ದ ಸರಕು ಸಾಗಣೆ ರೈಲು ತಿರುವಳ್ಳೂರು ಬಳಿ ಇದ್ದಕ್ಕಿದ್ದಂತೆ ಹಳಿತಪ್ಪಿದೆ. ಈ ವೇಳೆ ರೈಲಿನಲ್ಲಿದ್ದ ಡೀಸೆಲ್ ಟ್ಯಾಂಕರ್ನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಧಗಧಗಿಸುತ್ತಿರುವ ಬೆಂಕಿಯ ಜ್ವಾಲೆಯ ಹಿನ್ನೆಲೆಯಲ್ಲಿ ಸುತ್ತಲೂ ದಟ್ಟ ಹೊಗೆ ಆವರಿಸಿಕೊಂಡಿತ್ತು.

ಟ್ಯಾಂಕರ್ಗಳಲ್ಲಿ ಅಪಾರ ಪ್ರಮಾಣದ ಇಂಧನ ಇರುವುದರಿಂದ ಬೆಂಕಿಯ ವ್ಯಾಪ್ತಿ ಮತ್ತಷ್ಟು ಹರಡಬಹುದು ಎಂದು ಅಧಿಕಾರಿಗಳು ಆಂತಕ ವ್ಯಕ್ತಪಡಿಸಿದ್ದಾರೆ. ಘಟನೆಯಿಂದ ಇದುವರೆಗೆ ಒಟ್ಟು ಐದು ಬೋಗಿಗಳು ಸಂಪೂರ್ಣವಾಗಿ ಬೆಂಕಿಯಲ್ಲಿ ಸುಟ್ಟುಕರಕಲಾಗಿವೆ.

10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸುತ್ತಿದ್ದರೂ ಬೆಂಕಿಯನ್ನು ನಂದಿಸಲು ಸಾಧ್ಯವಾಗುತ್ತಿಲ್ಲ. ಹತ್ತಿರದ ವಸತಿ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಪೊಲೀಸರು ಸ್ಥಳಾಂತರಿಸಿದ್ದಾರೆ. ಸುರಕ್ಷತಾ ಕಾರಣಗಳಿಗಾಗಿ ವಿದ್ಯುತ್ ಸರಬರಾಜು ಕೂಡ ಕಡಿತಗೊಳಿಸಲಾಗಿದೆ.

ಘಟನೆ ನಡೆದ ಸ್ಥಳದ ಸಮೀಪವಿರುವ ಮನೆಗಳಲ್ಲಿನ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳನ್ನು ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರ ಮಾಡಲಾಗಿದೆ.
ಇಲ್ಲಿನ ಜಿಲ್ಲಾಧಿಕಾರಿ ಎಂ.ಪ್ರತಾಪ್ ಅವರು ಅಗ್ನಿಶಾಮಕ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಆದೇಶಿಸಿದ್ದಾರೆ. ಅಪಘಾತದಲ್ಲಿ ಇಲ್ಲಿಯವರೆಗೆ ಯಾವುದೇ ಜೀವಹಾನಿ ಸಂಭವಿಸಿದ ವರದಿಯಾಗಿಲ್ಲ. ರಕ್ಷಣಾ ಕಾರ್ಯಾಚರಣೆಗಾಗಿ ಅರಕ್ಕೋಣಂನಿಂದ ವಿಪತ್ತು ಪರಿಹಾರ ತಂಡಗಳು ಘಟನಾ ಸ್ಥಳಕ್ಕೆ ತಲುಪಿವೆ.


ರೈಲು ಸೇವೆಗಳಲ್ಲಿ ವ್ಯತ್ಯಯ: ಘಟನೆಯಿಂದ ಹಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದ್ದು, ಕೆಲ ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ದಕ್ಷಿಣ ರೈಲ್ವೆ ಇಲಾಖೆಯು ಎಕ್ಸ್ ಪೋಸ್ಟ್ ಮೂಲಕ ಮಾಹಿತಿ ನೀಡಿದೆ. “ತಿರುವಳ್ಳೂರು ಬಳಿ ಸಂಭವಿಸಿದ ಘಟನೆಯಿಂದ ಮುಂಜಾಗೃತವಾಗಿ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ. ಬೆಂಕಿ ನಂದಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದ್ದರಿಂದ ರೈಲು ಸೇವೆಗಳಲ್ಲಿ ಈ ಕೆಳಗಿನ ಬದಲಾವಣೆಗಳನ್ನು ಮಾಡಲಾಗಿದೆ” ಎಂದು ರೈಲುಗಳ ಪಟ್ಟಿಯನ್ನು ಹಂಚಿಕೊಂಡಿದೆ. ತುರ್ತು ಸಹಾಯಕ್ಕಾಗಿ ಸಹಾಯವಾಣಿ: 044-25354151, 044-24354995 ತೆರೆಯಲಾಗಿದೆ.

ಘಟನಾ ಸ್ಥಳಕ್ಕೆ NDRF ತಂಡ ಆಗಮನ: ತಿರುವಳ್ಳೂರು ಜಿಲ್ಲಾಡಳಿತದ ಮನವಿ ಮೇರೆಗೆ ರಕ್ಷಣಾ ಮತ್ತು ಬೆಂಬಲ ಕಾರ್ಯಾಚರಣೆಗಾಗಿ 50 ರಕ್ಷಣಾ ಸಿಬ್ಬಂದಿಯನ್ನು ಒಳಗೊಂಡ ಎರಡು ಎನ್ಡಿಆರ್ಎಫ್ ತಂಡಗಳನ್ನು ಘಟನಾ ಸ್ಥಳಕ್ಕೆ ಕರೆಯಿಸಲಾಗಿದೆ.

ಬೆಂಕಿ ನಂದಿಸಲು ಇನ್ನೂ ಕೆಲ ಗಂಟೆಗಳ ಅಗತ್ಯ: ತಮಿಳುನಾಡು ಸಚಿವ ಎಸ್.ಎಂ. ನಾಸರ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಕರೆ ನೀಡಿದ್ದಾರೆ. ಬೆಂಕಿ ನಿಯಂತ್ರಿಸಲು ಇನ್ನೂ ಕೆಲ ಗಂಟೆಗಳು ಅಗತ್ಯವಿದೆ ಎಂದು ಜಿಲ್ಲಾಡಳಿತ ಹೇಳಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!