ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾದೇವಿ ನಿಧನ.

ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ ಅವರು ಇಂದು ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ಸಮಯದಿಂದ ಸರೋಜಾ ದೇವಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆರೂವರೆ ದಶಕಗಳ ಕಾಲ ಅವರು ಚಿತ್ರರಂಗದಲ್ಲಿ ಇದ್ದರು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರ.


ಸರೋಜಾ ಅವರು 1967ರಲ್ಲಿ ಹರ್ಷ ಅವರನ್ನು ವಿವಾಹ ಆದರು. 1986ರಲ್ಲಿ ಪತಿ ನಿಧನ ಹೊಂದಿದರು. ಈಗ ಪತಿ ಹರ್ಷ ಸಮಾಧಿ ಪಕ್ಕದಲ್ಲೇ ಸರೋಜಾ ಅವರ ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರಿನ ಕೊಡಿಗೆಹಳ್ಳಿಯ ತೋಟದಲ್ಲಿ ಒಕ್ಕಲಿಗೆ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.

ಸರೋಜಾ ದೇವಿ ಜನಿಸಿದ್ದು 1938ರ ಜನವರಿ 7ರಂದು. ಅವರು ಬೆಂಗಳೂರಿನಲ್ಲಿ ಹುಟ್ಟಿದರು. ಅವರ ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ರುದ್ರಮ್ಮಾ ಅವರು ಹೌಸ್ವೈಫ್ ಆಗಿದ್ದರು. ಸರೋಜಾ ಬಳಿ ಭೈರಪ್ಪ ಅವರು ಡ್ಯಾನ್ಸ್ ಕಲಿಯುವಂತೆ ಪ್ರೋತ್ಸಾಹಿಸಿದರು. ಅವರು ಚಿತ್ರರಂಗಕ್ಕೆ ಬರಲು ತಂದೆಯಿಂದಲೇ ಬೆಂಬಲ ಸಿಕ್ಕಿತ್ತು.

1955ರಲ್ಲಿ ಬಂದ ‘ಮಹಾಕವಿ ಕಾಳಿದಾಸ’ ಚಿತ್ರದ ಮೂಲಕ ಸರೋಜಾ ದೇವಿ ಅವರು ಮೊದಲ ಬಾರಿಗೆ ಬಣ್ಣ ಹಚ್ಚಿದರು. ಆಗ ಅವರಿಗೆ 17 ವರ್ಷ. ಆ ಬಳಿಕ ಆಫರ್ಗಳು ಅವರನ್ನು ಹುಡುಕಿ ಬಂದವು. ಕೇವಲ ಕನ್ನಡ ಮಾತ್ರವಲ್ಲದೆ, ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲೋ ಸರೋಜಾ ದೇವಿ ಅವರು ನಟಿಸಿದ್ದಾರೆ. ಅವರ ವೃತ್ತಿ ಬದುಕಿನಲ್ಲಿ ಸುಮಾರು 200ಕ್ಕೂ ಅಧಿಕ ಚಿತ್ರಗಳಲ್ಲಿ ಕಾಣಿಸಿಕೊಂಡರು.

ಮೇರು ನಟರಾದ ರಾಜ್ಕುಮಾರ್, ಕಲ್ಯಾಣ್ ಕುಮಾರ್ ಮೊದಲಾದವರ ಜೊತೆ ಸರೋಜಾ ದೇವಿ ತೆರೆ ಹಂಚಿಕೊಂಡರು. ‘ಅಮರ ಶಿಲ್ಪಿ ಜಕಣಾಚಾರಿ’, ‘ಮಲ್ಲಮ್ಮನ ಪವಾಡ’, ಭಾಗ್ಯವಂತರು, ‘ಬಬ್ರುವಾಹನ’ ಕಥಾಸಂಗಮ ಮುಂತಾದ ಕನ್ನಡ ಸಿನಿಮಾಗಳಲ್ಲಿ ಸರೋಜಾ ದೇವಿ ನಟಿಸಿದ್ದರು. ತಮಿಳಿನಲ್ಲಿ ‘ಪಾಟ್ಟಾಲಿ ಮುತ್ತು’, ‘ಪಡಿಕಥ ಮೇಥೈ’, ‘ಕಲ್ಯಾಣ ಪರಿಸು’, ತೆಲುಗಿನಲ್ಲಿ ‘ಪಂಡರಿ ಭಕ್ತಲು’, ‘ದಕ್ಷಯಜ್ಞಂ’, ಹಿಂದಿಯಲ್ಲಿ ‘ಆಶಾ’, ‘ಮೆಹಂದಿ ಲಗಾ ಕೆ ರಖನಾ’ ಮೊದಲಾದ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದರು.

90ರ ದಶಕದ ಬಳಿಕ ಸರೋಜಾ ದೇವಿ ಚಿತ್ರರಂಗದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿರಲಿಲ್ಲ. ಪುನೀತ್ ನಟನೆಯ 2019ರ ‘ನಟಸಾರ್ವಭೌಮ’ ಚಿತ್ರದಲ್ಲಿ ಅವರು ಅತಿಥಿ ಪಾತ್ರ ಮಾಡಿದರು. ಸರೋಜಾ ದೇವಿ ಆಗಿಯೇ ಅವರು ಸಿನಿಮಾದಲ್ಲಿ ಕಾಣಿಸಿಕೊಂಡರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!