
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ರವಿ ಗಣಿಗ, ಕಾಲ ಕೂಡಿ ಬಂದಾಗ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಡಿಕೆ ಶಿವಕುಮಾರ್ ಸಿಎಂ ಆಗಲೇಬೇಕು. ಆಗೇ ಆಗುತ್ತಾರೆ. ಎಲ್ಲಾ ಶಾಸಕರು ಡಿಕೆ ಶಿವಕುಮಾರ್ ಪರ ಇದ್ದಾರೆ ಎಂದರು.

ಬಿಜೆಪಿ ಜೆಡಿಎಸ್ ಅನುದಾನ ತಾರತಮ್ಯ ಕುರಿತು ಪ್ರತಿಕ್ರಿಯಿಸಿದ ಶಾಸಕ ರವಿಗಣಿಗ, ಗ್ಯಾರಂಟಿಯಿಂದ ಅನುದಾನಕ್ಕೆ ಯಾವುದೇ ಸಮಸ್ಯೆ ಇಲ್ಲ. ನೂರಾರು ಕೋಟಿ ಅನುದಾನ ನಮಗೆ ನೀಡಲಾಗಿದೆ. ಕೆಆರ್ ಪೇಟೆಗೆ ಅನುದಾನ ತಾರತಮ್ಯ. ಕೆಆರ್ ಪೇಟೆ ಶಾಸಕರು ನಮ್ಮ ಪಕ್ಷದವರಾ..? ಎಂದು ಪ್ರಶ್ನಿಸಿದರು.





