ಎಸ್ಸಿ ಎಸ್ಟಿ ನೌಕರರ ಮುಂಬಡ್ತಿಯಲ್ಲಿ ರೋಸ್ಟರ್ ನಿಯಮ ಉಲ್ಲಂಘನೆಯಾಗುತ್ತಿದೆ : ಸಿಎಂ ಸಿದ್ದರಾಮಯ್ಯಗೆ ಖರ್ಗೆ ಪತ್ರ.

ಕರ್ನಾಟಕದ ಎಸ್ಸಿ ಎಸ್ಟಿ ನೌಕರರ ಮುಂಬಡ್ತಿಯಲ್ಲಿ ರೋಸ್ಟರ್ ನಿಯಮ ಉಲ್ಲಂಘನೆಯಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕೆಲವು ಇಲಾಖೆಗಳು ಸರ್ಕಾರದ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಲಾಗಿದೆ. ಖರ್ಗೆ ಅವರು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಮತ್ತು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚನೆ ನೀಡಿದ್ದಾರೆ.

​ಬೆಂಗಳೂರು, ಜುಲೈ 15: ತಾವು ಎಸ್​​​ಸಿ ಎಸ್​​ಟಿ (SC ST) ಪರ, ಹಿಂದುಳಿದ ವರ್ಗಗಳ ಹಿತ ಕಾಯುವುದೇ ಆದ್ಯತೆ ಹಾಗೂ ಸಂವಿಧಾನಾತ್ಮಕಾಗಿಯೇ ಆಡಳಿತ ನಡೆಸುವುದು ಎಂದೇ ಸದಾ ಬಿಂಬಿಸಿಕೊಂಡು ಬಂದಿರುವ ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿಯೇ ಹಿಂದುಳಿದ ವರ್ಗಗಳ ನೌಕರರಿಗೆ ಸಮಸ್ಯೆಯಾಗುತ್ತಿದೆಯೇ? ಇಂಥದ್ದೊಂದು ಪ್ರಶ್ನೆಗೆ ಈಗ ನಡೆದಿರುವ ಬೆಳವಣಿಗೆ ಕಾರಣವಾಗಿದೆ. ಎಸ್​​​ಸಿ ಎಸ್​​ಟಿ ನೌಕರರ ಮುಂಬಡ್ತಿಯಲ್ಲಿ ನಿಯಮ ಪಾಲನೆಯಾಗುತ್ತಿಲ್ಲ. ಈ ಕುರಿತು ಗಮನಹರಿಸಿ ತಕ್ಷಣವೇ ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ./ಎಸ್.ಟಿ. ನೌಕರರ ಸಂಘದವರು ಎಸ್.ಸಿ.ಎಸ್.ಟಿ ನೌಕರರಿಗೆ ಮುಂಬಡ್ತಿಯನ್ನು ನೀಡುವಲ್ಲಿ ರೋಸ್ಟ‌ರ್ ಬಿಂದುವನ್ನು ಸರ್ಕಾರದ ಆದೇಶದ ಪ್ರಕಾರ ನಗದಿಪಡಿಸಿದ್ದರೂ, ಅದನ್ನು ಕಟುನಿಟ್ಟಾಗಿ ಪಾಲನೆ ಮಾಡಬೇಕೆಂಬ ನಿರ್ದೇಶನವಿದ್ದರೂ ಕೆಲವು ಇಲಾಖೆಗಳ ಅಧಿಕಾರಿಗಳು ಪಾಲನೆ ಮಾಡದಿರುವ ಬಗ್ಗೆ ಪತ್ರಿಕೆಯಲ್ಲಿ ಬಂದಿರುವ ಕೆಲವು ಪ್ರಮುಖ ಅಂಶಗಳ ಜೊತೆಗೆ ಈ ವಿಚಾರವಾಗಿ ನಿಮಗೂ ಕೂಡ ಬರೆದಿರುವ ಪತ್ರದ ಪ್ರತಿಯನ್ನು ಸಂಘದ ಅಧ್ಯಕ್ಷರು ನನ್ನ ಗಮನಕ್ಕೆ ತಂದಿದ್ದಾರೆ.

ಇದರ ಜೊತೆ ಲಗತ್ತಿಸಿರುವ ಪತ್ರಿಕೆಯಲ್ಲಿ ಬಂದಿರುವ ವಿವರಗಳನ್ನು ಹಾಗೂ ಸಂಘದವರು ನಿಮಗೆ ಈಗಾಗಲೇ ನೀಡಿರುವ ಪತ್ರವನ್ನು ಸ್ವತಃ ಅವಲೋಕಿಸುವುದರ ಜೊತೆಗೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ವಿವರವಾಗಿ ಚರ್ಚಿಸಿ ಸರ್ಕಾರವೇ ಹೊರಡಿಸಿರುವ ಅದೇಶ ಹಾಗೂ ಸುತ್ತೋಲೆಗಳಲ್ಲಿ ತಿಳಿಸಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸ್ಪಷ್ಟ ಆದೇಶವನ್ನು ನೀಡುವುದು ಸೂಕ್ತ. ಇಲ್ಲದಿದ್ದರೆ ಅಧಿಕಾರಿಗಳ ಮಟ್ಟದಲ್ಲಿ ಅಸಮಧಾನ ಉಂಟಾಗಿ ಸರ್ಕಾರದ ಕೆಲಸ ಕಾರ್ಯಗಳು ಸುಲಲಿತವಾಗಿ ನಡೆಯಲು ಕಷ್ಟವಾಗುತ್ತದೆ ಎಂದು ಖರ್ಗೆ ಅವರು ಸಿದ್ದರಾಮಯ್ಯಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು