ಸಿಎಂ ತವರು ಕ್ಷೇತ್ರದಲ್ಲಿ ಅನ್ನದಾತರ ಅಹೋರಾತ್ರಿ ಧರಣಿ, ಭೂಮಿ ಕಳೆದುಕೊಂಡ ರೈತ ಕುಟುಂಬದಿಂದ ಪ್ರತಿಭಟನೆ

ಸಿಎಂ ತವರು ಕ್ಷೇತ್ರದಲ್ಲಿ ಅನ್ನದಾತರ ಅಹೋರಾತ್ರಿ ಧರಣಿ, ಭೂಮಿ ಕಳೆದುಕೊಂಡ ರೈತ ಕುಟುಂಬದಿಂದ ಪ್ರತಿಭಟನೆ

ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ವಿಫಲವಾದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆಐಎಡಿಬಿಯ ವಿರುದ್ಧ ಕೆಂಪಿಸಿದ್ದನಹುಂಡಿ ‌ರೈತರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ

ವರುಣಾ ಕ್ಷೇತ್ರದ ಕೆಂಪಿಸಿದ್ದನಹುಂಡಿ ಗ್ರಾಮದ ರೈತರ ಭೂಮಿಯನ್ನು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆಂದು ಭೂ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ರೈತರ ಕುಟುಂಬದ ಸದಸ್ಯರಿಗೆ ಕಾರ್ಖಾನೆಗಳಲ್ಲಿ ಖಾಯಂ ಕೆಲಸ ನೀಡುವುದಾಗಿ ತಿಳಿಸಲಾಗಿತ್ತು. ಆದರೆ ಬಹುತೇಕ ಕಾರ್ಖಾನೆಗಳು ಉದ್ಯೋಗವನ್ನು ನೀಡಿರಲಿಲ್ಲ. ರೈತರ ಹಲವಾರು ಹೋರಾಟಗಳ ನಂತರ, ಜಿಲ್ಲಾಧಿಕಾರಿಗಳು ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾ ಕೈಗಾರಿಕೆಗಳ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಒಂದು ಜಿಲ್ಲಾಮಟ್ಟದ ಸಮಿತಿಯನ್ನು ರಚನೆ ಮಾಡಿದರು. ಈ ಸಮಿತಿಯ ಶಿಫರಾಸ್ಸಿನಂತೆ, ಉದ್ಯೋಗ ನೀಡಬೇಕೆಂದು ಕೆಲವು ಕೈಗಾರಿಕೆಗಳಿಗೆ ಕೆಐಎಡಿಬಿಯ ಅಧಿಕಾರಿಗಳು ಪತ್ರವನ್ನು ನೀಡಿದ್ದಾರೆ. ಆದರೆ ಈ ಪತ್ರಗಳಿಗೆ ಕಾರ್ಖಾನೆಗಳು ಸ್ಪಂದಿಸುತ್ತಿಲ್ಲ.

ಹಾಗಾಗಿ ರೈತರಿಂದ ಭೂಮಿಯನ್ನು ಪಡೆದು ಕೈಗಾರಿಕೆಗಳಿಗೆ ನೀಡಿರುವ ಕೆಐಎಡಿಬಿಯ ಅಧಿಕಾರಿಗಳು ರೈತರ ಮಕ್ಕಳಿಗೆ ಕೆಲಸ ಕೊಡಿಸಬೇಕೆಂದು, ೨೯-೦೮-೨೦೨೪ರಂದು ಕೆಐಎಡಿಬಿಯ ಕಚೇರಿಯ ಮುಂದೆ ಅನಿರ್ಧಿಷ್ಟಾವಧಿ ಹೋರಾಟವನ್ನು ಶುರು ಮಾಡಲಾಗಿತ್ತು. ಪ್ರತಿಭಟನಾ ಸ್ಥಳಕ್ಕೆ ಬಂದ ಕೆಐಎಡಿಬಿಯ ಅಧಿಕಾರಿಗಳು ೦೪-೦೯-೨೦೨೪ ರಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ರೈತರಿಗೆ ಕೆಲಸ ನೀಡಬೇಕಿರುವ ಕಾರ್ಖಾನೆಗಳ ಪ್ರತಿನಿಧಿಗಳ ಸಭೆಯನ್ನು ನಡೆಸಿ ಉದ್ಯೋಗ ಕೊಡಿಸುವುದಾಗಿ ತಿಳಿಸಿದ್ದರು. ಆ‌ ಹಿನ್ನಲೆಯಲ್ಲಿ ಪ್ರತಿಭಟನೆಯನ್ನು ವಾಪಾಸ್ ತೆಗೆದುಕೊಳ್ಳಲಾಗಿತ್ತು.

ಆದರೆ ಇಂದಿನ ಸಭೆಯಲ್ಲಿ, ಭೂಮಿ ನೀಡಿದ ರೈತರ ಮಕ್ಕಳಿಗೆ ಉದ್ಯೋಗ ನೀಡುವ ಬಗ್ಗೆ ಯಾವುದೇ ತಿರ್ಮಾನವಾಗಲಿಲ್ಲ. ಹಾಗಾಗಿ ರೈತರಿಗೆ ನ್ಯಾಯ ಸಿಗುವವರೆಗೂ ಜಂಟಿ ನಿರ್ದೇಶಕರ ಕಛೇರಿಯ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!