ಸಿಎಂ ತವರು ಕ್ಷೇತ್ರದಲ್ಲಿ ಅನ್ನದಾತರ ಅಹೋರಾತ್ರಿ ಧರಣಿ, ಭೂಮಿ ಕಳೆದುಕೊಂಡ ರೈತ ಕುಟುಂಬದಿಂದ ಪ್ರತಿಭಟನೆ

ಸಿಎಂ ತವರು ಕ್ಷೇತ್ರದಲ್ಲಿ ಅನ್ನದಾತರ ಅಹೋರಾತ್ರಿ ಧರಣಿ, ಭೂಮಿ ಕಳೆದುಕೊಂಡ ರೈತ ಕುಟುಂಬದಿಂದ ಪ್ರತಿಭಟನೆ

ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ವಿಫಲವಾದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆಐಎಡಿಬಿಯ ವಿರುದ್ಧ ಕೆಂಪಿಸಿದ್ದನಹುಂಡಿ ‌ರೈತರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ

ವರುಣಾ ಕ್ಷೇತ್ರದ ಕೆಂಪಿಸಿದ್ದನಹುಂಡಿ ಗ್ರಾಮದ ರೈತರ ಭೂಮಿಯನ್ನು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆಂದು ಭೂ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ರೈತರ ಕುಟುಂಬದ ಸದಸ್ಯರಿಗೆ ಕಾರ್ಖಾನೆಗಳಲ್ಲಿ ಖಾಯಂ ಕೆಲಸ ನೀಡುವುದಾಗಿ ತಿಳಿಸಲಾಗಿತ್ತು. ಆದರೆ ಬಹುತೇಕ ಕಾರ್ಖಾನೆಗಳು ಉದ್ಯೋಗವನ್ನು ನೀಡಿರಲಿಲ್ಲ. ರೈತರ ಹಲವಾರು ಹೋರಾಟಗಳ ನಂತರ, ಜಿಲ್ಲಾಧಿಕಾರಿಗಳು ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾ ಕೈಗಾರಿಕೆಗಳ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಒಂದು ಜಿಲ್ಲಾಮಟ್ಟದ ಸಮಿತಿಯನ್ನು ರಚನೆ ಮಾಡಿದರು. ಈ ಸಮಿತಿಯ ಶಿಫರಾಸ್ಸಿನಂತೆ, ಉದ್ಯೋಗ ನೀಡಬೇಕೆಂದು ಕೆಲವು ಕೈಗಾರಿಕೆಗಳಿಗೆ ಕೆಐಎಡಿಬಿಯ ಅಧಿಕಾರಿಗಳು ಪತ್ರವನ್ನು ನೀಡಿದ್ದಾರೆ. ಆದರೆ ಈ ಪತ್ರಗಳಿಗೆ ಕಾರ್ಖಾನೆಗಳು ಸ್ಪಂದಿಸುತ್ತಿಲ್ಲ.

ಹಾಗಾಗಿ ರೈತರಿಂದ ಭೂಮಿಯನ್ನು ಪಡೆದು ಕೈಗಾರಿಕೆಗಳಿಗೆ ನೀಡಿರುವ ಕೆಐಎಡಿಬಿಯ ಅಧಿಕಾರಿಗಳು ರೈತರ ಮಕ್ಕಳಿಗೆ ಕೆಲಸ ಕೊಡಿಸಬೇಕೆಂದು, ೨೯-೦೮-೨೦೨೪ರಂದು ಕೆಐಎಡಿಬಿಯ ಕಚೇರಿಯ ಮುಂದೆ ಅನಿರ್ಧಿಷ್ಟಾವಧಿ ಹೋರಾಟವನ್ನು ಶುರು ಮಾಡಲಾಗಿತ್ತು. ಪ್ರತಿಭಟನಾ ಸ್ಥಳಕ್ಕೆ ಬಂದ ಕೆಐಎಡಿಬಿಯ ಅಧಿಕಾರಿಗಳು ೦೪-೦೯-೨೦೨೪ ರಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ರೈತರಿಗೆ ಕೆಲಸ ನೀಡಬೇಕಿರುವ ಕಾರ್ಖಾನೆಗಳ ಪ್ರತಿನಿಧಿಗಳ ಸಭೆಯನ್ನು ನಡೆಸಿ ಉದ್ಯೋಗ ಕೊಡಿಸುವುದಾಗಿ ತಿಳಿಸಿದ್ದರು. ಆ‌ ಹಿನ್ನಲೆಯಲ್ಲಿ ಪ್ರತಿಭಟನೆಯನ್ನು ವಾಪಾಸ್ ತೆಗೆದುಕೊಳ್ಳಲಾಗಿತ್ತು.

ಆದರೆ ಇಂದಿನ ಸಭೆಯಲ್ಲಿ, ಭೂಮಿ ನೀಡಿದ ರೈತರ ಮಕ್ಕಳಿಗೆ ಉದ್ಯೋಗ ನೀಡುವ ಬಗ್ಗೆ ಯಾವುದೇ ತಿರ್ಮಾನವಾಗಲಿಲ್ಲ. ಹಾಗಾಗಿ ರೈತರಿಗೆ ನ್ಯಾಯ ಸಿಗುವವರೆಗೂ ಜಂಟಿ ನಿರ್ದೇಶಕರ ಕಛೇರಿಯ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!