ಮೈಸೂರು ಗ್ರೇಡ್‌ 1 ಪಾಲಿಕೆಗೆ ಮಾರ್ಗಸೂಚಿ ಬದಲಾವಣೆಮಾಡಿದ ಕೇಂದ್ರ.

ಮೈಸೂರು : ಹುಬ್ಬಳ್ಳಿ-ಧಾರವಾಡ ಮಾದರಿಯಂತೆ ಮೈಸೂರು ಮಹಾನಗರ ಪಾಲಿಕೆಯನ್ನು ಗ್ರೇಡ್-1 ಪಾಲಿಕೆಯನ್ನಾಗಿಸಲು ರಾಜ್ಯ ಸರಕಾರ ಮುಂದಾಗಿದೆ.

ಬಿಬಿಎಂಪಿ ಮಾದರಿಯಲ್ಲಿ ಬೃಹತ್ ಮೈಸೂರು ಮಹಾನಗರ ಪಾಲಿಕೆ ಮಾಡಬೇಕೆಂಬ ಪ್ರಸ್ತಾವನೆಯನ್ನು ರಾಜ್ಯ ಸರಕಾರ ಕೈ ಬಿಟ್ಟಿರುವುದರಿಂದ ಗ್ರೇಡ್-1 ಪಾಲಿಕೆಯನ್ನಾಗಿಸಬೇಕೆಂದು ಪಾಲಿಕೆ ಆಯುಕ್ತರು ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಶೀಘ್ರದಲ್ಲಿಯೇ ಅನುಮೋದನೆ ದೊರೆಯುವ ನಿರೀಕ್ಷೆ ಇದೆ. ಜತೆಗೆ ಪಾಲಿಕೆ ಸುತ್ತಲಿನ ಸ್ಥಳೀಯ ಸಂಸ್ಥೆಗಳು ಕೂಡ ಸೇರ್ಪಡೆಯಾಗಲಿವೆ.

ಬೆಂಗಳೂರು-ಮೈಸೂರು ದಶಪಥ ರಸ್ತೆ , ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅಂತಾರಾಷ್ಟ್ರೀಯ ಕ್ರೀಡಾಂಗಣ ಸೇರಿದಂತೆ ನಾನಾ ಯೋಜನೆಗಳ ಅನುಷ್ಠಾನದಿಂದ ಮೈಸೂರು ಪಾಲಿಕೆಯನ್ನು ಬೃಹತ್ ಪಾಲಿಕೆ ಮಾಡಬೇಕೆಂಬ ಚರ್ಚೆ ಶುರುವಾಗಿತ್ತು. ಈ ಹಿನ್ನೆಲೆಯಲ್ಲಿ ಮೈಸೂರಿನ ಹೊರವಲಯದ ಹೂಟಗಳ್ಳಿ ನಗರಸಭೆ, ಶ್ರೀರಾಂಪುರ, ರಮ್ಮನಹಳ್ಳಿ, ಬೋಗಾದಿ, ಕಡಕೊಳ ಪಟ್ಟಣ ಪಂಚಾಯಿತಿಯೊಂದಿಗೆ ಎಂಟು ಗ್ರಾಪಂಗಳನ್ನು ಸೇರಿಸಿಕೊಂಡು ಬೃಹತ್ ಪಾಲಿಕೆಯನ್ನಾಗಿ ರಚನೆ ಮಾಡಲು ಪ್ರಸ್ತಾವನೆ ತಯಾರಿಸಲಾಗಿತ್ತು.

ನಂತರ, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರ ಅಧ್ಯಕ್ಷತೆಯಲ್ಲಿ ಕರೆದಿದ್ದ ಸಭೆಯಲ್ಲಿಪಾಲಿಕೆ ಅಕಾರಿಗಳು ವಿಷಯ ಮಂಡಿಸಲು ಸಿದ್ಧತೆ ಮಾಡಿಕೊಂಡಿದ್ದರು. ಈ ನಡುವೆ ಕಾಂಗ್ರೆಸ್ನ ಕೆಲ ನಾಯಕರು ಸಿಎಂ ಅವರಿಗೆ ಬೃಹತ್ ಪಾಲಿಕೆಯನ್ನಾಗಿ ಮಾಡದಂತೆ ಒತ್ತಡ ಹೇರಿದ್ದರು. ಇದರಿಂದ ಸಿಎಂ ಕೂಡ ಸಭೆ ನಡೆಸಲು ನಿರಾಸಕ್ತಿ ತೋರಿಸಿದ್ದರು. ಬಳಿಕ ಸಿಎಂ ಸೂಚನೆ ಮೇರೆಗೆ ಗ್ರೇಡ್-1 ಪಾಲಿಕೆ ಮಾಡುವ ಸಂಬಂಧ ಪಾಲಿಕೆ ಅಕಾರಿಗಳು ಪ್ರಸ್ತಾವನೆ ಸಿದ್ಧಪಡಿಸಿ ಸರಕಾರಕ್ಕೆ ಸಲ್ಲಿಸಿದ್ದಾರೆ.

ಗ್ರೇಡ್ 1 ಪಾಲಿಕೆಯನ್ನಾಗಿಸಲು ಅಗತ್ಯವಿರುವ 15 ಲಕ್ಷ ಜನಸಂಖ್ಯೆಯನ್ನು ಮೈಸೂರು ಹೊಂದಿದೆ. ಪಾಲಿಕೆ ಸುತ್ತಲಿನ ನಗರ ಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳನ್ನು ಸೇರ್ಪಡೆ ಮಾಡಿಕೊಂಡರೆ 16 ಲಕ್ಷ ಜನಸಂಖ್ಯೆಯಾಗಲಿದೆ.

 

ಸದ್ಯಕ್ಕಿಲ್ಲ ಚುನಾವಣೆ:
2023 ರ ನ. 14 ರಂದು ಜನಪ್ರತಿನಿಗಳ ಆಡಳಿತ ಮುಗಿದಿದ್ದು, ಸದ್ಯಕ್ಕೆ ಚುನಾವಣೆ ನಡೆಯುವುದು ಅನುಮಾನವಾಗಿದೆ. ಗ್ರೇಡ್-1 ಪಾಲಿಕೆ ರಚನೆಯಾದ ನಂತರ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳ್ಳಲು ಅಂದಾಜು ಒಂದು ವರ್ಷವಾದರೂ ಸಮಯ ಬೇಕಾಗುವ ಕಾರಣ ಅಲ್ಲಿಯವರೆಗೆ ಆಕಾಂಕ್ಷಿಗಳು ಕಾಯಬೇಕಿದೆ.

ಜನಸಂಖ್ಯೆ ಕೊರತೆಯಿಂದಾಗಿ ಮೈಸೂರು ಮಹಾ ನಗರ ಪಾಲಿಕೆಯನ್ನು ಬೃಹತ್ ಮಹಾನಗರ ಪಾಲಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿಗ್ರೇಡ್ 1 ಪಾಲಿಕೆಯನ್ನಾಗಿಸಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆ. ಆದಷ್ಟು ಬೇಗ ಪಾಲಿಕೆಯ ಪ್ರಸ್ತಾವನೆಗೆ ಸರಕಾರ ಅನುಮೋದನೆ ನೀಡಿ ಸ್ಥಳೀಯ ಸಂಸ್ಥೆಯ ಚುನಾವಣೆ ನಡೆಸಲಿ -ಜಿ.ಟಿ.ದೇವೇಗೌಡ, ಶಾಸಕ.

ವಿಶೇಷ ಅನುದಾನ:
ಮೈಸೂರು ನಗರ ಪಾಲಿಕೆಯನ್ನು ಗ್ರೇಡ್-1 ಪಾಲಿಕೆಯಾಗಿ ಮೇಲ್ದರ್ಜೆಗೇರಿಸಿದರೆ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಹೆಚ್ಚಿನ ಅನುದಾನ ಸಿಗುವ ಅವಕಾಶವಿರುತ್ತದೆ. ಗ್ರೇಡ್- 1 ಸಿಟಿಗಳಿಗೆ ಸಿಗುವ ವಿಶೇಷ ಸವಲತ್ತುಗಳು ಕೇಂದ್ರದಿಂದ ಸಿಗಲಿದೆ. ಜತೆಗೆ ಪಾಲಿಕೆಯ ವ್ಯಾಪ್ತಿಯ ಪ್ರದೇಶಗಳೊಂದಿಗೆ ಸುತ್ತಲಿನ ಸ್ಥಳೀಯ ಸಂಸ್ಥೆಗಳ ಪ್ರದೇಶಗಳನ್ನು ಸೇರ್ಪಡೆಗೊಳಿಸಲು ಅವಕಾಶವಾಗಲಿದೆ ಎನ್ನುತ್ತಾರೆ ಪಾಲಿಕೆ ಅಧಿಕಾರಿಗಳು.

 

ಮೈಸೂರು ಮಹಾನಗರ ಪಾಲಿಕೆಯನ್ನು ಗ್ರೇಡ್ 1 ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವ ಸಂಬಂಧ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರದಲ್ಲಿಯೇ ಅನುಮೋದನೆ ದೊರೆಯುವ ನಿರೀಕ್ಷೆ ಇದೆ -ದಾಸೇಗೌಡ, ಉಪ ಆಯುಕ್ತ(ಅಭಿವೃದ್ಧಿ), ಮೈಸೂರು ಮಹಾ ನಗರ ಪಾಲಿಕೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!