ಡಿಸಿಎಂ ಡಿಕೆ ಶಿವಕುಮಾರ್ ಜತೆ ಬಹಿರಂಗ ಚರ್ಚೆಗೆ ಸಿದ್ಧ:ತೇಜಸ್ವಿ ಸೂರ್ಯ

ಬೆಂಗಳೂರಿನ ಸುರಂಗ ಮಾರ್ಗ ಯೋಜನೆ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಕಾಂಗ್ರೆಸ್ ನಡುವೆ ವಾಗ್ವಾದ ತೀವ್ರಗೊಂಡಿದೆ. ಯೋಜನೆ ಭ್ರಷ್ಟಾಚಾರದಿಂದ ಕೂಡಿದ್ದು, ಬೆಂಗಳೂರಿಗೆ ಅದರ ಅಗತ್ಯವೇ ಇಲ್ಲ ಎಂದು ಸೂರ್ಯ ಪ್ರತಿಪಾದಿಸಿದರೆ, ಕಾಂಗ್ರೆಸ್ ಯೋಜನೆಯ ಪ್ರಯೋಜನಗಳನ್ನು ಪ್ರತಿಪಾದಿಸುತ್ತಿದೆ. ಈ ಮಧ್ಯೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಬಹಿರಂಗ ಚರ್ಚೆಗೆ ಸೂರ್ಯ ಸವಾಲು ಹಾಕಿದ್ದಾರೆ.

ಬೆಂಗಳೂರು, ಜುಲೈ 17: ಬೆಂಗಳೂರಿನಲ್ಲಿ ಉದ್ದೇಶಿತ ಸುರಂಗ ಮಾರ್ಗ ರಸ್ತೆ ವಿಚಾರವಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಆಡಳಿತರೂಢ ಕಾಂಗ್ರೆಸ್ನಡುವಣ ವಾಕ್ಸಮರ ತೀವ್ರಗೊಂಡಿದೆ. ಯೋಜನೆಯಿಂದ ಬೆಂಗಳೂರಿಗೆ ಏನೂ ಉಪಯೋಗವಿಲ್ಲ, ಬ್ರಹ್ಮಾಂಡ ಭ್ರಷ್ಟಾಚಾರದಿಂದ ಕೂಡಿದೆ ಎಂದು ತೇಜಸ್ವಿ ಸೂರ್ಯ ಎರಡು ದಿನಗಳ ಹಿಂದೆ ಆರೋಪಿಸಿದ್ದರು. ಅಲ್ಲದೆ, ಯೋಜನೆ ಹೇಗೆ ಸಾಧಕವಲ್ಲ ಎಂಬುದನ್ನು ವಿವರವಾಗಿ ಪತ್ರಿಕಾಗೋಷ್ಠಿ ಮೂಲಕ ಬಹಿರಂಗಪಡಿಸಿದ್ದರು.

ಅದಕ್ಕೆ ತಿರುಗೇಟು ನೀಡಿದ್ದ ಕಾಂಗ್ರೆಸ್, ಯೋಜನೆ ಸಂಬಂಧಿತ ಪ್ರಮುಖ ಸಲಹೆ ಸೂಚನೆಗಳಿಗೆ ಸದಾ ಸ್ವಾಗತವಿದೆ. ಆದರೆ, ಬ್ರಾಂಡ್ ಬೆಂಗಳೂರಿನ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಕೇವಲ ರಾಜಕೀಯ ದೃಷ್ಟಿಯಿಂದ ನೋಡಬಾರದು ಎಂದು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸರಣಿ ಸಂದೇಶ ಪ್ರಕಟಿಸುವ ಮೂಲಕ ತಿರುಗೇಟು ನೀಡಿತ್ತು. ಅದಕ್ಕೆ ಪ್ರತಿಕ್ರಿಯಿಸಿರುವ ತೇಜಸ್ವಿ ಸೂರ್ಯ, ಸುರಂಗ ರಸ್ತೆ ಯೋಜನೆಯ ನೇತೃತ್ವ ವಹಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಬಹಿರಂಗ ಚರ್ಚೆಗೆ ಸಿದ್ಧವಿದ್ದೇನೆ ಎಂದಿದ್ದಾರೆ.

ಸುರಂಗ ರಸ್ತೆಗೆ ಸಂಬಂಧಿಸಿದ ತಾಂತ್ರಿಕ ಸಲಹೆ ಮತ್ತು ಸಾರ್ವಜನಿಕ ಚರ್ಚೆಗೆ ನೀವು (ಕಾಂಗ್ರೆಸ್ ಸರ್ಕಾರ) ನಿಜಕ್ಕೂ ಮುಕ್ತರಾಗಿದ್ದರೆ, ಡಿಕೆ ಶಿವಕುಮಾರ್ ಜೊತೆ ಬಹಿರಂಗ ಚರ್ಚೆಗೆ ಪ್ರಸ್ತಾಪಿಸುತ್ತಿದ್ದೇನೆ. ಸಮಯ ಮತ್ತು ಸ್ಥಳವನ್ನು ನೀವೇ ನಿಗದಿ ಮಾಡಿ. ಒಳಿತು ಕೆಡುಕುಗಳನ್ನು ಆರೋಗ್ಯಕರ ರೀತಿಯಲ್ಲಿ ಚರ್ಚಿಸುವುದು ಖಂಡಿತವಾಗಿಯೂ ಪ್ರಯೋಜನಕಾರಿಯಾಗಿದೆ. ನಿಮ್ಮಿಂದ ಪ್ರತಿಕ್ರಿಯೆ ನಿರೀಕ್ಷಿಸುತ್ತಿದ್ದೇನೆ ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!