ದರ್ಶನ್ ನೋಡಲು ಜೈಲೊಳಗೆ ಬಿಡೋದಾದ್ರೆ ಮದುವೆ ಆಗೋದಕ್ಕೂ ರೆಡಿ ಎಂದು ದರ್ಶನ್ ಮಹಿಳಾ ಅಭಿಮಾನಿ ಜೈಲಿನ ಮುಂಭಾಗದಲ್ಲಿ ಹೈಡ್ರಾಮಾ ಮಾಡಿದ ಘಟನೆ ನಡೆದಿದೆ.
ಲಕ್ಷ್ಮೀ ಎಂಬ ಮಹಿಳಾ ಅಭಿಮಾನಿ ದರ್ಶನ್ ನೊಡಲೇಬೇಕು ಅಂತಾ ಬಳ್ಳಾರಿ ಸೆಂಟ್ರಲ್ ಜೈಲ್ ಬಳಿ ಬಂದಿದ್ದಾರೆ. ಬೆಂಗಳೂರಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಹಣ್ಣು ಹಂಪಲು, ಜೊತೆಗೆ ಆಧಾರ್ ಕಾರ್ಡ್ ಹಿಡಿದು ಬಂದಿದ್ದಾರೆ. ಈ ವೇಳೆ ಜೈಲು ಸಿಬ್ಬಂದಿ ಅವರನ್ನು ತಡೆದಿದ್ದಾರೆ.

ಮಾಧ್ಯಮದವರ ಮುಂದೆ ಮಾತನಾಡಿದ ಮಹಿಳಾ ಅಭಿಮಾನಿ, ವಿಜಯಲಕ್ಷ್ಮಿ ತರ ನಾನು ಮದುವೆ ಆಗ್ತಿನಿ, ನನಗೆ ದರ್ಶನ್ ಇಷ್ಟ. ಪರಪ್ಪನ ಅಗ್ರಹಾರಕ್ಕೆ ಹೋದೆ ಅಲ್ಲೂ ಬಿಡಲಿಲ್ಲ.ದರ್ಶನ್ರನ್ನ ನೋಡಲೇಬೇಕು ಹಣ್ಣು ಕೊಟ್ಟು ಮಾತಾಡಿಸಿಕೊಂಡು ಹೋಗುತ್ತೇನೆ ನನ್ನನ್ನು ಜೈಲೊಳಗೆ ಬಿಡಿ ಎಂದು ಜೈಲು ಮುಂಭಾಗ ಪಟ್ಟು ಹಿಡಿದು ಕುಳಿತಿರುವ ಮಹಿಳೆ.
ಜೈಲು ಸಿಬ್ಬಂದಿ ಮಾತಿಗೆ ಜಗ್ಗದ ಮಹಿಳೆ. ನನ್ನ ನೆಚ್ಚಿನ ನಟ ದರ್ಶನ್ ರನ್ನ ನೋಡಲೇಬೇಕು, ಹಣ್ಣು ಕೊಟ್ಟು ಮಾತಾಡಿಸಿ ಹೋಗಲೇಬೇಕು ಅದಕ್ಕಾಗಿ ನಾನು ದರ್ಶನ್ರನ್ನೇ ಮದುವೆಯಾಗಲು ಸಿದ್ಧ ಎನ್ನುತ್ತಿರುವ ಮಹಿಳೆ.





