ಹೇಮಾ ಕಮಿಟಿಯಂತೆ ಕನ್ನಡ ಚಿತ್ರರಂಗದಲ್ಲೂ ಸಮಿತಿ ಮಾಡಿ – ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ ‘ಫೈರ್’ ಸಂಸ್ಥೆ
ಕೇರಳದ ಸಿನಿಮಾ ಇಂಡಸ್ಟ್ರಿಯಲ್ಲಿ ಹೇಮಾ ಕಮಿಟಿ ರಚನೆಯಾದ ಹಾಗೇ ನಮ್ಮಲ್ಲೂ ಕನ್ನಡ ಚಲನ ಚಿತ್ರರಂಗದಲ್ಲೂ ಅಂತಹದೇ ಕಮಿಟಿ ರಚನೆ ಆಗಬೇಕು ಅನ್ನೋ ಕೂಗು ಕೇಳಿ ಬಂದಿದೆ. ಹೇಮಾ ಕಮಿಟಿಯಂತೆ ಕನ್ನಡ ಚಿತ್ರರಂಗದಲ್ಲೂ ಲೈಂಗಿಕ ಕಿರುಕುಳ ತಡೆಗೆ ಸಮಿತಿ ರಚಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ನಟ ಚೇತನ್ ನೇತೃತ್ವದ ‘ಫೈರ್’ ಸಂಸ್ಥೆ ಮೂಲಕ ಮನವಿ ಪತ್ರ ಸಲ್ಲಿಸಿದ್ದಾರೆ.
ಸದ್ಯದಲ್ಲೇ ಸಮಿತಿ ರಚನೆಯ ಕುರಿತು ಚರ್ಚಿಸಿ ನಿರ್ಧಾರಕ್ಕೆ ಬರೋಣ ಎಂದು ಸಿಎಂ ‘ಫೈರ್’ ತಂಡಕ್ಕೆ ಭರವಸೆ ನೀಡಿದ್ದಾರೆ. ಸೆ.10ರ ಬಳಿಕ ಮತ್ತೊಮ್ಮೆ ಸಭೆ ಮಾಡೋಣ ಎಂದು `ಫೈರ್’ ತಂಡಕ್ಕೆ ತಿಳಿಸಿದ್ದಾರೆ. ಇನ್ನೂ ಸಿಎಂ ಜೊತೆಗಿನ ಸಭೆಯಲ್ಲಿ ನಟ ಚೇತನ್ ಜೊತೆ ನೀತು ಶೆಟ್ಟಿ, ಶೃತಿ ಹರಿಹರನ್, ಹಿರಿಯ ಪತ್ರಕರ್ತೆ ವಿಜಯಮ್ಮ ಭಾಗಿಯಾಗಿದ್ದರು.





