ಮೈಸೂರಿನ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಉಪ ಲೋಕಾಯುಕ್ತರ ಭೇಟಿ.!

ಮೈಸೂರು : ಇಂದು ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಅವರು ಕೆಸರೆ ನೀರು ಸಂಸ್ಕರಣಾ ಘಟಕ ಹಾಗೂ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೊದಲು ಕೆಸರೆ ನೀರು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿದ ಉಪ ಲೋಕಾಯುಕ್ತ ಫಣೀಂದ್ರ ನೀರು ಸಂಸ್ಕರಣಾ ಘಟಕದಲ್ಲಿ ಅಳವಡಿಸಿಕೊಂಡಿರುವ ವಿಧಾನ ಹಾಗೂ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಇಲ್ಲಿರುವ ಪ್ರದೇಶದಲ್ಲಿ ಗಿಡ ಗಂಟೆಗಳನ್ನು ತೆರವುಗೊಳಿಸಿ ಹೂವಿನ ಹಾಗೂ ಉತ್ತಮ ಗಿಡಗಳನ್ನು ಹಾಕಿ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಪ್ರತಿ ಹಳ್ಳಿಗಳ ಕಡೆ ಸ್ವಚ್ಚತೆ ಆದ್ಯತೆ ನೀಡಬೇಕು.

ಸ್ವಚ್ಚತೆಯ ಬಗ್ಗೆ ಜನರಲ್ಲಿಯೂ ಜಾಗೃತಿ ಮೂಡಿಸಬೇಕು. ಒಳ ಕಸ ಹಾಗೂ ಹಸಿ ಕಸದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಅದರಂತೆ ಸ್ವಚ್ಚತೆಗೆ ಸಾರ್ವಜನಿಕರಿಂದಲೂ ಅಗತ್ಯ ಸಹಕಾರ ನೀಡಬೇಕು ಎಂದು ತಿಳಿಸಿದರು.

https://www.youtube.com/live/ANuWkKgAP5Y?si=TU8eCq_vAAfSy5U ಸೆಲೆಬ್ರಿಟಿಗಳು, ಗಣ್ಯರು, ರಾಜಕಾರಣಿಗಳಾ ತವರು ಮನೆಯಾದ ಗೌಡಗೆರೆ

ವೈಜ್ಞಾನಿಕ ರೀತಿಯಲ್ಲಿ ತಜ್ಞರಿಂದ ತಪಾಸಣೆ ಮಾಡಿಸಿ ನಂತರ ಉಪ ಲೋಕಾಯುಕ್ತರು ಕೆಸರೆ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಗ್ರಾಮದ ಜನರು ಮನವಿಯ ಮೇರೆಗೆ ವೈಜ್ಞಾನಿಕ ರೀತಿಯಲ್ಲಿ ತಜ್ಞರಿಂದ ತಪಾಸಣೆ ಮಾಡಿಸಿ 5 ಕಿ.ಮೀ ಒಳಗೆ ಯಾವುದಾದರೂ ಮನೆಯಲ್ಲಿನ ಜನರಿಗೆ ಆರೋಗ್ಯ ಸಮಸ್ಯೆ ಹಾಗೂ ಹೋಟೆಲ್ ಗಳಿಗೆ ಜನರಿಗೆ ತೊಂದರೆ ಆಗಿದ್ರೆ ಜಿಲ್ಲಾಧಿಕಾರಿಗಳು ಪರಿಶೀಲನೆ ಮಾಡಿ ವರದಿ ಸಲ್ಲಿಸುವಂತೆ ಸೂಚಿಸಿದರು.

ಘನ ತ್ಯಾಜ್ಯ ನಿರ್ವಹಣಾ ಘಟಕದಿಂದ 500 ಮೀ ಒಳಗೆ ನಿವೇಶನಗಳು ಇದ್ದರೆ ರದ್ದು ಪಡಿಸುವ ಕೆಲಸ ಮಾಡಲಾಗುವುದು. ಇದರಿಂದ ಮಕ್ಕಳಿಗೆ ಹಾಗೂ ಜನರಿಗೆ ವಾಸನೆಯಿಂದ ಆರೋಗ್ಯದಲ್ಲಿ ಸಮಸ್ಯೆ ಆಗುವ ಬಗ್ಗೆ ಪರಿಶೀಲನೆ ಮಾಡಿಸಿ.. ಮುನ್ನೇಚರಿಕೆ ಕ್ರಮವಾಗಿ ಜನರಿಗೆ ಘಟಕದಿಂದ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಎಸ್.ಯುಕೇಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತರಾದ ಶೇಕ್ ತನ್ವಿರ್ ಆಸಿಫ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯಪಾಲಕ ಎಂಜಿನಿಯರ್‌ ಆಸಿಫ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!