ಗುಡ್​ಬಾಯ್ ಅಮ್ಮ! ಎಂದು ಪತ್ರ ಬರೆದು ಸಾವಿಗೆ ಶರಣಾದ ಮಗ.  

ಮೃತ ಬಾಲಕ ಗಂಧಾರ್

ಬೆಂಗಳೂರು: 13 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾದ ಘಟನೆ, ನಗರದ ಸಿ.ಕೆ.ಅಚ್ಚುಕಟ್ಟುವಿನಲ್ಲಿ ನಡೆದಿದೆ. ಇಷ್ಟು ಚಿಕ್ಕ ವಯಸ್ಸಿನಲ್ಲೇ ಇಂಥ ಕಠಿಣ ನಿರ್ಧಾರ ಎಲ್ಲರಲ್ಲೂ ಆತಂಕವನ್ನುಂಟು ಮಾಡಿದೆ.

ಗಂಧಾರ್, ಆತ್ಮಹತ್ಯೆಗೆ ಶರಣಾದ ಬಾಲಕ. ಈತ 7 ನೇ ತರಗತಿ ಓದುತ್ತಿದ್ದ. ಬೆಳಗ್ಗೆ ಎದ್ದ ತಂದೆ ಬಾಲಕ ಮಲಗಿದ್ದ ರೂಮ್​​ಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ‘Forgive Me’ ಎಂದು ಬರೆಯಲಾಗಿರುವ ಡೆತ್ ನೋಟ್ ಸಿಕ್ಕಿದೆ. ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಡೆತ್​ನೋಟ್​ನಲ್ಲಿ ಏನಿದೆ..?

ನಾನು ಮಾಡಿದ ಪಾಪ ಹಾಗೂ ತಪ್ಪನ್ನ ಕ್ಷಮಿಸಿ. ದಯವಿಟ್ಟು ಅಳಬೇಡಿ, ನಾನು ಈಗಾಗಲೇ ಸ್ವರ್ಗದಲ್ಲಿದ್ದೇನೆ. ಮನೆ ಚೆನ್ನಾಗಿರಲಿ ಅಂತಾ ಈ ನಿರ್ಧಾರ ಕೈಗೊಂಡಿದ್ದೇನೆ. ನಂಗೊತ್ತು ನಿಮಗೆ ಕೋಪ ಬರಲು ಕಾರಣನಾಗಿದ್ದೆ. ನನ್ನ ಉದ್ದೇಶ ಸಾವಾಗಿರಲಿಲ್ಲ, ದಯವಿಟ್ಟು ನನ್ನನ್ನು ಕ್ಷಮಿಸಿ. 14 ವರ್ಷ ಖುಷಿಯಾಗಿದ್ದೆ, ಈಗ ಸ್ವರ್ಗದಲ್ಲಿ ಖುಷಿಯಾಗಿದ್ದೇನೆ. ಸ್ನೇಹಿತರೆಲ್ಲರಿಗೂ ಹೇಳಿ, ನಾನು ಖುಷಿಯಾಗಿದ್ದೇನೆ ಎಂದು. ಗುಡ್​ಬಾಯ್ ಅಮ್ಮ ಎಂದು ಪತ್ರ ಬರೆದು ಸಾವಿಗೆ ಶರಣಾಗಿದ್ದಾನೆ.

ಬಾಲಕನ ತಂದೆಯ ಹೆಸರು ಗಣೇಶ್ ಪ್ರಸಾದ್. ಇವರು ಮ್ಯೂಜಿಕ್ ಆರ್ಟಿಸ್ಟ್​. ಹಾಗೂ ತಾಯಿ ಹೆಸರು ಸವಿತಾ, ಇವರು ಜಾನಪದ ಗಾಯಕಿ. ಸವಿತಾ ಅವರು ಕಳೆದ ಶುಕ್ರವಾರ ಕಾರ್ಯಕ್ರಮದ ಮೇಲೆ ಆಸ್ಟ್ರೇಲಿಯಾಗೆ ತೆರಳಿದ್ದಾರೆ. ಹೀಗಾಗಿ ಸವಿತಾ ಬರುವವರೆಗೂ ಮರಣೋತ್ತರ ಪರೀಕ್ಷೆ ನಡೆಸದಿರಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!