ಅಂತಿಮ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿಯಾಗಿ ಗೆಲುವು

ಇಂಗ್ಲೆಂಡ್​ ವಿರುದ್ಧ ನಡೆದ ಅಂತಿಮ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿಯಾಗಿ ಗೆಲುವು ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 2-2 ರಿಂದ ಭಾರತ- ಇಂಗ್ಲೆಂಡ್​ ಸಮಬಲ ಸಾಧಿಸಿವೆ.

ಲಂಡನ್‌ನಲ್ಲಿರುವ ಕೆನ್ನಿಂಗ್ಟನ್‌ನ ಓವಲ್ ಸ್ಟೇಡಿಯಂನಲ್ಲಿ ನಡೆದ 5ನೇ ಟೆಸ್ಟ್​ ಪಂದ್ಯದಲ್ಲಿ ಇಂಗ್ಲೆಂಡ್​ ಕ್ಯಾಪ್ಟನ್​ ಆಲಿ ಪೋಪ್ ಟಾಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದರು. ಹೀಗಾಗಿ ಮೊದಲ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡಿದ್ದ ಶುಭ್​ಮನ್ ಗಿಲ್ ನೇತೃತ್ವದ ಭಾರತ ತಂಡ ಆರಂಭದಲ್ಲಿ ಸಂಕಷ್ಟಕ್ಕೆ ಒಳಗಾಗಿತ್ತು. ಏಕೆಂದರೆ ಜೈಸ್ವಾಲ್​ ಕೇವಲ 2 ರನ್​ಗೆ ಔಟ್ ಆದ್ರೆ ಕನ್ನಡಿಗ ರಾಹುಲ್ ಅವರು ಕೇವಲ 14 ರನ್​ಗಳಿಗೆ ಔಟ್ ಆಗಿ ನಿರಾಸೆ ಮೂಡಿಸಿದ್ದರು.

https://www.youtube.com/live/qNWknyOXIxs?si=kI6c-WUw-4m2I2Shಸೇಟುಗಳಿಗೆ ಸೇಲ್ ಆದ್ರಾ ಮೈಸೂರು ನಗರ ಪಾಲಿಕೆ ಅಧಿಕಾರಿಗಳು! ಚಾಮುಂಡಿ ಪುರಂ ಸರ್ಕಲ್ ನಲ್ಲಿ ಅಕ್ರಮ ಕಟ್ಟಡ!

ನಾಯಕ ಶುಭ್​ಮನ್ ಗಿಲ್ ಕೂಡ 21 ರನ್​ಗೆ ರನೌಟ್ ಆಗಿದ್ದರು. ಧೃವ್ ಜುರೆಲ್ ಹಾಗೂ ವಾಷಿಂಗ್ಟನ್​ ಸುಂದರ್ ಕೆಲ ಸಮಯ ಬ್ಯಾಟಿಂಗ್ ಮಾಡಿದರೂ ಇಂಗ್ಲೆಂಡ್​ ದಾಳಿಗೆ ವಿಕೆಟ್​ ಒಪ್ಪಿಸಿದರು. ಆದರೆ ಇನ್ನೊಬ್ಬ ಕನ್ನಡಿಗ ಕರುಣ್ ನಾಯರ್​ ಅವರ ಅಮೋಘವಾದ ಅರ್ಧಶತಕ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ 224 ರನ್​ಗೆ ಆಲೌಟ್ ಆಗಿತ್ತು.

ಇದಾದ ಮೇಲೆ ಮೊದಲ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್​ ಆರಂಭದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ಮಾಡಿತ್ತು. ಓಪನರ್​ ಜಾಕ್ ಕ್ರಾಲಿ ಅರ್ಧಶತಕ ಬಾರಿಸಿದ್ದರು. ಹ್ಯಾರಿ ಬ್ರೂಕ್​ 53 ರನ್​ ಸಿಡಿಸಿದ್ದರು. ಕೊನೆಯಲ್ಲಿ ಬ್ಯಾಟಿಂಗ್​ನಲ್ಲಿ ವಿಫಲತೆ ಹೆಚ್ಚಾಯಿತು. ಉಳಿದ ಬ್ಯಾಟರ್ಸ್​ ಉತ್ತಮ ಬ್ಯಾಟಿಂಗ್ ಮಾಡದ ಕಾರಣ ಆಂಗ್ಲ ಪಡೆ ಕೇವಲ 247 ರನ್​ಗೆ ಆಲೌಟ್ ಆಗಿತ್ತು. ಆದರೆ ಇನ್ನಿಂಗ್ಸ್​​ನಲ್ಲಿ 23 ರನ್​ಗಳ ಮುನ್ನಡೆ ಕಾಯ್ದುಕೊಂಡಿದ್ದರು.

ನಂತರ 2ನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡಿದ್ದ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಮಾಡಿತ್ತು. ಆರಂಭಿಕ ಬ್ಯಾಟರ್​ ಯಶಸ್ವಿ ಜೈಸ್ವಾಲ್ 118 ರನ್​ಗಳ ಚಚ್ಚಿ ಭಾರತಕ್ಕೆ ನೆರವಾಗಿದ್ದರು. ಇನ್ನು ಈ ಇನ್ನಿಂಗ್ಸ್​ನಲ್ಲೂ ಕೆ.ಎಲ್ ರಾಹುಲ್ (7)​ ವಿಫಲ ಬ್ಯಾಟಿಂಗ್ ಪ್ರದರ್ಶನ ಮಾಡಿದ್ದರು.

Related Posts

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರತ ಕ್ರಿಕೆಟ್ ತಂಡದ ತವರಿನ ಪಂದ್ಯಗಳಿಗೆ ಹೊಸ ಟೈಟಲ್ ಸ್ಪಾನ್ಸರ್ ಹುಡುಕಲು ತೀವ್ರ ಹರಸಾಹಸ ಪಡುತ್ತಿದೆ. ಆಗಸ್ಟ್ 13ರ ಅಂತಿಮ ಗಡುವು ಮುಗಿದಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಬಿಡ್‌ಗಳು ಬಾರದಿರುವುದು ಜಗತ್ತಿನ ಅತಿ ಶ್ರೀಮಂತ ಕ್ರಿಕೆಟ್…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!