ಅಂತಿಮ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿಯಾಗಿ ಗೆಲುವು

ಇಂಗ್ಲೆಂಡ್​ ವಿರುದ್ಧ ನಡೆದ ಅಂತಿಮ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿಯಾಗಿ ಗೆಲುವು ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 2-2 ರಿಂದ ಭಾರತ- ಇಂಗ್ಲೆಂಡ್​ ಸಮಬಲ ಸಾಧಿಸಿವೆ.

ಲಂಡನ್‌ನಲ್ಲಿರುವ ಕೆನ್ನಿಂಗ್ಟನ್‌ನ ಓವಲ್ ಸ್ಟೇಡಿಯಂನಲ್ಲಿ ನಡೆದ 5ನೇ ಟೆಸ್ಟ್​ ಪಂದ್ಯದಲ್ಲಿ ಇಂಗ್ಲೆಂಡ್​ ಕ್ಯಾಪ್ಟನ್​ ಆಲಿ ಪೋಪ್ ಟಾಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದರು. ಹೀಗಾಗಿ ಮೊದಲ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡಿದ್ದ ಶುಭ್​ಮನ್ ಗಿಲ್ ನೇತೃತ್ವದ ಭಾರತ ತಂಡ ಆರಂಭದಲ್ಲಿ ಸಂಕಷ್ಟಕ್ಕೆ ಒಳಗಾಗಿತ್ತು. ಏಕೆಂದರೆ ಜೈಸ್ವಾಲ್​ ಕೇವಲ 2 ರನ್​ಗೆ ಔಟ್ ಆದ್ರೆ ಕನ್ನಡಿಗ ರಾಹುಲ್ ಅವರು ಕೇವಲ 14 ರನ್​ಗಳಿಗೆ ಔಟ್ ಆಗಿ ನಿರಾಸೆ ಮೂಡಿಸಿದ್ದರು.

https://www.youtube.com/live/qNWknyOXIxs?si=kI6c-WUw-4m2I2Shಸೇಟುಗಳಿಗೆ ಸೇಲ್ ಆದ್ರಾ ಮೈಸೂರು ನಗರ ಪಾಲಿಕೆ ಅಧಿಕಾರಿಗಳು! ಚಾಮುಂಡಿ ಪುರಂ ಸರ್ಕಲ್ ನಲ್ಲಿ ಅಕ್ರಮ ಕಟ್ಟಡ!

ನಾಯಕ ಶುಭ್​ಮನ್ ಗಿಲ್ ಕೂಡ 21 ರನ್​ಗೆ ರನೌಟ್ ಆಗಿದ್ದರು. ಧೃವ್ ಜುರೆಲ್ ಹಾಗೂ ವಾಷಿಂಗ್ಟನ್​ ಸುಂದರ್ ಕೆಲ ಸಮಯ ಬ್ಯಾಟಿಂಗ್ ಮಾಡಿದರೂ ಇಂಗ್ಲೆಂಡ್​ ದಾಳಿಗೆ ವಿಕೆಟ್​ ಒಪ್ಪಿಸಿದರು. ಆದರೆ ಇನ್ನೊಬ್ಬ ಕನ್ನಡಿಗ ಕರುಣ್ ನಾಯರ್​ ಅವರ ಅಮೋಘವಾದ ಅರ್ಧಶತಕ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ 224 ರನ್​ಗೆ ಆಲೌಟ್ ಆಗಿತ್ತು.

ಇದಾದ ಮೇಲೆ ಮೊದಲ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್​ ಆರಂಭದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ಮಾಡಿತ್ತು. ಓಪನರ್​ ಜಾಕ್ ಕ್ರಾಲಿ ಅರ್ಧಶತಕ ಬಾರಿಸಿದ್ದರು. ಹ್ಯಾರಿ ಬ್ರೂಕ್​ 53 ರನ್​ ಸಿಡಿಸಿದ್ದರು. ಕೊನೆಯಲ್ಲಿ ಬ್ಯಾಟಿಂಗ್​ನಲ್ಲಿ ವಿಫಲತೆ ಹೆಚ್ಚಾಯಿತು. ಉಳಿದ ಬ್ಯಾಟರ್ಸ್​ ಉತ್ತಮ ಬ್ಯಾಟಿಂಗ್ ಮಾಡದ ಕಾರಣ ಆಂಗ್ಲ ಪಡೆ ಕೇವಲ 247 ರನ್​ಗೆ ಆಲೌಟ್ ಆಗಿತ್ತು. ಆದರೆ ಇನ್ನಿಂಗ್ಸ್​​ನಲ್ಲಿ 23 ರನ್​ಗಳ ಮುನ್ನಡೆ ಕಾಯ್ದುಕೊಂಡಿದ್ದರು.

ನಂತರ 2ನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡಿದ್ದ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಮಾಡಿತ್ತು. ಆರಂಭಿಕ ಬ್ಯಾಟರ್​ ಯಶಸ್ವಿ ಜೈಸ್ವಾಲ್ 118 ರನ್​ಗಳ ಚಚ್ಚಿ ಭಾರತಕ್ಕೆ ನೆರವಾಗಿದ್ದರು. ಇನ್ನು ಈ ಇನ್ನಿಂಗ್ಸ್​ನಲ್ಲೂ ಕೆ.ಎಲ್ ರಾಹುಲ್ (7)​ ವಿಫಲ ಬ್ಯಾಟಿಂಗ್ ಪ್ರದರ್ಶನ ಮಾಡಿದ್ದರು.

Related Posts

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

  ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!