‘ಕರಿಯ 2’ ಚಿತ್ರದ ನಾಯಕ ನಟ ಅನಾರೋಗ್ಯದಿಂದ ನಿಧನ.

‘ಕರಿಯ 2’, ‘ಗಣಪ’, ‘ಕೆಂಪ’ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸಿರುವ ನಟ ಸಂತೋಷ್ ಬಾಲರಾಜ್ ನಿಧನ ಹೊಂದಿದ್ದಾರೆ. ಕಳೆದ ಕೆಲ ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಜಾಂಡೀಸ್ ಆಗಿತ್ತು. ಬನಶಂಕರಿಯ ಸಾಗರ್ ಅಪೊಲೊ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.

ಅವರಿಗೆ 38 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದಷ್ಟೆ ಬನಶಂಕರಿಯ ಸಾಗರ್ ಅಪೋಲೊ ಆಸ್ಪತ್ರೆಗೆ ಅವರು ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದ ಕಾರಣ, ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಂತೋಷ್ ಬಾಲರಾಜ್ ನಿಧನ ಹೊಂದಿದ್ದಾರೆ.

https://youtu.be/CX6-oIcxgPQ?si=zZtsHbWQ_ujIhHD3ಅನಿಲ್ ಚಿಕ್ಕಮಾದು ನಾನ್ ಕಾಂಟ್ರವರ್ಸಿಯಲ್ ಲೀಡರ್… ಅವರ ಹೆಸರಿಗೆ ಮಸಿ ಬಳಿಯುವ ಹುನ್ನಾರ ನಡೆಯುತ್ತಿದೆ

ಸಂತೋಷ್ ಬಾಲರಾಜ್ ಅವರಿಗೆ ಜಾಂಡೀಸ್ ಆಗಿತ್ತು. ಜಾಂಡೀಸ್ ಖಾಯಿಲೆ ಬಾಲರಾಜ್ ಅವರ ದೇಹವನ್ನೆಲ್ಲ ಆವರಿಸಿತ್ತು. ಕಳೆದ ಎರಡು ದಿನದಿಂದಲೂ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು. ಯಕೃತ್ತು ಮತ್ತು ಕಿಡ್ನಿಯ ಸಮಸ್ಯೆಯಿಂದಾಗಿ ಅವರಿಗೆ ಜಾಂಡೀಸ್ ತಗುಲಿತ್ತು. ಈ ಮೊದಲೂ ಸಹ ಸಂತೋಷ್ ಬಾಲರಾಜ್ ಅವರು ಜಾಂಡೀಸ್​ನಿಂದ ಬಳಲಿದ್ದರು. ಆಗ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೆ ಈ ಬಾರಿ ಪರಿಸ್ಥಿತಿ ಕೈ ಮೀರಿ ಹೋಗಿತ್ತು. ಸಂತೋಷ್ ಅವರಿಗೆ ಮದುವೆ ಆಗಿರಲಿಲ್ಲ. ತಾಯಿ ಮತ್ತು ಸಹೋದರಿ ಇದ್ದರು.

‘ಕೆಂಪ’ ಸಿನಿಮಾ ಮೂಲಕ ಸಂತೋಷ್ ಬಾಲರಾಜ್ ಚಿತ್ರರಂಗ ಪ್ರವೇಶಿಸಿದ್ದರು. ಆ ಬಳಿಕ ಅವರು ‘ಕರಿಯ 2’, ‘ಜನ್ಮ’ ಮತ್ತು ‘ಗಣಪ’ ಸಿನಿಮಾಗಳಲ್ಲಿ ನಟಿಸಿದರು. ದರ್ಶನ್ ನಟನೆಯ ‘ಕರಿಯ’ ಸಿನಿಮಾದ ನಿರ್ಮಾಪಕ ಅನೆಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್, ಆನೆಕಲ್ ಬಾಲರಾಜ್ ಅವರು ಕಳೆದ ವರ್ಷವಷ್ಟೆ ನಿಧನ ಹೊಂದಿದರು. ಈಗ ಸಂತೋಷ್ ಸಹ ಇಹಲೋಕ ತ್ಯಜಿಸಿದ್ದಾರೆ. ಸಂತೋಷ್ ನಟನೆಯ ‘ಬರ್ಕ್ಲಿ’ ಮತ್ತು ‘ಸತ್ಯಂ’ ಸಿನಿಮಾಗಳು ಬಿಡುಗಡೆ ಆಗಬೇಕಿವೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು