ಟೀಮ್ ಇಂಡಿಯಾ ಗೆಲ್ಲುತ್ತಿದ್ದಂತೆ ಡ್ರೆಸ್ಸಿಂಗ್ ರೂಮ್​ನಲ್ಲಿ ಗೌತಮ್ ಗಂಭೀರ್ ಸೆಲೆಬ್ರೆಷನ್. ಮೊದಲ ಬಾರಿಗೆ ಕಣ್ಣೀರು ಹಾಕಿದ ಕೋಚ್​ ಗಂಭೀರ್​ ​!

ಟೀಮ್ ಇಂಡಿಯಾ ಕೇವಲ 6 ರನ್​ಗಳಿಂದ ಜಯಭೇರಿ ಬಾರಿಸಿತು. ಮೊಹಮ್ಮದ್ ಸಿರಾಜ್ ಕೊನೆ ವಿಕೆಟ್​ ಕಬಳಿಸುತ್ತಿದ್ದಂತೆ ಡ್ರೆಸಿಂಗ್ ರೂಮ್​ನಲ್ಲಿದ್ದ ಹೆಡ್​ ಕೋಚ್​ ಗೌತಮ್ ಗಂಭೀರ್ ಅಗ್ರೆಸ್ಸಿವ್​ ಆಗಿ ಸಂಭ್ರಮಾಚರಣೆ ಮಾಡಿದರು.

ಟೀಮ್ ಇಂಡಿಯಾದ ಹೆಡ್​ ಕೋಚ್​ ಗೌತಮ್ ಗಂಭೀರ್ ಯಾವಾಗಲೂ ನಗು ಮುಖದಿಂದ ಇರುವವರೇ ಅಲ್ಲ. ಯಾವಾಗಲೂ ಗಂಭೀರವಾದ ಮುಖ ಇಟ್ಟುಕೊಂಡು ತಂಡದಲ್ಲಿ ಕೋಚ್​ ಬೆರೆಯುತ್ತಿದ್ದರು. ಆದರೆ ನಿನ್ನೆ ಟೆಸ್ಟ್​ ಪಂದ್ಯವನ್ನು ಟೀಮ್ ಇಂಡಿಯಾ ಗೆಲ್ಲುತ್ತಿದ್ದಂತೆ ಗೌತಮ್ ಗಂಭೀರ್ ಅವರು ಸೆಲೆಬ್ರೆಷನ್ ಮಾಡಿರೋದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಅವರಲ್ಲಿ ಅಷ್ಟೊಂದು ಖುಷಿಯನ್ನು ಇದೇ ಮೊದಲ ಬಾರಿಗೆ ಸಾಕಷ್ಟು ಕ್ರಿಕೆಟ್​ ಅಭಿಮಾನಿಗಳು ನೋಡಿದ್ದಾರೆ ಎನ್ನಬಹುದು.

https://www.goodnews24x7.com/kannada-veteran-actor-honnavalli-krishna-also-affected-by-the-transport-workers-strike-bus-bandh-is-hot/ ಕನ್ನಡ ಹಿರಿಯ ನಟ ಹೊನ್ನವಳ್ಳಿ ಕೃಷ್ಣಗೂ ತಟ್ಟಿದೆ ಸಾರಿಗೆ ನೌಕರರ ಮುಷ್ಕರದ ಬಸ್​ ಬಂದ್​ ಬಿಸಿ!

ಲಂಡನ್‌ನಲ್ಲಿರುವ ಕೆನ್ನಿಂಗ್ಟನ್‌ನ ಓವಲ್ ಸ್ಟೇಡಿಯಂನಲ್ಲಿ ನಡೆದ 5ನೇ ಟೆಸ್ಟ್​ ಪಂದ್ಯದ ಕೊನೆ ದಿನದಲ್ಲಿ ಟೀಮ್ ಇಂಡಿಯಾ ಕೇವಲ 6 ರನ್​ಗಳಿಂದ ಜಯಭೇರಿ ಬಾರಿಸಿತು. ಮೊಹಮ್ಮದ್ ಸಿರಾಜ್ ಕೊನೆ ವಿಕೆಟ್​ ಕಬಳಿಸುತ್ತಿದ್ದಂತೆ ಡ್ರೆಸಿಂಗ್ ರೂಮ್​ನಲ್ಲಿದ್ದ ಹೆಡ್​ ಕೋಚ್​ ಗೌತಮ್ ಗಂಭೀರ್ ಅಗ್ರೆಸ್ಸಿವ್​ ಆಗಿ ಸಂಭ್ರಮಾಚರಣೆ ಮಾಡಿದರು. ಈ ವಿಡಿಯೋವನ್ನು ಬಿಸಿಸಿಐ ತನ್ನ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದೆ.

ಮೈದಾನದಲ್ಲಿ ಗಿಲ್ ಪಡೆ ಜಯ ಸಾಧಿಸುತ್ತಿದ್ದಂತೆ ಡ್ರೆಸ್ಸಿಂಗ್ ರೂಮ್​ನಲ್ಲಿ ಗೌತಮ್ ಗಂಭೀರ್ ಸೆಲೆಬ್ರೆಷನ್ ಮಾಡುತ್ತ ಮಾರ್ನ್​ ಮಾರ್ಕೆಲ್​ ಅವರ ಮೇಲೆ ಜಂಪ್ ಮಾಡಿ ಖುಷಿ ಪಟ್ಟರು. ಅಲ್ಲಿದ್ದ ಎಲ್ಲರನ್ನು ತಬ್ಬಿಕೊಂಡು, ಕೈಕುಲುಕಿ ಸಂತಸಪಟ್ಟರು. ಇದೇ ವೇಳೆ ಗೌತಮ್ ಗಂಭೀರ್ ಕಣ್ಣಿನಿಂದ ನೀರು ಕೂಡ ಬಂತು. ತುಂಬಾ ಭಾವನಾತ್ಮಕರಾಗಿದ್ದ ಗಂಭೀರ್ ಅತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕೋಚ್​ ಈ ರೀತಿ ಕಣ್ಣೀರು ಹಾಕಿದ್ದು ಇದೇ ಮೊದಲ ಬಾರಿ ಆಗಿದೆ.

ಅಂತಿಮ ಟೆಸ್ಟ್​ನಲ್ಲಿ ಜಯಗಳಿಸಿದ ಬಳಿಕ ​​ಗೌತಮ್​ ಗಂಭೀರ್​, ಇಂಗ್ಲೆಂಡ್​ ಹೆಡ್​ಕೋಚ್​ ಬ್ರೆಂಡನ್​ ಮೆಕಲಮ್​ ಪರಸ್ಪರ ಅಭಿನಂದನೆ ಸಲ್ಲಿಸಿದ್ದಾರೆ. ಗೆಲುವಿನ ಬಳಿಕ ಡ್ರೆಸ್ಸಿಂಗ್​ರೂಮ್​ನಿಂದ ನೇರವಾಗಿ ಮೆಕಲಮ್​ ಬಳಿ ತೆರಳಿರೋ ಗಂಭೀರ್​ ಹಸ್ತಲಾಘವ ನೀಡಿದ್ದಾರೆ. ಆ ಬಳಿಕ ಇಬ್ಬರೂ ತಬ್ಬಿಕೊಂಡಿದ್ದಾರೆ. ಹೆಡ್​​ಕೋಚ್​ಗಳ ಸಮಾಗಮದ ವಿಡಿಯೋ ಇಂಟರ್​ನೆಟ್​ನಲ್ಲಿ ವೈರಲ್​ ಆಗಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!