ದಸರಾ ಗಜಪಡೆ, ಮಾವುತರಿಗೆ 2.04 ಕೋಟಿ ರೂ. ಮೊತ್ತದ ವಿಮೆ! ಅರಣ್ಯ ಇಲಾಖೆ ಸೌಲಭ್ಯ.

ಮೈಸೂರು ದಸರಾ 2025ರ ಗಜಪಡೆ, ಮಾವುತರು ಮತ್ತು ಸಿಬ್ಬಂದಿಗೆ ಒಟ್ಟು 2.04 ಕೋಟಿ ರೂ ವಿಮಾ ಸೌಲಭ್ಯ ಒದಗಿಸಲಾಗಿದೆ. ಆನೆಗಳಿಗೆ 68 ಲಕ್ಷ ರೂ, ಸಿಬ್ಬಂದಿಗೆ 86 ಲಕ್ಷ ರೂ ಮತ್ತು ಸಾರ್ವಜನಿಕ ಹಾನಿಗೆ 50 ಲಕ್ಷ ರೂ ವಿಮೆ ಒಳಗೊಂಡಿದೆ. ಈ ವಿಮಾ ಪಾಲಿಸಿಯು ಆಗಸ್ಟ್ 4 ರಿಂದ ಅಕ್ಟೋಬರ್ 5 ರವರೆಗೆ ಜಾರಿಯಿರಲಿದೆ. ಮೈಸೂರು ದಸರಾ ಗಜಪಡೆ, ಮಾವುತರಿಗೆ 2.04 ಕೋಟಿ ರೂ. ಮೊತ್ತದ ವಿಮೆ ಸೌಲಭ್ಯ ನೀಡಿದ ಅರಣ್ಯ ಇಲಾಖೆ

ಮೈಸೂರು, ಆಗಸ್ಟ್​ 06: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗಜಪಡೆ ಕಲರವ ಜೋರಾಗಿದೆ. ನಾಡಹಬ್ಬ ದಸರಾ (Mysuru Dasara) ಮಹೋತ್ಸವಕ್ಕೆ ಮೈಸೂರಿಗೆ ಬಂದ ಕ್ಯಾಪ್ಟನ್ ಅಭಿಮನ್ಯು ಆ್ಯಂಡ್​ ತಂಡ ರಿಲ್ಯಾಕ್ಸ್ ಮೂಡ್‌ನಲ್ಲಿವೆ. ಗಜಪಡೆ ಅರಣ್ಯ ಭವನದಲ್ಲಿ ವಿಶ್ರಾಂತಿ ಪಡೆಯುತ್ತಿವೆ‌. ಈ ಗಜಪಡೆ ಮೈಸೂರಿನಲ್ಲಿರುವಾಗ ಏನಾದರೂ ಹಾನಿ ಸಂಭವಿಸಿದರೆ ಅದರ ನಷ್ಟ ಪರಿಹರಿಸಲು ಅರಣ್ಯ ಇಲಾಖೆಯಿಂದ ಮಾವುತರು, ಕಾವಾಡಿಗಳು ಮತ್ತು ಉಸ್ತುವಾರಿ ಸಿಬ್ಬಂದಿಗೆ 2.04 ಕೋಟಿ ರೂ. ಮೊತ್ತದ ವಿಮೆ (Insurance) ಸೌಲಭ್ಯ ಒದಗಿಸಲಾಗಿದೆ.

2.04 ಕೋಟಿ ರೂ. ಮೊತ್ತದ ವಿಮೆ
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ದಿನಗಣನೆ ಶುರುವಾಗಿದೆ. ಇತ್ತ ಗಜಪಡೆ ಕೂಡ ಮೈಸೂರಿಗೆ ಬಂದಿದೆ. ಈ ಗಜಪಡೆ ಮೈಸೂರಲ್ಲಿರುವಾಗ ಏನಾದರೂ ಹಾನಿ ಸಂಭವಿಸಿದರೆ ಅದರ ನಷ್ಟ ಪರಿಹರಿಸಲು ಅರಣ್ಯ ಇಲಾಖೆಯಿಂದ ವಿಮಾ ಸೌಲಭ್ಯದ ಮೊರೆ ಹೋಗಲಾಗಿದೆ. ಆಗಸ್ಟ್​ 4ರಿಂದ ಅಕ್ಟೋಬರ್​​ 5ರವರೆಗೆ ಈ ಸುರಕ್ಷತೆ ಚಾಲ್ತಿಯಲ್ಲಿರಲಿದೆ. ಟೆಂಡರ್‌ ಮೂಲಕ ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್​ ಕಂಪನಿ ಲಿಮಿಟೆಡ್ ವಿಮೆ ಸೌಲಭ್ಯ ಮಾಡಿಸಲಾಗಿದೆ.

ಬೆಳಗಿನ ಜಾವದಿಂದಲೇ ದೇವಿದರ್ಶನಕ್ಕಾಗಿ ಸಾಲುಗಟ್ಟಿರುವ ಭಕ್ತರು
ದಸರಾ ಗಜಪಡೆಯ 14 ಆನೆಗಳ ಪೈಕಿ ಈ ಬಾರಿ 10 ಗಂಡಾನೆಗಳಿವೆ. ಈ ಗಂಡಾನೆಗಳಿಗೆ ತಲಾ 5 ಲಕ್ಷ ರೂ, 4 ಹೆಣ್ಣಾನೆಗಳಿಗೆ ತಲಾ 4.5 ಲಕ್ಷ ರೂ. 14 ಆನೆಗಳಿಗೆ ಒಟ್ಟು 68 ಲಕ್ಷ ರೂ. ಮೊತ್ತದ ವಿಮೆ ಮಾಡಿಸಲಾಗಿದೆ. 14 ಮಾವುತರು, 14 ಕಾವಾಡಿಗಳು, ಡಿಸಿಎಫ್, ಇಬ್ಬರು ಆರ್‌ಎಫ್‌ಓ, ಪಶುವೈದ್ಯಾಧಿಕಾರಿ, ಓರ್ವ ಸಹಾಯಕರು, 10 ಮಂದಿ ವಿಶೇಷ ಮಾವುತರು ಸೇರಿ ಒಟ್ಟು 43 ಮಂದಿಗೆ ತಲಾ 2 ಲಕ್ಷ ರೂ.ನಂತೆ 86 ಲಕ್ಷ ರೂ. ಮೊತ್ತದ ವಿಮೆ ಸೌಲಭ್ಯ ನೀಡಲಾಗಿದೆ.

ಮೈಸೂರಿನಲ್ಲಿ ದಸರಾ ಆನೆಗಳಿಂದ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶ ಅಥವಾ ಸಾರ್ವಜನಿಕರಿಗೆ ತೊಂದರೆಯಾದರೆ ನಷ್ಟ ಭರಿಸಲು 50 ಲಕ್ಷ ರೂ. ಒಟ್ಟು 2.04 ಕೋಟಿ ರೂ. ಮೊತ್ತದ ವಿಮೆ ಮಾಡಿಸಿದ್ದು, ಇದಕ್ಕೆ ಅರಣ್ಯ ಇಲಾಖೆಯಿಂದ 67 ಸಾವಿರ ರೂ ಪ್ರಿಮಿಯಂ ಮೊತ್ತ ಪಾವತಿ ಮಾಡಲಾಗುವುದು.

ಅಭಿಮನ್ಯು ನೇತೃತ್ವದ 9 ಆನೆಗಳ ಮೊದಲ ತಂಡ ಮೈಸೂರಿಗೆ ಬರ್ತಿದ್ದಂತೆಯೇ, ರಕ್ತ ಪರೀಕ್ಷೆ ಮಾಡಲಾಗಿದ್ದು, ಎಲ್ಲಾ ಆನೆಗಳು ಆರೋಗ್ಯವಾಗಿವೆ. ಆಗಸ್ಟ್​ 10ರಂದು ದಸರಾ ಗಜಪಡೆ ಮೈಸೂರು ಅರಮನೆಗೆ ಎಂಟ್ರಿ ಕೊಡಲಿವೆ. ಇದೇ ಮೂದಲ ಬಾರಿಗೆ ಸಂಜೆ ವೇಳೆ ಗಜಪಡೆಯನ್ನ ಅರಮನೆಗೆ ಸ್ವಾಗತಿಸಲಾಗುತ್ತಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!