ಬೆಂಗಳೂರಿನ ಸೀರೆ ಮಳಿಗೆಯಲ್ಲಿ ಗಮನ ಸೆಳೆದ ಚಾಟ್ ಜಿಪಿಟಿ ಪ್ರೇರಿತ ಜಾಹೀರಾತು.

ಪ್ರತಿಯೊಂದು ಮಳಿಗೆಗಳು, ಬ್ರ್ಯಾಂಡ್‌ಗಳು ತಮ್ಮ ಉತ್ಪನ್ನಗಳನ್ನು ಪ್ರಚಾರ ಮಾಡಲು ವಿಶಿಷ್ಟ ರೀತಿಯ ಮಾರುಕಟ್ಟೆ ತಂತ್ರಗಳನ್ನು ಬಳಸುತ್ತವೆ. ಆದರೆ ಬೆಂಗಳೂರಿನ ನಾವೀನ್ಯತೆಯನ್ನು ಪ್ರದರ್ಶಿಸುವ ಈ ಸೀರೆ ಅಂಗಡಿಯೂ ಗ್ರಾಹಕರನ್ನು ಸೆಳೆಯಲು ತಂತ್ರಜ್ಞಾನವನ್ನು ಬಳಸಿಕೊಂಡು ವಿಶಿಷ್ಟವಾಗಿ ಜಾಹೀರಾತು ನೀಡಿದೆ. ಚಾಟ್ ಜಿಪಿಟಿ ಪ್ರೇರಿತ ಮೊಬೈಲ್ ಡಿಸ್ಪ್ಲೇ ವಿನ್ಯಾಸ ಹೊಂದಿರುವ ಜಾಹೀರಾತನ್ನು ಬಳಸಿಕೊಂಡು ಗ್ರಾಹಕರ ಗಮನ ಸೆಳೆದಿದೆ. ಇದೀಗ ಕೃತಕ ಬುದ್ಧಿ ಮತ್ತೆ ಆಧಾರಿತ ಡಿಸ್ಪ್ಲೇ ಜಾಹೀರಾತು ತಂತ್ರಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ.

ಬೆಂಗಳೂರು ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಯೊಂದು ಬ್ರ್ಯಾಂಡ್‌ ಮಾರುಕಟ್ಟೆಯಲ್ಲಿ ಜನರಿಗೆ ಹತ್ತಿರವಾಗಬೇಕೆಂದು ನಾನಾ ರೀತಿಯ ಕಸರತ್ತು ಮಾಡುತ್ತವೆ. ಬಗೆ ಬಗೆಯ ಕ್ರಿಯೇಟಿವ್‌ ಮಾರುಕಟ್ಟೆ ತಂತ್ರಗಳನ್ನು ಅನುಸರಿಸುತ್ತದೆ. ಗ್ರಾಹಕರನ್ನು ಆಕರ್ಷಿಸಲು ವಿಭಿನ್ನ ರೀತಿಯ ಜಾಹೀರಾತನ್ನು ನೀಡುತ್ತವೆ. ಆದರೆ ಇಂದಿನ ತಂತ್ರಜ್ಞಾನದ ಯುಗದಲ್ಲಿ ಬೆಂಗಳೂರಿನ ಸೀರೆ ಅಂಗಡಿಯೊಂದು ಚಾಟ್ ಜಿಪಿಟಿಯನ್ನೇ (Chat GPT) ಜಾಹೀರಾತಿನ ಭಾಗವಾಗಿ ಬಳಸಿಕೊಂಡಿವೆ. ಅದೇಗೆ ಅಂತೀರಾ?. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಾಟ್ ಜಿಪಿಟಿ ಪ್ರೇರಿತ ಮೊಬೈಲ್ ಡಿಸ್ಪ್ಲೇ ವಿನ್ಯಾಸವನ್ನು ಹೊಂದಿರುವ ವಿಶಿಷ್ಟ ಜಾಹೀರಾತಿನ ಮೂಲಕ ಗ್ರಾಹಕರ ಗಮನ ಸೆಳೆಯುವ ಪ್ರಯತ್ನ ಮಾಡಿದೆ. ಈ ಪೋಸ್ಟ್ ವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

https://youtu.be/JXlm7kaxoDo?si=4nrAgDYfXpkNXwNZಧರ್ಮಸ್ಥಳದಲ್ಲಿ ಸಮಾಧಿ ಅಗೆಯೋ 2ನೇ ದಿನದ ಕಾರ್ಯಾಚರಣೆ ಆರಂಭ… ಧರ್ಮಸ್ಥಳ ಕಾಡಿನಲ್ಲಿ ಶ*ವಗಳ ಹುಡುಕಾಟ!

@os7borne ಹೆಸರಿನ ಎಕ್ಸ್ ಖಾತೆಯಲ್ಲಿ ಜಾಹೀರಾತಿನ ಈ ಫೋಟೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ChatGPT ಪರದೆಯಲ್ಲಿ “ವರಮಹಾಲಕ್ಷ್ಮಿ ಹಬ್ಬವನ್ನು ಏಕೆ ಆಚರಿಸಲಾಗುತ್ತದೆ?” ಎಂದು ಹೇಳುವ ChatGPT ಮೊಬೈಲ್ ಇಂಟರ್ಫೇಸ್ ಬಳಸಿರುವುದನ್ನು ನೀವಿಲ್ಲಿ ನೋಡಬಹುದು. ತಂತ್ರಜ್ಞಾನವನ್ನೇ ಬಳಸಿಕೊಂಡು ಗ್ರಾಹಕರ ಗಮನ ಸೆಳೆಯುವ ಪ್ರಯತ್ನವಿದು ಎನ್ನುವುದು ಇಲ್ಲಿ ಸ್ಪಷ್ಟವಾಗಿದೆ.
ಈ ಫೋಟೋ ಹಂಚಿಕೊಂಡ ಬಳಕೆದಾರ ಬೆಂಗಳೂರಿನ ಸ್ಥಳೀಯ ಸೀರೆ ಅಂಗಡಿಯಲ್ಲಿ ಜಾಹೀರಾತಿಗಾಗಿ ChatGPT ಮೊಬೈಲ್ ಇಂಟರ್ಫೇಸ್ ಬಳಸುವುದು ಇದೇ ಮೊದಲು. ಇದಕ್ಕೂ ಮೊದಲು, ಇದು Google ಹುಡುಕಾಟ ಪಟ್ಟಿಯ ವಿನ್ಯಾಸವಾಗಿತ್ತು. ಇಂತಹದ್ದೆಲ್ಲವನ್ನು ಬೆಂಗಳೂರಿನಲ್ಲಿ ಮಾತ್ರ ಸಾಧ್ಯ ಎಂದು ನಾನು ಭಾವಿಸುತ್ತೇನೆ” ಎಂದು ಹೀಗೆ ಬರೆದುಕೊಂಡಿದ್ದಾರೆ.

ಈ ಪೋಸ್ಟ್ ಎಂಟು ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು ಬಳಕೆದಾರರೊಬ್ಬರು, ಅದ್ಭುತ, ಇಂತಹ ಬದಲಾವಣೆಯೂ ಬೆಂಗಳೂರಿನಲ್ಲಿ ಆರಂಭವಾಗುತ್ತದೆ ಎಂದಿದ್ದಾರೆ. ಇನ್ನೊಬ್ಬರು, ಸ್ಥಳೀಯರು ಸೀರೆ ಅಂಗಡಿಗೆ ನಿಯಮಿತವಾಗಿ ಭೇಟಿ ನೀಡುವುದನ್ನು ಪ್ರೋತ್ಸಾಹಿಸುವುದೇ ಇದರ ಮೂಲ ಉದ್ದೇಶ ಎಂದು ಕಾಮೆಂಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತ್ರ ಸೀರೆ ಅಂಗಡಿ ಹಾಗೂ ಆಟೋ ಚಾಲಕ ಈ ರೀತಿ ತಂತ್ರಜ್ಞಾನ ಬಳಸಿ ವೈರಲ್ ಆಗಬಹುದು ಎಂದು ಹೇಳಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!