ಬೆಂಗಳೂರಿನ ಸೀರೆ ಮಳಿಗೆಯಲ್ಲಿ ಗಮನ ಸೆಳೆದ ಚಾಟ್ ಜಿಪಿಟಿ ಪ್ರೇರಿತ ಜಾಹೀರಾತು.

ಪ್ರತಿಯೊಂದು ಮಳಿಗೆಗಳು, ಬ್ರ್ಯಾಂಡ್‌ಗಳು ತಮ್ಮ ಉತ್ಪನ್ನಗಳನ್ನು ಪ್ರಚಾರ ಮಾಡಲು ವಿಶಿಷ್ಟ ರೀತಿಯ ಮಾರುಕಟ್ಟೆ ತಂತ್ರಗಳನ್ನು ಬಳಸುತ್ತವೆ. ಆದರೆ ಬೆಂಗಳೂರಿನ ನಾವೀನ್ಯತೆಯನ್ನು ಪ್ರದರ್ಶಿಸುವ ಈ ಸೀರೆ ಅಂಗಡಿಯೂ ಗ್ರಾಹಕರನ್ನು ಸೆಳೆಯಲು ತಂತ್ರಜ್ಞಾನವನ್ನು ಬಳಸಿಕೊಂಡು ವಿಶಿಷ್ಟವಾಗಿ ಜಾಹೀರಾತು ನೀಡಿದೆ. ಚಾಟ್ ಜಿಪಿಟಿ ಪ್ರೇರಿತ ಮೊಬೈಲ್ ಡಿಸ್ಪ್ಲೇ ವಿನ್ಯಾಸ ಹೊಂದಿರುವ ಜಾಹೀರಾತನ್ನು ಬಳಸಿಕೊಂಡು ಗ್ರಾಹಕರ ಗಮನ ಸೆಳೆದಿದೆ. ಇದೀಗ ಕೃತಕ ಬುದ್ಧಿ ಮತ್ತೆ ಆಧಾರಿತ ಡಿಸ್ಪ್ಲೇ ಜಾಹೀರಾತು ತಂತ್ರಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ.

ಬೆಂಗಳೂರು ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಯೊಂದು ಬ್ರ್ಯಾಂಡ್‌ ಮಾರುಕಟ್ಟೆಯಲ್ಲಿ ಜನರಿಗೆ ಹತ್ತಿರವಾಗಬೇಕೆಂದು ನಾನಾ ರೀತಿಯ ಕಸರತ್ತು ಮಾಡುತ್ತವೆ. ಬಗೆ ಬಗೆಯ ಕ್ರಿಯೇಟಿವ್‌ ಮಾರುಕಟ್ಟೆ ತಂತ್ರಗಳನ್ನು ಅನುಸರಿಸುತ್ತದೆ. ಗ್ರಾಹಕರನ್ನು ಆಕರ್ಷಿಸಲು ವಿಭಿನ್ನ ರೀತಿಯ ಜಾಹೀರಾತನ್ನು ನೀಡುತ್ತವೆ. ಆದರೆ ಇಂದಿನ ತಂತ್ರಜ್ಞಾನದ ಯುಗದಲ್ಲಿ ಬೆಂಗಳೂರಿನ ಸೀರೆ ಅಂಗಡಿಯೊಂದು ಚಾಟ್ ಜಿಪಿಟಿಯನ್ನೇ (Chat GPT) ಜಾಹೀರಾತಿನ ಭಾಗವಾಗಿ ಬಳಸಿಕೊಂಡಿವೆ. ಅದೇಗೆ ಅಂತೀರಾ?. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಾಟ್ ಜಿಪಿಟಿ ಪ್ರೇರಿತ ಮೊಬೈಲ್ ಡಿಸ್ಪ್ಲೇ ವಿನ್ಯಾಸವನ್ನು ಹೊಂದಿರುವ ವಿಶಿಷ್ಟ ಜಾಹೀರಾತಿನ ಮೂಲಕ ಗ್ರಾಹಕರ ಗಮನ ಸೆಳೆಯುವ ಪ್ರಯತ್ನ ಮಾಡಿದೆ. ಈ ಪೋಸ್ಟ್ ವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

https://youtu.be/JXlm7kaxoDo?si=4nrAgDYfXpkNXwNZಧರ್ಮಸ್ಥಳದಲ್ಲಿ ಸಮಾಧಿ ಅಗೆಯೋ 2ನೇ ದಿನದ ಕಾರ್ಯಾಚರಣೆ ಆರಂಭ… ಧರ್ಮಸ್ಥಳ ಕಾಡಿನಲ್ಲಿ ಶ*ವಗಳ ಹುಡುಕಾಟ!

@os7borne ಹೆಸರಿನ ಎಕ್ಸ್ ಖಾತೆಯಲ್ಲಿ ಜಾಹೀರಾತಿನ ಈ ಫೋಟೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ChatGPT ಪರದೆಯಲ್ಲಿ “ವರಮಹಾಲಕ್ಷ್ಮಿ ಹಬ್ಬವನ್ನು ಏಕೆ ಆಚರಿಸಲಾಗುತ್ತದೆ?” ಎಂದು ಹೇಳುವ ChatGPT ಮೊಬೈಲ್ ಇಂಟರ್ಫೇಸ್ ಬಳಸಿರುವುದನ್ನು ನೀವಿಲ್ಲಿ ನೋಡಬಹುದು. ತಂತ್ರಜ್ಞಾನವನ್ನೇ ಬಳಸಿಕೊಂಡು ಗ್ರಾಹಕರ ಗಮನ ಸೆಳೆಯುವ ಪ್ರಯತ್ನವಿದು ಎನ್ನುವುದು ಇಲ್ಲಿ ಸ್ಪಷ್ಟವಾಗಿದೆ.
ಈ ಫೋಟೋ ಹಂಚಿಕೊಂಡ ಬಳಕೆದಾರ ಬೆಂಗಳೂರಿನ ಸ್ಥಳೀಯ ಸೀರೆ ಅಂಗಡಿಯಲ್ಲಿ ಜಾಹೀರಾತಿಗಾಗಿ ChatGPT ಮೊಬೈಲ್ ಇಂಟರ್ಫೇಸ್ ಬಳಸುವುದು ಇದೇ ಮೊದಲು. ಇದಕ್ಕೂ ಮೊದಲು, ಇದು Google ಹುಡುಕಾಟ ಪಟ್ಟಿಯ ವಿನ್ಯಾಸವಾಗಿತ್ತು. ಇಂತಹದ್ದೆಲ್ಲವನ್ನು ಬೆಂಗಳೂರಿನಲ್ಲಿ ಮಾತ್ರ ಸಾಧ್ಯ ಎಂದು ನಾನು ಭಾವಿಸುತ್ತೇನೆ” ಎಂದು ಹೀಗೆ ಬರೆದುಕೊಂಡಿದ್ದಾರೆ.

ಈ ಪೋಸ್ಟ್ ಎಂಟು ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು ಬಳಕೆದಾರರೊಬ್ಬರು, ಅದ್ಭುತ, ಇಂತಹ ಬದಲಾವಣೆಯೂ ಬೆಂಗಳೂರಿನಲ್ಲಿ ಆರಂಭವಾಗುತ್ತದೆ ಎಂದಿದ್ದಾರೆ. ಇನ್ನೊಬ್ಬರು, ಸ್ಥಳೀಯರು ಸೀರೆ ಅಂಗಡಿಗೆ ನಿಯಮಿತವಾಗಿ ಭೇಟಿ ನೀಡುವುದನ್ನು ಪ್ರೋತ್ಸಾಹಿಸುವುದೇ ಇದರ ಮೂಲ ಉದ್ದೇಶ ಎಂದು ಕಾಮೆಂಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತ್ರ ಸೀರೆ ಅಂಗಡಿ ಹಾಗೂ ಆಟೋ ಚಾಲಕ ಈ ರೀತಿ ತಂತ್ರಜ್ಞಾನ ಬಳಸಿ ವೈರಲ್ ಆಗಬಹುದು ಎಂದು ಹೇಳಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!