ಲಕ್ಷ ಲಕ್ಷ ಹಣ ವಂಚನೆ ಆರೋಪ : ಸಂಸದ ಡಾ.ಕೆ.ಸುಧಾಕರ್ ಕಾರಣ ಎಂದು ಹೆಸರು ಬರೆದು ಜೀವ ಬಿಟ್ಟ ವ್ಯಕ್ತಿ..

ನಗರದ ಭಾಪೂಜಿನಗರ ನಿವಾಸಿಯೊಬ್ಬರು ನೇಣು ಬಿಗಿದುಕೊಂಡು ಜೀವ ತೆಗೆದುಕೊಂಡಿದ್ದಾರೆ. ಇವರು ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ನನ್ನ ಈ ಸ್ಥಿತಿಗೆ ಮೂವರು ಕಾರಣ ಎಂದು ಬರೆದಿದ್ದಾರೆ.

ಚಿಕ್ಕಬಳ್ಳಾಪುರ: ಜಿಲ್ಲಾಡಳಿತ ಭವನದ ಆವರಣದಲ್ಲೇ ವ್ಯಕ್ತಿಯೊಬ್ಬರು ನೇಣು ಬಿಗಿದು ಜೀವ ತೆಗೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಡೆತ್​​ನೋಟ್ ಬರೆದಿಟ್ಟಿದ್ದು ಇದರಲ್ಲಿ ಸಂಸದ ಡಾ.ಕೆ ಸುಧಾಕರ್ ಹೆಸರನ್ನು ಉಲ್ಲೇಖ ಮಾಡಿ ಆರೋಪಿಸಲಾಗಿದೆ.

ಚಿಕ್ಕಬಳ್ಳಾಪುರ ಸಿಟಿಯ ಭಾಪೂಜಿನಗರ ನಿವಾಸಿ ಬಾಬು (30) ಎನ್ನುವರು ನೇಣು ಬಿಗಿದುಕೊಂಡು ಜೀವ ತೆಗೆದುಕೊಂಡವರು. ಇವರು ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ನನ್ನ ಈ ಸ್ಥಿತಿಗೆ ಮೂವರು ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.

https://www.goodnews24x7.com/have-you-ever-seen-a-dog-fasting-netizens-are-in-awe-of-this-dogs-devotion-to-lord-shiva/? ಎಂದಾದರೂ ಶ್ವಾನ ಉಪವಾಸ ಮಾಡುವುದನ್ನು ನೋಡಿದ್ದೀರಾ? ಈ ಶ್ವಾನದ ಶಿವ ಭಕ್ತಿಗೆ ನೆಟ್ಟಿಗರು ಫಿದಾ !

ನಾನು ಈ ಸ್ಥಿತಿಗೆ ಬರಲು ಸಂಸದ ಡಾ.ಕೆ.ಸುಧಾಕರ್, ಲೆಕ್ಕ ಪರಿಶೋಧಕ ಮಂಜುನಾಥ್ ಹಾಗೂ ಎನ್​ಎನ್​ಆರ್​ ಟ್ರಾವೆಲ್ಸ್ ನಾಗೇಶ್ ಕಾರಣ ಅಂತ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿದ್ದಾರೆ ಅಂತ ಆರೋಪ ಮಾಡಲಾಗಿದೆ.

ಸಂಸದ ಡಾ.ಕೆ ಸುಧಾಕರ್, ಲೆಕ್ಕ ಪರಿಶೋಧಕ ಮಂಜುನಾಥ್ ಹಾಗೂ ನಾಗೇಶ್​ ಅವರ ಮೇಲೆ ವಂಚನೆ ಆರೋಪ ಮಾಡಲಾಗಿದೆ. 2021ರಲ್ಲಿ ಸರ್ಕಾರಿ ಕೆಲಸ ಕೊಡಿಸುವುದಾಗಿ 40 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಆಗ ಮುಂಗಡವಾಗಿ 25 ಲಕ್ಷ ಹಣ ಕೊಟ್ಟಿದ್ದೆ. ಆದರೆ ಈಗ ಕೆಲಸನೂ ಇಲ್ಲ ಹಣವೂ ವಾಪಸ್ ಕೊಟ್ಟಿಲ್ಲ ಅಂತ ಬಾಬು ಮನನೊಂದಿದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!