ಕಳ್ಳನ ಜೊತೆಗೆ ರೂಮ್ ಶೇರ್ ಮಾಡಿದ್ದ ಪೇದೆ ಸಸ್ಪೆಂಡ್ .

– ಪೊಲೀಸ್‌ ಸಮವಸ್ತ್ರ ಧರಿಸಿದ ಕಳ್ಳ

ಬೆಂಗಳೂರು: ಕೈತುಂಬಾ ಸಂಬಳ ಇದ್ರೂ, ಕಳ್ಳನ ಜೊತೆ ರೂಮ್ ಶೇರ್ ಮಾಡಿ ಕರ್ತವ್ಯ ಲೋಪವೆಸಗಿದ್ದ ಪೊಲೀಸ್ ಪೇದೆಯನ್ನು ಕೆಲಸದಿಂದ ಅಮಾನತು ಮಾಡಿದ ಘಟನೆ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್‌ ಹೆಚ್.ಆರ್ ಸೋನಾರ್, ಕುಖ್ಯಾತ ಸಲೀಂ ಅಲಿಯಾಸ್ ಬಾಂಬೆ ಸಲೀಂ ಜೊತೆ ರೂಂ ಶೇರ್ ಮಾಡಿದ್ದ. ಖದೀಮ ಬಾಂಬೆ ಸಲೀಂನನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದಾಗ ಪೇದೆಯ ಕಳ್ಳಾಟ ಬಯಲಾಗಿದೆ.

ಸಲೀಂ ಮೊಬೈಲ್‌ನಲ್ಲಿ ಸೋನಾರ್‌ನ ಪೊಲೀಸ್ ಯೂನಿಫಾರ್ಮ್ ಧರಿಸಿದ್ದ ಫೋಟೊಗಳು ಪತ್ತೆಯಾಗಿವೆ. ಪೊಲೀಸ್ ಯೂನಿಫಾರ್ಮ್ ಹಾಕೊಂಡು ಪತ್ನಿಗೆ ಖದೀಮ ಸಲೀಂ ವಿಡಿಯೋ ಕಾಲ್ ಮಾಡಿರುವುದು ಬೆಳಕಿಗೆ ಬಂದಿದೆ.

ವಿಚಾರಣೆಯ ವೇಳೆ ಖದೀಮ ಸಲೀಂ, ಪೊಲೀಸ್ ಕಾನ್ಸ್ಟೇಬಲ್‌ ಸೋನಾರ್‌ನ ಮನೆಯಲ್ಲಿ ವಾಸವಿದ್ದ ವಿಚಾರ ಬಯಲಾಗಿದೆ. ಕಳ್ಳನ ಜೊತೆ ರೂಂ ಶೇರ್ ಮಾಡಿ ಕರ್ತವ್ಯ ಲೋಪವೆಸಗಿದ ಪೊಲೀಸ್ ಕಾನ್ಸ್ಟೇಬಲ್‌ ಸೋನಾರ್‌ನನ್ನು ಪೂರ್ವ ವಿಭಾಗ ಡಿಸಿಪಿ ದೇವರಾಜ್ ಕೆಲಸದಿಂದ ಅಮಾನತು ಮಾಡಿದ್ದಾರೆ.

ಇದೀಗ ಪೊಲೀಸರು ಸಲೀಂನ ಜೊತೆ ಪೊಲೀಸ್ ಪೇದೆ ಬರೀ ಸ್ನೇಹ ಮಾತ್ರ ಇಟ್ಟುಕೊಂಡಿದ್ನಾ ಅಥವಾ ಬೇರೆ ಲಿಂಕ್ ಇದ್ಯಾ ಎಂದು ಪರಿಶೀಲನೆ ನಡೆಸುತ್ತಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!