ವರಮಹಾಲಕ್ಷ್ಮೀ ವ್ರತಾಚರಣೆಯ ವೇಳೆ ಈ ಕೆಲವು ತಪ್ಪುಗಳು ನಿಮ್ಮಿಂದ ಅಪ್ಪಿತಪ್ಪಿಯೂ ಆಗದಂತೆ ನೋಡಿಕೊಳ್ಳಿ.

ನಮ್ಮ ಹಿಂದೂ ಸಂಪ್ರದಾಯದಲ್ಲಿ ಪ್ರತೀ ಹಬ್ಬವೂ ಒಂದು ನಿರ್ದಿಷ್ಟ ಮಾಸದ ನಕ್ಷತ್ರ ಅಥವಾ ತಿಥಿಯಂದು ಆಚರಿಸಿದರೆ ಕೆಲವು ಹಬ್ಬಗಳು ನಿರ್ದಿಷ್ಟ ದಿನಗಳಲ್ಲಿಯೇ ಆಚರಿಸುವ ರೂಢಿಯಲ್ಲಿದೆ, ಶ್ರಾವಣ ಮಾಸದ ನಾಗರಪಂಚಮಿ ಹಬ್ಬವಾದ ನಂತರ ಪೌರ್ಣಮಿಗಿಂತ ಮುಂಚೆ ಬರುವ ಶುಕ್ರವಾರದಂದು ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಲಾಗುತ್ತದೆ.

ವಿದ್ಯೆಗೆ ಬ್ರಹ್ಮನ ಅರಸಿ ಸರಸ್ವತಿ ಅದಿದೇವತೆಯಾದರೆ, ಸುಖಃ ಮತ್ತು ಸಂಪತ್ತುಗಳಿಗೆ ವಿಷ್ಣುವಿನ ಪತ್ನಿ ಮಹಾ ಲಕ್ಶ್ಮೀಯೇ ಅಧಿದೇವತೆ. ಯಾರಿಗೆ ಲಕ್ಷ್ಮಿ ಚೆನ್ನಾಗಿ ಒಲಿದಿರುತ್ತಾಳೋ ಅಂತಹವರ ಬಾಳು ಹಸನಾಗುತ್ತದೆ ಎಂಬ ನಂಬಿಕೆ ಇರುವುದರಿಂದ ಇಂದಿನ ದಿನಗಳಲ್ಲಿ ಬಹುತೇಕರು ಸರಸ್ವತಿಗಿಂತ ಲಕ್ಷ್ಮಿಯನ್ನು ಒಲಿಸಿಕೊಳ್ಳಲೇ ಬಯಸುತ್ತಿರುವುದು ಆಶ್ಚರ್ಯವಾದರೂ ನಂಬಲೇಬೇಕಾದ ಸತ್ಯವಾಗಿದೆ. ಹಾಗಾಗಿ ಈ ಕಲಿಯುಗದಲ್ಲಿ ಯಾವುದೇ ಜಾತಿಗಳ ತಾರತಮ್ಯವಿಲ್ಲದೆ ಪೂಜಿಸುವ ಏಕೈಕ ದೇವತೆ ಲಕ್ಷ್ಮಿ ಎಂದರೆ ಅತಿಶಯೋಕ್ತಿಯೇನಲ್ಲ.

https://www.goodnews24x7.com/do-you-know-why-green-bangles-are-given-to-the-elders-on-the-day-of-varamahalakshmi-festival/ವರಮಹಾಲಕ್ಷ್ಮಿ ಹಬ್ಬದ ದಿನ ಮುತ್ತೈದೆಯರಿಗೆ ಹಸಿರು ಬಣ್ಣದ ಬಳೆಯನ್ನೇ ಕೊಡುವುದೇಕೆ ಗೊತ್ತಾ?

ವರಮಹಾಲಕ್ಷ್ಮಿ ಹಬ್ಬದ ದಿನ ಈ ತಪ್ಪುಗಳು ನಿಮ್ಮಿಂದ ಆಗದಿರಲಿ:

• ವರಮಹಾಲಕ್ಷ್ಮಿ ಹಬ್ಬದ ದಿನ ಪೂಜೆ ಮಾಡುವ ಸ್ಥಳದಲ್ಲಿ ಅಥವಾ ದೇವರ ಕೋಣೆಯಲ್ಲಿ ಮುರಿದ ವಿಗ್ರಹಗಳನ್ನು ಇಡಬಾರದು.
• ವರಮಹಾಲಕ್ಷ್ಮಿ ಮರದ ಕುರ್ಚಿ ಮೇಲೆ ಕೂರಿಸಿ. ಅಪ್ಪಿತಪ್ಪಿಯೂ ಕಬ್ಬಿಣದ ಕುರ್ಚಿ ಮೇಲೆ ಲಕ್ಷ್ಮಿಯನ್ನು ಕೂರಿಸಿ ಪೂಜೆ ಮಾಡಬೇಡಿ.
• ಅಲಂಕಾರಕ್ಕಾಗಿ ಪ್ಲಾಸ್ಟಿಕ್ ಹೂವುಗಳು ಹಾಗೂ ಹಣ್ಣುಗಳನ್ನು ಬಳಸಿ ವರಮಹಾಲಕ್ಷ್ಮಿ ವ್ರತಾಚರಣೆ ಮಾಡಬೇಡಿ.
• ನೀವೇನಾದ್ರೂ ಕಲಶವಿಟ್ಟು ಪೂಜೆ ಮಾಡುತ್ತೀರಿ ಅಂತಾದರೆ ತ್ರಾಮದ ಕಲಶವನ್ನು ಬಳಸುವುದು ಸೂಕ್ತ. ಪೂಜೆಯ ವೇಳೆ ಮನಸ್ಸು ಶುದ್ಧವಾಗಿರಲಿ, ಕೆಟ್ಟ ಆಲೋಚನೆಗಳನ್ನು ಮಾಡಬೇಡಿ.
• ಈ ವ್ರತಾಚರಣೆಗೆ ಸಾಲವಾಗಿ ತಂದ ಹಣವನ್ನಾಗಲಿ ಹಾಗೂ ಆಭರಣಗಳನ್ನು ಬಳಸಬೇಡಿ. ಇದರಿಂದ ಲಕ್ಷ್ಮಿ ದೇವಿಯೂ ಮುನಿಸಿಕೊಳ್ಳುತ್ತಾಳೆ. ತುಕ್ಕು ಹಿಡಿದ ಆಭರಣಗಳನ್ನು ಎಂದಿಗೂ ಬಳಸುವುದು ತಪ್ಪಿಸಿ

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!