ಸರ್ಕಾರ ಧರ್ಮಸ್ಥಳವನ್ನು ಕಬಳಿಸಲು ಈ ಪ್ರಯತ್ನ ಆರಂಭ ಮಾಡಿದೆ !ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ.

ಮೈಸೂರು: ಮೈಸೂರಿನಲ್ಲಿ ಧರ್ಮಸ್ಥಳ ಪ್ರಕರಣ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ . “ಸೌಜನ್ಯ ಅತ್ಯಾಚಾರ ಪ್ರಕರಣದ ಬಗ್ಗೆ ನೋವಿದೆ. ನಾವೆಲ್ಲಾ ಸೌಜನ್ಯ ಪರ.
ಮೂರು ತನಿಖಾ ಸಂಸ್ಥೆ ಯಿಂದ ತನಿಖೆ ಆಗಿದೆ. ಬೇರೆ ಇನ್ನೂ ಯಾವುದಾದರೂ ಮೂಲಕ ತನಿಖೆ ಆಗಬೇಕಿದ್ದರೆ ಸೌಜನ್ಯ ತಾಯಿ ಹೇಳಲಿ. ನಾವೇ ಅವರ ಪರ ನ್ಯಾಯಾಲಯಕ್ಕೆ ಅರ್ಜಿ ಹಾಕುತ್ತೇವೆ. ಧರ್ಮಸ್ಥಳದಲ್ಲಿ ಸಾವಿರಾರು ಕೊಲೆ ಆಗಿದೆ ಅಂತಾರೆ. ಇದು ವಾಸ್ತವದಲ್ಲಿ ಸಾಧ್ಯನೂ? ಧರ್ಮಸ್ಥಳ ಟಾರ್ಗೆಟ್ ಮಾಡಿರುವುದು ಹಿಂದೂ ಸಮಾಜಕ್ಕೆ ಅರ್ಥವಾಗುತ್ತಿಲ್ಲ.
ಧರ್ಮಸ್ಥಳದ ಬಗ್ಗೆ ಅಪನಂಬಿಕೆ ಮೂಡಿಸುವ ಕೆಲಸವನ್ನು ಇಸ್ಲಾಂ ಧರ್ಮದ ಯಾವನೋ ಒಬ್ಬ ಮಾಡುತ್ತಾನೆ.
ಅದನ್ನು ಹಿಂದೂಗಳು ನಂಬುತ್ತಿದ್ದಾರೆ.

ವಿರೇಂದ್ರ ಹೆಗ್ಡೆ ಕುರಿತು ಮಾತನಾಡಿದ ಅವರು “ಒಂದೇ ಒಂದು ಸಾಕ್ಷಿ ಇಲ್ಲದೆ ಯಾಕೆ ವಿರೇಂದ್ರ ಹೆಗ್ಡೆ ಅವರನ್ನು ಆರೋಪಿ ಸ್ಥಾನಕ್ಕೆ ತರಲಾಗಿದೆ? ಹಿಂದೂ ಸಮಾಜ ಪ್ರಜಾವಂತಿಕೆ ಕಳೆದು ಕೊಂಡಿದೆ.ರಾಜ್ಯ ಸರ್ಕಾರ ಧರ್ಮಸ್ಥಳದ ಧರ್ಮಾಧಿಕಾರಿ ಅವರನ್ನು ಅರೋಪಿ ಅಂತಾ ತೀರ್ಮಾನ ಮಾಡಿ ಅದಕ್ಕೆ ಬೇಕಾದ ಸಾಕ್ಷಿ ಈಗ ಹುಡುಕುತ್ತಿದೆ. ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ದಾವುದ್ ಇಬ್ರಾಹಿಂ ಥರ ದೊಡ್ಡ ಡಾನ್ ನಾ? ಧರ್ಮಸ್ಥಳವನ್ನು ಟಾರ್ಗೆಟ್ ಮಾಡಲಾಗಿದೆ. ಇದರ ಹಿಂದೆ ವ್ಯವಸ್ಥಿತ ಪಿತೂರಿ ಇದೆ.”
ಆರೋಪಿಯನ್ನು ಮೊದಲೆ ನಿರ್ಧರಿಸಿ ಅದಕ್ಕೆ ಬೇಕಾದ ಸಾಕ್ಷಿ ಹುಡುಕುತ್ತಿರುವ ಮೊದಲ ಪ್ರಕರಣ ಇದು. ಧರ್ಮಸ್ಥಳ ದೇವಸ್ಥಾನಕ್ಕೆ ಮೀನು ತಿಂದು ಹೋಗಿ ಜನರ ಭಾವನೆಗೆ ಧಕ್ಕೆ ತಂದವರು ಈಗ ಅಲ್ಲಿನ ನಂಬಿಕೆ ಮಾಡಲು ತನಿಖೆ ಮಾಡಿಸುತ್ತಿದ್ದಾರೆ. ಸೌಜನ್ಯ ಪ್ರಕರಣಕ್ಕೂ ಈಗ ನಡೆಯುತ್ತಿರುವ ಹುಡುಕಾಟಕ್ಕೂ ಸಂಬಂಧವೆ ಇಲ್ಲ. ಸರ್ಕಾರ ಧರ್ಮಸ್ಥಳವನ್ನು ಕಬಳಿಸಲು ಈ ಪ್ರಯತ್ನ ಆರಂಭ ಮಾಡಿದೆ. ಟೆಸ್ಟ್ ಮ್ಯಾಚ್ ಗಿಂತಾಲೂ ಹೆಚ್ಚಾಗಿ ಧರ್ಮಸ್ಥಳದ ವಿಚಾರ ದಿನ‌ ನಡೆಯುತ್ತಿದೆ . ನಮ್ಮ ಧರ್ಮಾಧಿಕಾರಿ ಹೆಗ್ಡೆ ಅವರು ಯಾಕೆ ನಿಮಗೆ ಟಾರ್ಗೆಟ್?
ಅನಾಮಿಕನ ಪೂರ್ವಪರ ಮೊದಲು ಬಹಿರಂಗ ಆಗಲಿ.” ಎಂದಿದ್ದಾರೆ .

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!