‘ಕಾಂತಾರ’ದಲ್ಲಿ ಮಿಂಚಿದ್ದ ಅಪ್ಪು ಕೋಣ ಸಾವು : ಕಂಬಳದಲ್ಲಿ ಚಾಂಪಿಯನ್ ಆಗಿದ್ದ ಅಪ್ಪು .

ಕಾಂತಾರ ಸಿನಿಮಾದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಪ್ಪು ಕೋಣ ನಿಧನ ಹೊಂದಿದೆ. ರಿಷಬ್ ಶೆಟ್ಟಿ ಅವರ ತರಬೇತಿಗೆ ಸಹಾಯ ಮಾಡಿದ ಈ ಕೋಣ, ಹಲವು ಕಂಬಳ ಸ್ಪರ್ಧೆಗಳಲ್ಲಿ ಚಾಂಪಿಯನ್ ಆಗಿತ್ತು. ಅಪ್ಪು ಕೋಣದ ಸಾವು ಕಂಬಳ ಪ್ರೇಮಿಗಳಿಗೆ ಬೇಸರ ಮೂಡಿಸಿದೆ. ಕಾಂತಾರ ಚಿತ್ರದ ಯಶಸ್ಸಿನಲ್ಲಿ ಅಪ್ಪು ಕೋಣದ ಪಾತ್ರ ಮಹತ್ವದ್ದಾಗಿತ್ತು.

‘ಕಾಂತಾರ’ ಸಿನಿಮಾ 2022ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರದ ಮೂಲಕ ಅನೇಕ ಕಲಾವಿದರು ಜನಪ್ರಿಯತೆ ಪಡೆದರು. ಈ ಸಿನಿಮಾದಲ್ಲಿ ಕರಾವಳಿಯ ಸಂಪ್ರದಾಯದ ಬಗ್ಗೆ ಹೇಳಲಾಗಿತ್ತು. ದಕ್ಷಿಣ ಕನ್ನಡದ ಜನತೆಯ ಉಸಿರಿನ ಜೊತೆ ಬೆರೆತು ಹೋದ ಕಂಬಳದ ದೃಶ್ಯಗಳೂ ಇದ್ದವು. ಈ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ಅಪ್ಪು ಕೋಣ ಸಾವನ್ನಪ್ಪಿದೆ. ಅಪ್ಪು ಕೋಣದ ಮಾಲೀಕರು ಹಾಗೂ ಕಂಬಳ ಪ್ರಿಯರಿಗೆ ಈ ವಿಚಾರ ಬೇಸರ ಮೂಡಿಸಿದೆ.

‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಹೀರೋ ಆಗಿ ಮಿಂಚಿದ್ದರು. ಈ ಚಿತ್ರದ ನಿರ್ದೇಶನ ಕೂಡ ಅವರದ್ದೇ. ಅವರು ಈ ಸಿನಿಮಾಗಾಗಿ ಕಷ್ಟಪಟ್ಟು ಕಂಬಳ ಓಡಿಸೋದನ್ನು ಕಲಿತಿದ್ದರು. ಇದಕ್ಕಾಗಿ ಬೈಂದೂರು ಬೊಳಂಬಳ್ಳಿಯ ಕಂಬಳ ಪ್ರೇಮಿ ಪರಮೇಶ್ವರ ಭಟ್ ಅವರು ಸಾಕಿದ್ದ ಕೋಣ ಬಳಕೆ ಆಗಿತ್ತು. ಈ ಕೋಣಗಳಿಗೆ ಅಪ್ಪು ಹಾಗೂ ಕಾಲಾ ಎಂದು ಹೆಸರು ಇಡಲಾಗಿತ್ತು. ಈ ಪೈಕಿ ಅಪ್ಪು ಕೋಣ ನಿಧನ ಹೊಂದಿದೆ.

ಚಿತ್ರೀಕರಣಕ್ಕೂ ಮೊದಲಿನಿಂದಲೇ ಅಪ್ಪು ಮತ್ತು ಕಾಲಾ ಕೋಣಗಳ ಮೂಲಕ ರಿಷಬ್ ತಬೇತಿ ಪಡೆದಿದ್ದರು. ಇವುಗಳ ಜೊತೆ ರಿಷಬ್​ಗೆ ಆಪ್ತತೆ ಬೆಳೆದಿತ್ತು. ಆ ಬಳಿಕ ಸಿನಿಮಾಗಳಲ್ಲೂ ಕೋಣಗಳು ಕಾಣಿಸಿಕೊಂಡಿದ್ದವು. ಈ ಪೈಕಿ ಒಂದು ಕೋಣ ನಿಧನ ಹೊಂದಿದ್ದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಪ್ರಶಸ್ತಿಗಳ ಸರಮಾಲೆ..
ಸಿನಿಮಾಗಳಲ್ಲಿ ಮಾತ್ರ ಅಪ್ಪು ಹಾಗೂ ಕಾಲಾ ಕೋಣಗಳು ಚಾಂಪಿಯನ್ ಅಲ್ಲ, ನಿಜ ಜೀವನದಲ್ಲೂ ಇವು ಸಾಕಷ್ಟು ಅವಾರ್ಡ್ ಗೆದ್ದಿವೆ. ನೇಗಿಲು ಜೂನಿಯರ್ ವಿಭಾಗದಲ್ಲಿ ಎರಡು ಬಾರಿ ಸರಣಿಶ್ರೇಷ್ಠ ಪ್ರಶಸ್ತಿ ಪಡೆದಿದ್ದವು. ಕುಂದಾಪುರ ಭಾಗದಲ್ಲಿ ನಡೆಯುವ ಕಂಬಳದಲ್ಲಿ 5 ವರ್ಷ ಈ ಕೋಣಗಳು ಚಾಂಪಿಯನ್ ಆಗಿದ್ದವು. ಬೆಂಗಳೂರು ಕಂಬಳದಲ್ಲೂ ಕನೆಹಲಗೆ ವಿಭಾಗದಲ್ಲಿ ಪ್ರಥಮ ಪ್ರಶಸ್ತಿ ಪಡೆದಿದ್ದವು. ಕರಾವಳಿಯ ಬಹುತೇಕ ಕಂಬಳಗಳಲ್ಲಿ ಕೀರ್ತಿ-ಬಹುಮಾನ ಸಂಪಾದಿಸಿದ್ದ ಅಪ್ಪು ಕೋಣ ಈಗ ಅಗಲಿದೆ.

 

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!