‘ಕಾಂತಾರ’ದಲ್ಲಿ ಮಿಂಚಿದ್ದ ಅಪ್ಪು ಕೋಣ ಸಾವು : ಕಂಬಳದಲ್ಲಿ ಚಾಂಪಿಯನ್ ಆಗಿದ್ದ ಅಪ್ಪು .

ಕಾಂತಾರ ಸಿನಿಮಾದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಪ್ಪು ಕೋಣ ನಿಧನ ಹೊಂದಿದೆ. ರಿಷಬ್ ಶೆಟ್ಟಿ ಅವರ ತರಬೇತಿಗೆ ಸಹಾಯ ಮಾಡಿದ ಈ ಕೋಣ, ಹಲವು ಕಂಬಳ ಸ್ಪರ್ಧೆಗಳಲ್ಲಿ ಚಾಂಪಿಯನ್ ಆಗಿತ್ತು. ಅಪ್ಪು ಕೋಣದ ಸಾವು ಕಂಬಳ ಪ್ರೇಮಿಗಳಿಗೆ ಬೇಸರ ಮೂಡಿಸಿದೆ. ಕಾಂತಾರ ಚಿತ್ರದ ಯಶಸ್ಸಿನಲ್ಲಿ ಅಪ್ಪು ಕೋಣದ ಪಾತ್ರ ಮಹತ್ವದ್ದಾಗಿತ್ತು.

‘ಕಾಂತಾರ’ ಸಿನಿಮಾ 2022ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರದ ಮೂಲಕ ಅನೇಕ ಕಲಾವಿದರು ಜನಪ್ರಿಯತೆ ಪಡೆದರು. ಈ ಸಿನಿಮಾದಲ್ಲಿ ಕರಾವಳಿಯ ಸಂಪ್ರದಾಯದ ಬಗ್ಗೆ ಹೇಳಲಾಗಿತ್ತು. ದಕ್ಷಿಣ ಕನ್ನಡದ ಜನತೆಯ ಉಸಿರಿನ ಜೊತೆ ಬೆರೆತು ಹೋದ ಕಂಬಳದ ದೃಶ್ಯಗಳೂ ಇದ್ದವು. ಈ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ಅಪ್ಪು ಕೋಣ ಸಾವನ್ನಪ್ಪಿದೆ. ಅಪ್ಪು ಕೋಣದ ಮಾಲೀಕರು ಹಾಗೂ ಕಂಬಳ ಪ್ರಿಯರಿಗೆ ಈ ವಿಚಾರ ಬೇಸರ ಮೂಡಿಸಿದೆ.

‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಹೀರೋ ಆಗಿ ಮಿಂಚಿದ್ದರು. ಈ ಚಿತ್ರದ ನಿರ್ದೇಶನ ಕೂಡ ಅವರದ್ದೇ. ಅವರು ಈ ಸಿನಿಮಾಗಾಗಿ ಕಷ್ಟಪಟ್ಟು ಕಂಬಳ ಓಡಿಸೋದನ್ನು ಕಲಿತಿದ್ದರು. ಇದಕ್ಕಾಗಿ ಬೈಂದೂರು ಬೊಳಂಬಳ್ಳಿಯ ಕಂಬಳ ಪ್ರೇಮಿ ಪರಮೇಶ್ವರ ಭಟ್ ಅವರು ಸಾಕಿದ್ದ ಕೋಣ ಬಳಕೆ ಆಗಿತ್ತು. ಈ ಕೋಣಗಳಿಗೆ ಅಪ್ಪು ಹಾಗೂ ಕಾಲಾ ಎಂದು ಹೆಸರು ಇಡಲಾಗಿತ್ತು. ಈ ಪೈಕಿ ಅಪ್ಪು ಕೋಣ ನಿಧನ ಹೊಂದಿದೆ.

ಚಿತ್ರೀಕರಣಕ್ಕೂ ಮೊದಲಿನಿಂದಲೇ ಅಪ್ಪು ಮತ್ತು ಕಾಲಾ ಕೋಣಗಳ ಮೂಲಕ ರಿಷಬ್ ತಬೇತಿ ಪಡೆದಿದ್ದರು. ಇವುಗಳ ಜೊತೆ ರಿಷಬ್​ಗೆ ಆಪ್ತತೆ ಬೆಳೆದಿತ್ತು. ಆ ಬಳಿಕ ಸಿನಿಮಾಗಳಲ್ಲೂ ಕೋಣಗಳು ಕಾಣಿಸಿಕೊಂಡಿದ್ದವು. ಈ ಪೈಕಿ ಒಂದು ಕೋಣ ನಿಧನ ಹೊಂದಿದ್ದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಪ್ರಶಸ್ತಿಗಳ ಸರಮಾಲೆ..
ಸಿನಿಮಾಗಳಲ್ಲಿ ಮಾತ್ರ ಅಪ್ಪು ಹಾಗೂ ಕಾಲಾ ಕೋಣಗಳು ಚಾಂಪಿಯನ್ ಅಲ್ಲ, ನಿಜ ಜೀವನದಲ್ಲೂ ಇವು ಸಾಕಷ್ಟು ಅವಾರ್ಡ್ ಗೆದ್ದಿವೆ. ನೇಗಿಲು ಜೂನಿಯರ್ ವಿಭಾಗದಲ್ಲಿ ಎರಡು ಬಾರಿ ಸರಣಿಶ್ರೇಷ್ಠ ಪ್ರಶಸ್ತಿ ಪಡೆದಿದ್ದವು. ಕುಂದಾಪುರ ಭಾಗದಲ್ಲಿ ನಡೆಯುವ ಕಂಬಳದಲ್ಲಿ 5 ವರ್ಷ ಈ ಕೋಣಗಳು ಚಾಂಪಿಯನ್ ಆಗಿದ್ದವು. ಬೆಂಗಳೂರು ಕಂಬಳದಲ್ಲೂ ಕನೆಹಲಗೆ ವಿಭಾಗದಲ್ಲಿ ಪ್ರಥಮ ಪ್ರಶಸ್ತಿ ಪಡೆದಿದ್ದವು. ಕರಾವಳಿಯ ಬಹುತೇಕ ಕಂಬಳಗಳಲ್ಲಿ ಕೀರ್ತಿ-ಬಹುಮಾನ ಸಂಪಾದಿಸಿದ್ದ ಅಪ್ಪು ಕೋಣ ಈಗ ಅಗಲಿದೆ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!