ಪ್ರಧಾನಿ ಮೋದಿಗೆ ಪಾಕಿಸ್ತಾನದ ಸಹೋದರಿ . ಅಣ್ಣ-ತಂಗಿ ಸಂಬಂಧಕ್ಕೀಗ 30 ವರ್ಷ!

ರಕ್ಷಾ ಬಂಧನ ಸಮೀಪಿಸ್ತಿದ್ದಂತೆಯೇ ಸಹೋದರ-ಸಹೋದರಿಯರ ನಡುವಿನ ಪ್ರೀತಿ, ವಿಶ್ವಾಸದ ಕಥೆಗಳು ಎಲ್ಲೆಡೆ ಪ್ರತಿಧ್ವನಿಸುತ್ತವೆ. ನಿಮಗೆ ಗೊತ್ತಾ ಪ್ರಧಾನಿ ಮೋದಿಗೆ ಪಾಕಿಸ್ತಾನದ ಒಬ್ಬ ಸಹೋದರಿ ಇದ್ದಾರೆ. ಅವರು ಕಳೆದ 30 ವರ್ಷಗಳಿಂದ ರಾಖಿ ಕಟ್ಟುತ್ತ ಬಂದಿದ್ದಾರೆ.

ಪವಿತ್ರ ಹಬ್ಬ ರಕ್ಷಾ ಬಂಧನ ಸಮೀಪಿಸ್ತಿದ್ದಂತೆಯೇ ಸಹೋದರ-ಸಹೋದರಿಯರ ನಡುವಿನ ಪ್ರೀತಿ, ವಿಶ್ವಾಸದ ಕಥೆಗಳು ಎಲ್ಲೆಡೆ ಪ್ರತಿಧ್ವನಿಸುತ್ತವೆ. ಅಂತಹ ಒಂದು ಕಥೆ ಇದೆ, ಅದು ಗಡಿಗಳನ್ನು ದಾಟಿ ಮಾನವೀಯತೆ ಮತ್ತು ಸಹೋದರತ್ವದ ಉದಾಹರಣೆಯಾಗಿ ನಿಂತಿದೆ! ಹೌದು, ನಿಮಗೆ ಗೊತ್ತಾ ಪ್ರಧಾನಿ ಮೋದಿಗೆ ಪಾಕಿಸ್ತಾನದ ಒಬ್ಬ ಸಹೋದರಿ ಇದ್ದಾರೆ. ಅವರು ಕಳೆದ 30 ವರ್ಷಗಳಿಂದ ರಾಖಿ ಕಟ್ಟುತ್ತ ಬಂದಿದ್ದಾರೆ.

ಅಂದ್ಹಾಗೆ ಅವರ ಹೆಸರು, ಕಮರ್ ಮೊಹ್ಸಿನ್ ಶೇಖ್ ಕಳೆದ 30 ವರ್ಷಗಳಿಂದ ರಾಖಿ ಕಟ್ಟುತ್ತ ಬಂದಿರುವ ಅವರು ಈ ಬಾರಿಯೂ ಮೋದಿಗೆ ಸಿಹಿ ನೀಡಿ, ರಾಖಿ ಕಟ್ಟಲು ಸಿದ್ಧರಾಗಿದ್ದಾರೆ. ಅದಕ್ಕಾಗಿ ತಾವೇ ಎರಡು ರಾಖಿಗಳನ್ನ ಸಿದ್ಧಮಾಡಿಕೊಂಡಿದ್ದು, ಪ್ರಧಾನಿ ಕಚೇರಿಯ ಆಹ್ವಾನಕ್ಕಾಗಿ ಕಾಯುತ್ತಿದ್ದಾರೆ. ಈ ವರ್ಷ ಅವರು ಓಂ ಮತ್ತು ಗಣೇಶನ ವಿನ್ಯಾಸಗಳನ್ನು ಹೊಂದಿರುವ ಎರಡು ರಾಖಿಗಳನ್ನು ತಯಾರಿಸಿದ್ದಾರೆ.

ಯಾರು ಈ ಕಮರ್ ಮೊಹ್ಸಿನ್ ಶೇಖ್..?
ಕಮರ್ ಮೊಹ್ಸಿನ್ ಶೇಖ್ ಪಾಕಿಸ್ತಾನದ ಕರಾಚಿಯಲ್ಲಿ ಜನಿಸಿದರು. 1981ರಲ್ಲಿ ಅಹಮದಾಬಾದ್‌ನ ಪ್ರಸಿದ್ಧ ವರ್ಣಚಿತ್ರಕಾರ ಮೊಹ್ಸಿನ್ ಶೇಖ್ ಅವರನ್ನು ವಿವಾಹವಾದ ನಂತರ ಭಾರತಕ್ಕೆ ಬಂದು ನೆಲೆಸಿದ್ದಾರೆ. ಪ್ರಸ್ತುತ ಅವರು ತಮ್ಮ ಪತಿಯೊಂದಿಗೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ವಾಸಿಸುತ್ತಿದ್ದಾರೆ. ಕಮರ್ ಮತ್ತು ಮೋದಿ ನಡುವಿನ ವಿಶೇಷ ಸಂಬಂಧವು ಮೋದಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸಾಮಾನ್ಯ ಕಾರ್ಯಕರ್ತನಾಗಿದ್ದಾಗ ಪ್ರಾರಂಭವಾಗಿದೆ.

ಅಣ್ಣ-ತಂಗಿ ಸಂಬಂಧ ಹೇಗೆ ಆರಂಭವಾಯಿತು?

1990 ರಲ್ಲಿ ಅಂದಿನ ಗುಜರಾತ್ ರಾಜ್ಯಪಾಲ ಡಾ.ಸ್ವರೂಪ್ ಸಿಂಗ್ ಮೂಲಕ ಮೋದಿಯನ್ನು ಭೇಟಿಯಾದೆ ಎಂದು ಕಮರ್ ಹೇಳುತ್ತಾರೆ. ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಮೊದಲ ಬಾರಿಗೆ ಭೇಟಿಯಾದರು. ಕಮರ್ ತನ್ನ ಪತಿಯ ಚಿತ್ರಕಲಾ ಪ್ರದರ್ಶನಕ್ಕಾಗಿ ದೆಹಲಿಗೆ ಹೋಗುತ್ತಿದ್ದರು. ಆ ಸಮಯದಲ್ಲಿ ಡಾ. ಸ್ವರೂಪ್ ಸಿಂಗ್ ನರೇಂದ್ರ ಮೋದಿಗೆ ಕಮರ್ ಅವರನ್ನು ತಮ್ಮ ಮಗಳೆಂದು ಪರಿಗಣಿಸುವುದಾಗಿ ಹೇಳಿದರು. ಅದಕ್ಕೆ ಮೋದಿ, ಹಾಗಿದ್ದರೆ ಅವರು ನನ್ನ ಸಹೋದರಿ ಆಗುತ್ತಾಳೆ ಎಂದು ಉತ್ತರಿಸಿದ್ದರಂತೆ. ಅಲ್ಲಿಂದ ಈ ವಿಶಿಷ್ಟ ಸಂಬಂಧಕ್ಕೆ ಅಡಿಪಾಯ ಬಿದ್ದಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!