ಪ್ರಧಾನಿ ಮೋದಿಗೆ ಪಾಕಿಸ್ತಾನದ ಸಹೋದರಿ . ಅಣ್ಣ-ತಂಗಿ ಸಂಬಂಧಕ್ಕೀಗ 30 ವರ್ಷ!

ರಕ್ಷಾ ಬಂಧನ ಸಮೀಪಿಸ್ತಿದ್ದಂತೆಯೇ ಸಹೋದರ-ಸಹೋದರಿಯರ ನಡುವಿನ ಪ್ರೀತಿ, ವಿಶ್ವಾಸದ ಕಥೆಗಳು ಎಲ್ಲೆಡೆ ಪ್ರತಿಧ್ವನಿಸುತ್ತವೆ. ನಿಮಗೆ ಗೊತ್ತಾ ಪ್ರಧಾನಿ ಮೋದಿಗೆ ಪಾಕಿಸ್ತಾನದ ಒಬ್ಬ ಸಹೋದರಿ ಇದ್ದಾರೆ. ಅವರು ಕಳೆದ 30 ವರ್ಷಗಳಿಂದ ರಾಖಿ ಕಟ್ಟುತ್ತ ಬಂದಿದ್ದಾರೆ.

ಪವಿತ್ರ ಹಬ್ಬ ರಕ್ಷಾ ಬಂಧನ ಸಮೀಪಿಸ್ತಿದ್ದಂತೆಯೇ ಸಹೋದರ-ಸಹೋದರಿಯರ ನಡುವಿನ ಪ್ರೀತಿ, ವಿಶ್ವಾಸದ ಕಥೆಗಳು ಎಲ್ಲೆಡೆ ಪ್ರತಿಧ್ವನಿಸುತ್ತವೆ. ಅಂತಹ ಒಂದು ಕಥೆ ಇದೆ, ಅದು ಗಡಿಗಳನ್ನು ದಾಟಿ ಮಾನವೀಯತೆ ಮತ್ತು ಸಹೋದರತ್ವದ ಉದಾಹರಣೆಯಾಗಿ ನಿಂತಿದೆ! ಹೌದು, ನಿಮಗೆ ಗೊತ್ತಾ ಪ್ರಧಾನಿ ಮೋದಿಗೆ ಪಾಕಿಸ್ತಾನದ ಒಬ್ಬ ಸಹೋದರಿ ಇದ್ದಾರೆ. ಅವರು ಕಳೆದ 30 ವರ್ಷಗಳಿಂದ ರಾಖಿ ಕಟ್ಟುತ್ತ ಬಂದಿದ್ದಾರೆ.

ಅಂದ್ಹಾಗೆ ಅವರ ಹೆಸರು, ಕಮರ್ ಮೊಹ್ಸಿನ್ ಶೇಖ್ ಕಳೆದ 30 ವರ್ಷಗಳಿಂದ ರಾಖಿ ಕಟ್ಟುತ್ತ ಬಂದಿರುವ ಅವರು ಈ ಬಾರಿಯೂ ಮೋದಿಗೆ ಸಿಹಿ ನೀಡಿ, ರಾಖಿ ಕಟ್ಟಲು ಸಿದ್ಧರಾಗಿದ್ದಾರೆ. ಅದಕ್ಕಾಗಿ ತಾವೇ ಎರಡು ರಾಖಿಗಳನ್ನ ಸಿದ್ಧಮಾಡಿಕೊಂಡಿದ್ದು, ಪ್ರಧಾನಿ ಕಚೇರಿಯ ಆಹ್ವಾನಕ್ಕಾಗಿ ಕಾಯುತ್ತಿದ್ದಾರೆ. ಈ ವರ್ಷ ಅವರು ಓಂ ಮತ್ತು ಗಣೇಶನ ವಿನ್ಯಾಸಗಳನ್ನು ಹೊಂದಿರುವ ಎರಡು ರಾಖಿಗಳನ್ನು ತಯಾರಿಸಿದ್ದಾರೆ.

ಯಾರು ಈ ಕಮರ್ ಮೊಹ್ಸಿನ್ ಶೇಖ್..?
ಕಮರ್ ಮೊಹ್ಸಿನ್ ಶೇಖ್ ಪಾಕಿಸ್ತಾನದ ಕರಾಚಿಯಲ್ಲಿ ಜನಿಸಿದರು. 1981ರಲ್ಲಿ ಅಹಮದಾಬಾದ್‌ನ ಪ್ರಸಿದ್ಧ ವರ್ಣಚಿತ್ರಕಾರ ಮೊಹ್ಸಿನ್ ಶೇಖ್ ಅವರನ್ನು ವಿವಾಹವಾದ ನಂತರ ಭಾರತಕ್ಕೆ ಬಂದು ನೆಲೆಸಿದ್ದಾರೆ. ಪ್ರಸ್ತುತ ಅವರು ತಮ್ಮ ಪತಿಯೊಂದಿಗೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ವಾಸಿಸುತ್ತಿದ್ದಾರೆ. ಕಮರ್ ಮತ್ತು ಮೋದಿ ನಡುವಿನ ವಿಶೇಷ ಸಂಬಂಧವು ಮೋದಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸಾಮಾನ್ಯ ಕಾರ್ಯಕರ್ತನಾಗಿದ್ದಾಗ ಪ್ರಾರಂಭವಾಗಿದೆ.

ಅಣ್ಣ-ತಂಗಿ ಸಂಬಂಧ ಹೇಗೆ ಆರಂಭವಾಯಿತು?

1990 ರಲ್ಲಿ ಅಂದಿನ ಗುಜರಾತ್ ರಾಜ್ಯಪಾಲ ಡಾ.ಸ್ವರೂಪ್ ಸಿಂಗ್ ಮೂಲಕ ಮೋದಿಯನ್ನು ಭೇಟಿಯಾದೆ ಎಂದು ಕಮರ್ ಹೇಳುತ್ತಾರೆ. ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಮೊದಲ ಬಾರಿಗೆ ಭೇಟಿಯಾದರು. ಕಮರ್ ತನ್ನ ಪತಿಯ ಚಿತ್ರಕಲಾ ಪ್ರದರ್ಶನಕ್ಕಾಗಿ ದೆಹಲಿಗೆ ಹೋಗುತ್ತಿದ್ದರು. ಆ ಸಮಯದಲ್ಲಿ ಡಾ. ಸ್ವರೂಪ್ ಸಿಂಗ್ ನರೇಂದ್ರ ಮೋದಿಗೆ ಕಮರ್ ಅವರನ್ನು ತಮ್ಮ ಮಗಳೆಂದು ಪರಿಗಣಿಸುವುದಾಗಿ ಹೇಳಿದರು. ಅದಕ್ಕೆ ಮೋದಿ, ಹಾಗಿದ್ದರೆ ಅವರು ನನ್ನ ಸಹೋದರಿ ಆಗುತ್ತಾಳೆ ಎಂದು ಉತ್ತರಿಸಿದ್ದರಂತೆ. ಅಲ್ಲಿಂದ ಈ ವಿಶಿಷ್ಟ ಸಂಬಂಧಕ್ಕೆ ಅಡಿಪಾಯ ಬಿದ್ದಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!