ನಟ ಧ್ರುವ ಸರ್ಜಾ ವಿರುದ್ಧ ವಂಚನೆ ಆರೋಪ ಪ್ರಕರಣ ದಾಖಲು

ನಟ ಧ್ರುವ ಸರ್ಜಾ ಅವರು ಹಣ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಡೈರೆಕ್ಟರ್ ರಾಘವೇಂದ್ರ ಹೆಗಡೆಯಿಂದ ಕೋಟಿ ಕೋಟಿ ಹಣ ಪಡೆದಿರುವ ಆರೋಪ ಮಾಡಲಾಗಿದೆ.

ಧ್ರುವಾ ಸರ್ಜಾ ವಿರುದ್ಧ ನಿರ್ದೇಶಕ ರಾಘವೇಂದ್ರ ಹೆಗಡೆ ಅವರು ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದಾಖಲೆ ಸಮೇತ ಪ್ರಕರಣ ದಾಖಲು ಮಾಡಿದ್ದಾರೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್​ಎಸ್​) ಸೆಕ್ಷನ್​ 316 (2) (ಕ್ರಿಮಿನಲ್ ನಂಬಿಕೆ ಉಲ್ಲಂಘನೆ), 318 (4) (ವಂಚನೆ) ಅಡಿ ಎಫ್​ಐಆರ್ ದಾಖಲಾಗಿದೆ.

3.5 ಕೋಟಿ ರೂಪಾಯಿಗಳನ್ನು 2018ರಲ್ಲೇ ಧ್ರುವ ಸರ್ಜಾಗೆ ನೀಡಲಾಗಿದ್ದು ಇದಕ್ಕೆ ಈವರೆಗೆ ಬಡ್ಡಿಯೊಂದಿಗೆ ನಷ್ಟವನ್ನು ಲೆಕ್ಕ ಹಾಕಿದ್ರೆ 9.58 ಕೋಟಿ ರೂಪಾಯಿಗೂ ಅಧಿಕವಾಗುತ್ತದೆ. ಇನ್ನು ನಟ ಧ್ರುವ ಸರ್ಜಾ ಅವರಿಗೆ ಹಣ ನೀಡಿರುವ ಕುರಿತು ಒಪ್ಪಂದ, ಹಣಕಾಸಿನ ದಾಖಲೆಗಳು, ಅಗ್ರಿಮೆಂಟ್ ಹಾಗೂ ಬ್ಯಾಂಕ್​ನಲ್ಲಿ ಹಣದ ವ್ಯವಹಾರ ಮಾಡಿರುವ ದಾಖಲೆಗಳನ್ನು ಹೆಗಡೆ, ಪೊಲೀಸರಿಗೆ ಸಾಕ್ಷಿಯಾಗಿ ನೀಡಿದ್ದಾರೆ. ಸದ್ಯ ತನಿಖಾಧಿಕಾರಿಗಳು ಇವುಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

V Care ಕ್ಲಿನಿಕ್‌ ನಲ್ಲಿ ನಡೀತಿದೆ ಮಹಾಮೋಸ! V Care ನಲ್ಲಿ ಇದ್ದಾರಾ ನಕಲಿ ವೈದ್ಯರು?

ಧ್ರುವ ಸರ್ಜಾ ವಿರುದ್ಧ ಕೋಟಿ ಕೋಟಿ ಹಣ ವಂಚನೆ ಆರೋಪ.. FIR ದಾಖಲು. ಮುಂಬೈನ ಅಂಬೋಲಿ ಪೊಲೀಸರಿಂದ ಎಫ್​ಐಆರ್ ದಾಖಲು.ನಿರ್ದೇಶಕನೊಂದಿಗೆ ವಂಚನೆ ಮಾಡಿದ ಆರೋಪದಲ್ಲಿ ದೂರು ದಾಖಲು. ರಾಘವೇಂದ್ರ ಹೆಗಡೆಯಿಂದ 3.15 ಕೋಟಿ ರೂಪಾಯಿ ಪಡೆದ ಆರೋಪ. ಹೆಗಡೆಯವರು 2018 ಮತ್ತು 2021ರ ನಡುವೆ ನಟನಿಗೆ ಹಣ ನೀಡಿದ್ದರು. ಹಣ ಪಡೆದ ನಂತರ ತನ್ನ ನಟನೆಯ ಬದ್ಧತೆ ಪೂರೈಸುವಲ್ಲಿ ವಿಳಂಬ. Bಯಾವುದೇ ಶೂಟಿಂಗ್​​ಗೆ ಹಾಜರಾಗಲಿಲ್ಲ ಈ ಹಿನ್ನೆಲೆ ಕೇಸ್ ಹಾಕಲಾಗಿದೆ.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಯಶ್ ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!