10 ಕೋಟಿ ಆಸ್ತಿ ಕಬಳಿಸಲು ಸ್ಕೆಚ್ ಹಾಕಿದ್ರಾ! MLC ಮಂಜೇಗೌಡ?

ಮೈಸೂರು : ಭೂಮಿಯನ್ನು ಕಬಳಿಸುವುದರಲ್ಲಿ ಕುಟುಂಬದ ಜಮೀನು ವಾದದಲ್ಲಿ ಗಂಭೀರ ಘಟನೆ ಒಂದು ನಡೆದಿದೆ. ಮೈಸೂರು ತಾಲೂಕು ಮಂಡಕಹಳ್ಳಿ ಗ್ರಾಮದ ಪತ್ರಪ್ಪ ಎಂಬ ವ್ಯಕ್ತಿಯ 4 ಎಕರೆ 19 ಗುಂಟೆಗಳ ಭೂಮಿಯನ್ನು ಕಬಳಿಸಲು ಸತ್ತು ಹೋದ ವ್ಯಕ್ತಿಯ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿರುವ ಘಟನೆ ನಡೆದಿದೆ.

ನೀಲಕಂಠ ನರಸಿಂಹ ಶರ್ಮ ಎಂಬವರು 2018ರಲ್ಲಿ ಮೃತಪಟ್ಟಿದ್ದು, ಅವರ ಮರಣ ಪ್ರಮಾಣಪತ್ರವು ಕೂಡ ಪ್ರಾಯೋಗಿಕ ದಾಖಲೆಯಾಗಿದೆ. ಆದರೆ, ಅವರ ಸಾವಿನ ಆರು ವರ್ಷಗಳ ನಂತರ, 2024 ರಲ್ಲಿ ಅವರ ಹೆಸರಿನಲ್ಲಿ ಜಿಪಿಎ ಮಾಡಲಾಗಿದೆ. ಅವರೇ ಬಂದು ಜಿಪಿಎ ಮಾಡಿಕೊಟ್ಟ ಬಗ್ಗೆ ದಾಖಲೆ ಸೃಷ್ಟಿ ಮಾಡಲಾಗಿದೆ. ಈ ಜಿಪಿಎ ಕುರಿತು ನಕಲಿ ದಾಖಲೆ ಸೃಷ್ಟಿಸಿದ್ದು, ಈ ಮೂಲಕ ಭೂಮಿಯನ್ನು ಕಬಳಿಸುವ ಪ್ರಯತ್ನ ನಡೆದಿದೆ.

https://www.instagram.com/reel/DNIGddOxEMs/?utm_source=ig_web_button_share_sheet10 ನಕಲಿ ದಾಖಲೆ ಸೃಷ್ಟಿಸಿ 7 ವರ್ಷಗಳ ನಂತರ ಜಿಪಿಎ, ಆಸ್ತಿ ಕಬಳಿಸಿ ಎಂ ಎಲ್ ಸಿ ಮಂಜೇಗೌಡಗೆ ಮಾರಾಟ!

ಈ ಕುರಿತು ಅನುಮಾನ ಬಂದ ಪತ್ರಪ್ಪ ಮುದ್ದಿನ ಮೊಮ್ಮಗ ಕಿಶೋರ್ ಅವರು ದಕ್ಷಿಣ ಪೊಲೀಸ್ ಠಾಣೆಗೆ ಭೂಕಬಳಿಕೆ ದೂರು ನೀಡಿದ್ದು, ನಮ್ಮ ತಾತನ ಆಸ್ತಿಯನ್ನು ಕಬಳಿಸುವ ಉದ್ದೇಶದಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ ಎಂದು ಹೇಳಿದ್ದಾರೆ. ನಮ್ಮ ದೊಡ್ಡಪ್ಪ ಅಂದರೆ ಪತ್ರಪ್ಪ ಮತ್ತೊಬ್ಬ ಮಗ ಪ್ರಭುದೇವ ಅವರಿಂದ ನೀಲಕಂಠ ನರಸಿಂಹ ಶರ್ಮಾ ಅವರ ಆಸ್ತಿ ಮಾರಾಟ ಮಾಡಲಾಗಿದೆ. ಕಿಶೋರ್ ಅಪ್ರಪ್ತಾರಾಗಿರುವಾಗ ಕಾನೂನು ಬಾಹಿರವಾಗಿ ಮಾರಾಟ ಮಾಡಿದ್ದಾರೆಂದು ಈ‌ ಬಗ್ಗೆ ಹೈಕೋರ್ಟ್‌ನಲ್ಲಿ ಕಿಶೋರ್ ಪರ ತೀರ್ಪು ಬಂದಿದೆ.

ಈ ಸಂಬಂಧ ವಿವೇಕ್ ಕೆ. ಹಟ್ಟಿ, ಸುಮಾ ಜಿ, ಅನಿತಾ ಶೆಟ್ಟಿ, ಪುಷ್ಪಾ ಡಿ ಮತ್ತು ನೀಲಕಂಠ ನರಸಿಂಹ ಶರ್ಮಾ. ಇವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಇವರಿಂದ ಭೂಮಿ ಇವರಿಂದ ಎಂ ಎಲ್ ಸಿ ಸಿ.ಎನ್.ಮಂಜೇಗೌಡ, ಶಂಕರ್ ರಾವ್, ಎಸ್ ಸತೀಶ್ ಹಂಚಲ್ಕರ್ ಅವರಿಗೆ ಮಾರಾಟಗೊಂಡಿದೆ ಎನ್ನಲಾಗಿದೆ. ಆದರೆ ತಹಶೀಲ್ದಾರ್ ಖಾತೆ ಮಾಡಿಕೊಟ್ಟಿರುವುದಿಲ್ಲ ಎನ್ನಲಾಗಿದೆ.

ಹೈಕೋರ್ಟ್ ನಲ್ಲಿ ಸಹ ಈ ಪ್ರಕರಣ ಸಂಬಂಧವಾಗಿ ಕಿಶೋರ್ ಪರ ತೀರ್ಪು ಬಂತು. ಸತ್ತುಹೋದ ನೀಲಕಂಠ ನರಸಿಂಹ ಶರ್ಮ ಅವರಿಂದ ಜಿಪಿಎ ಮಾಡಿಸಿಕೊಂಡು ಕಬಳಿಕೆಗೆ ಮುಂದಾದ ಆರೋಪ ವಿವಾದದಲ್ಲಿದೆ. ಈ ಪ್ರಕರಣವು ಸೂಕ್ಷ್ಮ ತನಿಖೆಗೆ ಒಳಪಡುವಂತಾಗಿದೆ ಮತ್ತು ಸಂಬಂಧಿತರ ಹಿರಿಯ ನ್ಯಾಯಾಂಗ ಕ್ರಮಗಳು ಹೆಚ್ಚುವರಿ ಸ್ಪಷ್ಟತೆ ಒದಗಿಸುವಲ್ಲಿ ನಿರೀಕ್ಷಿಸಲಾಗಿದೆ.

ಆಸ್ತಿ ಜಿಪಿಎ ಎಂದರೇನು?
ಆಸ್ತಿಯಲ್ಲಿನ ಜಿಪಿಎ ಎಂದರೆ ಜನರಲ್ ಪವರ್ ಆಫ್ ಅಟಾರ್ನಿ, ಆಸ್ತಿ ವ್ಯವಹಾರಗಳಲ್ಲಿ ಕ್ರಮಗಳನ್ನು ಅಧಿಕೃತಗೊಳಿಸಲು ಅವಕಾಶ. ವ್ಯಕ್ತಿ ಜೀವಂತ ಇರಬೇಕು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!