ನಾದಿನಿ ಮನೆಗೆ ಕುಂಕುಮಕ್ಕೆ ಹೋಗ್ತಿದ್ದ ದಂಪತಿಗೆ ಅಪಘಾತ : ವರಮಹಾಲಕ್ಷ್ಮಿ ಹಬ್ಬದಂದೇ ಹೋಯ್ತು ಮುತ್ತೈದೆ ಪ್ರಾಣ !

ವರಮಹಾಲಕ್ಷ್ಮಿ ಹಬ್ಬದಂದು ನಾದಿನಿ ಮನೆಗೆ ಕುಂಕುಮಕ್ಕೆ ಎಂದು ಬೈಕ್​ನಲ್ಲಿ ಹೋಗುತ್ತಿದ್ದ ದಂಪತಿಗೆ ಲಾರಿಯೊಂದು ಗುದ್ದಿದೆ. ಇದರ ಪರಿಣಾಮ ಮಹಿಳೆ ಜೀವ ಕಳೆದುಕೊಂಡಿದ್ದು ಪತಿಗೆ ಸಣ್ಣಪುಟ್ಟ ಗಾಯಗಳು ಆಗಿವೆ.

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದಂದು ನಾದಿನಿ ಮನೆಗೆ ಕುಂಕುಮಕ್ಕೆ ಎಂದು ಬೈಕ್​ನಲ್ಲಿ ಹೋಗುತ್ತಿದ್ದ ದಂಪತಿಗೆ ಲಾರಿಯೊಂದು ಗುದ್ದಿದೆ. ಇದರ ಪರಿಣಾಮ ಮಹಿಳೆ ಜೀವ ಕಳೆದುಕೊಂಡಿದ್ದು ಪತಿಗೆ ಸಣ್ಣಪುಟ್ಟ ಗಾಯಗಳು ಆಗಿವೆ. ಲಗ್ಗೆರೆ ಬ್ರಿಡ್ಜ್ ಬಳಿ ಈ ಘಟನೆ ನಡೆದಿದೆ.

ಲಗ್ಗೆರೆ ನಿವಾಸಿ ಗೀತಾ (23) ಜೀವ ಕಳೆದುಕೊಂಡ ಮಹಿಳೆ. ಈಕೆಯ ಗಂಡ ಸುನೀಲ್​ಗೆ ಗಾಯಗಳು ಆಗಿವೆ. ಈ ದಂಪತಿ ಕಳೆದ 3 ತಿಂಗಳ ಹಿಂದೆ ಮದುವೆಯಾಗಿದ್ದರು. ಲಗ್ಗೆರೆ ಬಳಿ 1 ವಾರದ‌ ಹಿಂದಷ್ಟೇ ಮನೆ ಮಾಡಿಕೊಂಡಿದ್ದರು. ಕಳೆದ ಭಾನುವಾರ ಹಾಲು ಉಕ್ಕಿಸಿದ್ದ ಪತಿ-ಪತ್ನಿ ಸಂಭ್ರಮಿಸಿದ್ದರು. ವರಮಹಾಲಕ್ಷ್ಮೀ ಹಬ್ಬಕ್ಕೆ ತವರು ಮನೆಗೆಂದು ಪತ್ನಿಯನ್ನ ಚಂದ್ರ ಲೇಔಟ್​ನಲ್ಲಿರುವ ಅವರ ಅಮ್ಮನ ಮನೆಗೆ ಪತಿ ಕರೆತಂದಿದ್ದರು.

ಹಬ್ಬದ ಹಿನ್ನೆಲೆಯಲ್ಲಿ ಮಲ್ಲೇಶ್ವರಂನಲ್ಲಿರುವ ನಾದಿನಿ (ಗಂಡನ ಅಕ್ಕ) ಮನೆಗೆ ಕುಂಕುಮಕ್ಕಾಗಿ ಹೋಗುತ್ತಿದ್ದರು. ಮಲ್ಲೇಶ್ವರಂನ ನಾದಿನಿ ಮನೆಗೆ ತೆರಳುವಾಗ ಲಗ್ಗೆರೆ ಬಳಿ ಅಪಘಾತ ಸಂಭವಿಸಿದೆ. ಲಗ್ಗೆರೆ ಬ್ರಿಡ್ಜ್ ಬಳಿ ಬೈಕ್ ಮತ್ತು 12 ವ್ಹೀಲ್ ಲಾರಿ ನಡುವೆ ಅಪಘಾತವಾಗಿದೆ. ತಲೆಗೆ ಗಂಭೀರ ಗಾಯವಾದ ಕಾರಣ ಪತ್ನಿ ಸ್ಥಳದಲ್ಲೇ ಜೀವ ಬಿಟ್ಟಿದ್ದಾರೆ. ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದ್ದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!