ನಾದಿನಿ ಮನೆಗೆ ಕುಂಕುಮಕ್ಕೆ ಹೋಗ್ತಿದ್ದ ದಂಪತಿಗೆ ಅಪಘಾತ : ವರಮಹಾಲಕ್ಷ್ಮಿ ಹಬ್ಬದಂದೇ ಹೋಯ್ತು ಮುತ್ತೈದೆ ಪ್ರಾಣ !

ವರಮಹಾಲಕ್ಷ್ಮಿ ಹಬ್ಬದಂದು ನಾದಿನಿ ಮನೆಗೆ ಕುಂಕುಮಕ್ಕೆ ಎಂದು ಬೈಕ್​ನಲ್ಲಿ ಹೋಗುತ್ತಿದ್ದ ದಂಪತಿಗೆ ಲಾರಿಯೊಂದು ಗುದ್ದಿದೆ. ಇದರ ಪರಿಣಾಮ ಮಹಿಳೆ ಜೀವ ಕಳೆದುಕೊಂಡಿದ್ದು ಪತಿಗೆ ಸಣ್ಣಪುಟ್ಟ ಗಾಯಗಳು ಆಗಿವೆ.

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದಂದು ನಾದಿನಿ ಮನೆಗೆ ಕುಂಕುಮಕ್ಕೆ ಎಂದು ಬೈಕ್​ನಲ್ಲಿ ಹೋಗುತ್ತಿದ್ದ ದಂಪತಿಗೆ ಲಾರಿಯೊಂದು ಗುದ್ದಿದೆ. ಇದರ ಪರಿಣಾಮ ಮಹಿಳೆ ಜೀವ ಕಳೆದುಕೊಂಡಿದ್ದು ಪತಿಗೆ ಸಣ್ಣಪುಟ್ಟ ಗಾಯಗಳು ಆಗಿವೆ. ಲಗ್ಗೆರೆ ಬ್ರಿಡ್ಜ್ ಬಳಿ ಈ ಘಟನೆ ನಡೆದಿದೆ.

ಲಗ್ಗೆರೆ ನಿವಾಸಿ ಗೀತಾ (23) ಜೀವ ಕಳೆದುಕೊಂಡ ಮಹಿಳೆ. ಈಕೆಯ ಗಂಡ ಸುನೀಲ್​ಗೆ ಗಾಯಗಳು ಆಗಿವೆ. ಈ ದಂಪತಿ ಕಳೆದ 3 ತಿಂಗಳ ಹಿಂದೆ ಮದುವೆಯಾಗಿದ್ದರು. ಲಗ್ಗೆರೆ ಬಳಿ 1 ವಾರದ‌ ಹಿಂದಷ್ಟೇ ಮನೆ ಮಾಡಿಕೊಂಡಿದ್ದರು. ಕಳೆದ ಭಾನುವಾರ ಹಾಲು ಉಕ್ಕಿಸಿದ್ದ ಪತಿ-ಪತ್ನಿ ಸಂಭ್ರಮಿಸಿದ್ದರು. ವರಮಹಾಲಕ್ಷ್ಮೀ ಹಬ್ಬಕ್ಕೆ ತವರು ಮನೆಗೆಂದು ಪತ್ನಿಯನ್ನ ಚಂದ್ರ ಲೇಔಟ್​ನಲ್ಲಿರುವ ಅವರ ಅಮ್ಮನ ಮನೆಗೆ ಪತಿ ಕರೆತಂದಿದ್ದರು.

ಹಬ್ಬದ ಹಿನ್ನೆಲೆಯಲ್ಲಿ ಮಲ್ಲೇಶ್ವರಂನಲ್ಲಿರುವ ನಾದಿನಿ (ಗಂಡನ ಅಕ್ಕ) ಮನೆಗೆ ಕುಂಕುಮಕ್ಕಾಗಿ ಹೋಗುತ್ತಿದ್ದರು. ಮಲ್ಲೇಶ್ವರಂನ ನಾದಿನಿ ಮನೆಗೆ ತೆರಳುವಾಗ ಲಗ್ಗೆರೆ ಬಳಿ ಅಪಘಾತ ಸಂಭವಿಸಿದೆ. ಲಗ್ಗೆರೆ ಬ್ರಿಡ್ಜ್ ಬಳಿ ಬೈಕ್ ಮತ್ತು 12 ವ್ಹೀಲ್ ಲಾರಿ ನಡುವೆ ಅಪಘಾತವಾಗಿದೆ. ತಲೆಗೆ ಗಂಭೀರ ಗಾಯವಾದ ಕಾರಣ ಪತ್ನಿ ಸ್ಥಳದಲ್ಲೇ ಜೀವ ಬಿಟ್ಟಿದ್ದಾರೆ. ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದ್ದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು