ಮಕ್ಕಳೊಂದಿಗೆ ಮೋದಿ ರಕ್ಷಾಬಂಧನ ಸಂಭ್ರಮ : ಪ್ರಧಾನಿಗೆ ರಾಖಿ ಕಟ್ಟಿದ ಶಾಲಾ ಮಕ್ಕಳು, ಸೋದರಿಯರು .

ಇವತ್ತು ರಕ್ಷಾಬಂಧನ ಹಬ್ಬದ ಸಂಭ್ರಮ. ಎಲ್ಲ ಸೋದರಿಯರು ತಮ್ಮ ಸೋದರರಿಗೆ ರಾಖಿ ಕಟ್ಟುತ್ತಿದ್ದಾರೆ. ಪ್ರಧಾನಿ ಮೋದಿಗೆ ದೆಹಲಿಯಲ್ಲಿ ಶಾಲಾ ಮಕ್ಕಳು ರಾಖಿ ಕಟ್ಟಿದ್ದಾರೆ. ಜೊತೆಗೆ ಪ್ರಜಾಪಿತ ಬ್ರಹ್ಮ ಕುಮಾರಿ ಸಂಘಟನೆಯ ಸೋದರಿಯರು ಪ್ರಧಾನಿ ಮೋದಿಗೆ ರಾಖಿ ಕಟ್ಟಿದ್ದರು

ದೇಶದೆಲ್ಲೆಡೆ ಇಂದು ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಗುತ್ತಿದೆ. ಸೋದರಿಯರು ತಮ್ಮ ಸೋದರರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಹಬ್ಬವನ್ನು ಆಚರಿಸುತ್ತಿದ್ದಾರೆ. ಸೋದರಿಯರು ಸಂಕಷ್ಟದಲ್ಲಿದ್ದಾಗ, ಸೋದರರು ಬಂದು ರಕ್ಷಿಸುತ್ತಾರೆ. ಈ ಪ್ರೀತಿಯ, ಸೋದರತ್ವ, ಭಾಂಧವ್ಯದ ಸಂಕೇತವಾಗಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಗುತ್ತಿದೆ. ಹಳ್ಳಿಯಿಂದ ದಿಲ್ಲಿಯವರೆಗೂ ಎಲ್ಲೆಲ್ಲೂ ಇಂದು ರಕ್ಷಾ ಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಪ್ರಧಾನಿ ನಿವಾಸದಿಂದ ಹಿಡಿದು ಹಳ್ಳಿಯ ಬಡವರ ಮನೆಯವರೆಗೂ ಎಲ್ಲೆಲ್ಲೂ ರಕ್ಷಾ ಬಂಧನ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಪ್ರಧಾನಿ ನಿವಾಸಕ್ಕೆ ದೆಹಲಿಯ ಶಾಲಾ ಮಕ್ಕಳು ಭೇಟಿ ನೀಡಿ ಪ್ರಧಾನಿ ಮೋದಿಗೆ ಸೋದರತ್ವದ ಸಂಕೇತವಾದ ರಾಖಿಯನ್ನು ಕಟ್ಟಿದ್ದರು. ಪ್ರಧಾನಿ ಮೋದಿ ಖುಷಿಯಿಂದ ಶಾಲಾ ಮಕ್ಕಳ ಜೊತೆ ಬೆರೆತು, ಮಾತನಾಡಿ ರಾಖಿ ಕಟ್ಟಿಸಿಕೊಂಡರು. ಮಕ್ಕಳಿಗೆ ಚಾಕಲೇಟ್ ಸೇರಿದಂತೆ ಗಿಫ್ಟ್ ನೀಡಿದ್ದರು. ಪ್ರಧಾನಿ ನಿವಾಸದ ರಕ್ಷಾ ಬಂಧನ ಹಬ್ಬದ ಪೋಟೋಗಳ ಝಲಕ್ ಇಲ್ಲಿದೆ ನೋಡಿ.

 

 

 

ಓರ್ವ ಬಾಲಕಿಯ ಮೋದಿಗೆ ರಾಖಿ ಕಟ್ಟಿದ ಬಳಿಕ ಮೋದಿ ಜೊತೆಗೆ ಆಟವಾಡಿದ್ದರು. ಪ್ರಜಾಪಿತ ಬ್ರಹ್ಮಕುಮಾರಿ ಸಂಘಟನೆಯ ಸೋದರಿಯರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಕ್ಷಾ ಬಂಧನ ಹಬ್ಬದ ಪ್ರಯುಕ್ತ ಮೋದಿ ಅವರಿಗೆ ರಾಖಿ ಕಟ್ಟಿ ಸಂಭ್ರಮಿಸಿದ್ದರು. ರಕ್ಷಾ ಬಂಧನದ ವೇಳೆ ಪ್ರತಿ ವರ್ಷವೂ ಮೋದಿ ಸೋದರಿಯರಿಂದ ರಾಖಿ ಕಟ್ಟಿಸಿಕೊಳ್ಳುತ್ತಾರೆ. ಇಂದು ಆ ಸಂಪ್ರದಾಯವನ್ನು ಮುಂದುವರಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಕೈ ತುಂಬ ಇಂದು ರಾಖಿಗಳು ತುಂಬಿದ್ದವು. ಬಣ್ಣ ಬಣ್ಣದ ರಾಖಿಗಳನ್ನು ಶಾಲಾ ಮಕ್ಕಳು, ಪ್ರಜಾಪಿತ ಬ್ರಹ್ಮಕುಮಾರಿ ಸೋದರಿಯರು ಕಟ್ಟಿದ್ದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!