ನಾಳೆ ಹಳದಿ ಲೈನ್ ಮೆಟ್ರೋಗೆ ಹಸಿರು ನಿಶಾನೆ ತೋರಲಿರುವ ಪ್ರಧಾನಿ. ನಾಳಿನ ವೇಳಾಪಟ್ಟಿ ಹೀಗಿದೆ ?

ಹಲವು ವರ್ಷಗಳ ಬಳಿಕ ನನಸಾಗಿರೋ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಚಾರ ಆರಂಭಕ್ಕೆ ಕೌಂಟ್​ ಡೌನ್ ಆರಂಭವಾಗಿದೆ. ನಾಳೆ ಹಳದಿ ಮಾರ್ಗಕ್ಕೆ ದೇಶದ ಪ್ರಧಾನಿ ಹಸಿರು ನಿಶಾನೆ ತೋರಲಿದ್ದಾರೆ. ರಾಜ್ಯರಾಜಧಾನಿಯಲ್ಲಿ ಸಂಚಾರಕ್ಕೆ ಸಿದ್ದಗೊಂಡಿರೋ ಹಳದಿ ಲೈನ್ ಮೆಟ್ರೋಗೆ ಹಸಿರು ನಿಶಾನೆ ತೋರಲು ಪ್ರಧಾನಿ ಮೋದಿ ಆಗಸ್ಟ್​ 10ರಂದು (ನಾಳೆ) ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಲ್ಲದೇ ಮೂರು ವಂದೇ ಭಾರತ್ ರೈಲುಗಳಿಗೂ ಮೋದಿ ಅಂದು ಚಾಲನೆ ನೀಡಲಿದ್ದಾರೆ. ಬೆಂಗಳೂರು-ಬೆಳಗಾವಿ, ಅಮೃತಸರ-ಮಾತಾ ವೈಷ್ಣೋದೇವಿ, ನಾಗಪುರ-ಪುಣೆ ಮಾರ್ಗದ ವಂದೇ ಭಾರತ್ ರೈಲುಗಳನ್ನ ಮೋದಿ ಉದ್ಘಾಟಿಲಿದ್ದಾರೆ.. ಇದೇ ವೇಳೆ ನಮ್ಮ ಮೆಟ್ರೋದ 3ನೇ ಹಂತದ 2 ಕಾರಿಡಾರ್‌ಗಳಿಗೂ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ರಾಜಧಾನಿಗೆ ನಮೋ! ನಾಳೆ ಪ್ರಧಾನಿ ವೇಳಾಪಟ್ಟಿ ಏನು ?

    • ನಾಳೆ ಬೆಳಗ್ಗೆ 7.50ಕ್ಕೆ ದೆಹಲಿಯಿಂದ ಹೊರಡಲಿರುವ ಮೋದಿ
    • ಬೆ.10.30ಕ್ಕೆ ಬೆಂಗಳೂರು HAL ವಿಮಾನ ನಿಲ್ದಾಣಕ್ಕೆ ಮೋದಿ ಆಗಮನ
    • ಬೆ.10.50ಕ್ಕೆ ಹೆಲಿಕಾಪ್ಟರ್‌ನಲ್ಲಿ ಹೆಚ್‌ಕ್ಯೂಟಿಸಿ ಹೆಲಿಪ್ಯಾಡ್‌ಗೆ ಆಗಮನ
    • ಬೆ.11ಕ್ಕೆ ರಸ್ತೆ ಮೂಲಕ ಸಂಗೊಳ್ಳಿ ರಾಯಣ್ಣ ಸಿಟಿ ರೈಲ್ವೆ ನಿಲ್ದಾಣಕ್ಕೆ ಎಂಟ್ರಿ
    • ಬೆ.11.15ಕ್ಕೆ ರೈಲ್ವೆ ನಿಲ್ದಾಣದಲ್ಲಿ 3 ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ
    • ಬೆ.11.45ಕ್ಕೆ ರಸ್ತೆ ಮಾರ್ಗವಾಗಿ ರಾಗಿಗುಡ್ಡದ ಮೆಟ್ರೋ ನಿಲ್ದಾಣಕ್ಕೆ ಆಗಮನ
    • ಬೆ.11.50 ರಿಂದ ಮ.12.50ವರೆಗೂ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ
    • ಮೆಟ್ರೋ ರೈಲಿನಲ್ಲಿಯೇ ಎಲೆಕ್ಟ್ರಾನಿಕ್‌ ಸಿಟಿ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣ
    • ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ನಮ್ಮ ಮೆಟ್ರೋದ 3ನೇ ಹಂತಕ್ಕೆ ಶಂಕುಸ್ಥಾಪನೆ
    • ಮ.1 ರಿಂದ 2 ಗಂಟೆವರೆಗೂ IIIT ಆಡಿಟೋರಿಯಂನಲ್ಲಿ ಕಾರ್ಯಕ್ರಮ
    • ಮ.2.05ಕ್ಕೆ ಹೆಲಿಕಾಪ್ಟರ್‌ನಲ್ಲಿ HAL ವಿಮಾನ ನಿಲ್ದಾಣಕ್ಕೆ ನಮೋ ವಾಪಸ್
    • ಮ.2.40ಕ್ಕೆ HAL ವಿಮಾನ ನಿಲ್ದಾಣದಿಂದ ದೆಹಲಿಗೆ ಮೋದಿಯ ಪ್ರಯಾಣ

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!