ಚುನಾವಣಾ ಅವ್ಯವಹಾರ : ಯತೀಂದ್ರ ಸಿದ್ದರಾಮಯ್ಯ ಮೈಸೂರಿನಲ್ಲಿ ಹೋರಾಟಕ್ಕೆ ಕರೆ.

ಮೈಸೂರು : ದೇಶದಲ್ಲಿ ಚುನಾವಣಾ ಅವ್ಯವಹಾರ ನಡೆಯುತ್ತಿದೆ. ಮತಗಳ್ಳತನದ ವಿರುದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧ್ವನಿ ಎತ್ತಿದ್ದಾರೆ. ಹೀಗಾಗಿ ನೀವು ಕೂಡ ಹೋರಾಟ ನಡೆಸಿ ರಾಹುಲ್ ಗಾಂಧಿ ಅವರ ಜೊತೆ ಕೈ ಜೊಡಿಸಿ ಎಂದು ಸಾರ್ವಜನಿಕರಿಗೆ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಕರೆ ನೀಡಿದರು.

ವರುಣಾ ಕ್ಷೇತ್ರ ಕಾರ್ಯಕ್ರಮದಲ್ಲಿ ಮಾತನಾಡಿದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ, ವರುಣಾ ಕ್ಷೇತ್ರ ನಮ್ಮ ಕ್ಷೇತ್ರ ನಮ್ಮ ಮನೆ. ವರುಣಾದಲ್ಲಿ 1108 ಕೋಟಿ ವೆಚ್ಚದಲ್ಲಿ ಕಾಮಗಾರಿ ಮಾಡುತ್ತಿದ್ದೇವೆ. ಕಳೆದ ಬಾರಿ 570 ಕೋಟಿ ಅನುದಾನ ಕೊಟ್ಟಿದ್ದರು. ಇದೀಗ ದುಪ್ಪಟ್ಟು ಅನುದಾನ ಸಿಎಂ ಕೊಟ್ಟಿದ್ದಾರೆ. ಇದರಿಂದ ಅಭಿವೃದ್ಧಿ ವಿಚಾರಕ್ಕೆ ಹಣದ ಕೊರತೆ ಇಲ್ಲ ಎಂದು ತೋರಿಸುತ್ತೆ. ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಯನ್ನು ಟೀಕೆ ಮಾಡುತ್ತಾರೆ. ಗ್ಯಾರೆಂಟಿ ಯೋಜನೆಯಿಂದ ಖಜಾನೆ ಖಾಲಿ ಆಗಿದೆ ಅಂತ ಹೇಳುತ್ತಿದ್ದಾರೆ ಅವರ ಹೇಳಿಕೆಗಳಿಗೆ ಇಂದಿನ ಕಾರ್ಯಕ್ರಮ ಉತ್ತರ. ಕೇವಲ ವರುಣಾ ಅಲ್ಲ ರಾಜ್ಯಾದ್ಯಂತ ಅಭಿವೃದ್ದಿ ನಡೆಯುತ್ತಿದೆ.

ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ಭಾರತದಲ್ಲೆ ಮೊದಲಿದೆ. ಎರಡು ಲಕ್ಷಕ್ಕೂ ಮೀರದ ತಲಾ ಆದಾಯ. ತಲಾ ಆದಾಯ ಹೆಚ್ಚಳಕ್ಕೆ ಗ್ಯಾರಂಟಿ ಯೋಜನೆ ಕಾರಣ. ಜನರ ತೆರಿಗೆ ಹಣ ಅವರಗೆ ವಾಪಸ್ ಕೊಟ್ಟಿದ್ದೇವೆ. ಅದೇ ಹಣವನ್ನು ಅವರು ಖರ್ಚು ಮಾಡಿ ಆರ್ಥಿಕ ಪ್ರಗತಿ ಆಗಿದೆ . ಇದು ಗ್ಯಾರೆಂಟಿ ಯೋಜನೆ ಟೀಕಿಸಿದವರಿಗೆ ಮುಖಕ್ಕೆ ಹೊಡೆದ ಹಾಗೇ ಆಗಿದೆ ಎಂದರು.
ಶ್ರೀಮಂತರು ಹಾಗೂ ಬಡವರ ನಡುವೆ ಆರ್ಥಿಕತೆ ಅಂತರ ಹೆಚ್ಚಾಗುತ್ತಿದೆ. ಇದಕ್ಕೆ ಕೇಂದ್ರದ ನಿಯಮಗಳು ಕಾರಣ. ಇದನ್ನ ನಿವಾರಿಸಲು ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆ ಜಾರಿ ಮಾಡಿದ್ದು. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಸರ್ಕಾರ. ಭಾರತದಲ್ಲೆ ಕೊಟ್ಟ ಭರವಸೆ ಈಡೇರಿಸಿದ ಸರ್ಕಾರ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಎಂದು ಹೇಳಿದರು.

ರಾಹುಲ್ ಗಾಂಧಿ ಪ್ರತಿಭಟನೆ ವಿಚಾರ ಕುರಿತು ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ದೇಶದಲ್ಲಿ ಚಯನಾವಣಾ ಅವ್ಯವಹಾರ ನಡೆಯುತ್ತಿದೆ. ಅಡ್ಡದಾರಿಯಿಂದ ಸರ್ಕಾರ ಅಧಿಕಾರಕ್ಕೆ ಬರುತ್ತಿವೆ . ಇದರಲ್ಲಿ ಚುನಾವಣೆ ಆಯೋಗ ಶಾಮೀಲಾಗಿದೆ ಎಂದು ರಾಹುಲ್ ಗಾಂಧಿ ಸಾಕ್ಷಿ ಸಮೇತ ಆರೋಪಿಸಿದ್ದಾರೆ. ಇದರಿಂದ ಜನಾದೇಶಕ್ಕೆ ವಿರುದ್ದವಾದ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಫೇಕ್ ವೋಟರ್ ಐಡಿ ಬಳಸಿ ಮತದಾನ ಮಾಡೋದು. ಪ್ರತಿ ಚುನಾವಣೆ ಫೇಕ್ ಮತದಾರರನ್ನು ಸೇರಿಸಿ ಬಿಜೆಪಿ ಪಕ್ಷ ಗೆದ್ದಿದೆ.

ಎಲೆಕ್ಟ್ರಾನಿಕ್ ಡೇಟಾ ಕೊಡಲು ಚುನಾವಣೆ ಆಯೋಗ ಹಿಂದೇಟು ಹಾಕುತ್ತಿದೆ.. ರಾಹುಲ್ ಗಾಂಧಿ ಯವರ ಪ್ರಶ್ನೆಗೆ ಆಯೋಗ ಉತ್ತರ ಕೊಡುತ್ತಿಲ್ಲ. ಇದರಿಂದ ಈ ಅಕ್ರಮದಲ್ಲಿ ಆಯೋಗ ಶಾಮೀಲಾಗಿದೆ ಎಂಬ ಅನುಮಾನ ಮೂಡಿಸುತ್ತಿದೆ. ಚುನಾವಣೆ ಅಕ್ರಮದಿಂದ ಜನಾದೇಶದ ವಿರುದ್ದ ಫಲಿತಾಂಶ ಬರುತ್ತೆ. ಕೇವಲ ದುಡ್ಡು ಇರುವವರು ಚುನಾವಣೆಯಲ್ಲಿ ಆರಿಸಿ ಬರುತ್ತಾರೆ. ಆದರಿಂದ ರಾಹುಲ್ ಗಾಂಧಿ ಕೊಟ್ಟ ಕರೆಗೆ ನಾವು ಜೊತೆಯಾಗಬೇಕು. ನೀವು ಕೂಡ ಹೋರಾಟ ನಡೆಸಿ ರಾಹುಲ್ ಗಾಂಧಿಯವರಿಗೆ ಕೈ ಜೊಡಿಸಿ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!