
ಜಿ.ವಿ. ಸೀತಾರಾಮು ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅದನ್ನು ಖಂಡಿಸಿ ಸಮಾಜದವರು ಎಚ್.ಡಿ. ಕೋಟೆಯಲ್ಲಿ ಪ್ರತಿಭಟಿಸಿ ಕ್ರಮಕ್ಕೆ ಒತ್ತಾಯಿಸಿದ್ದರು. ಪೊಲೀಸ್ ಠಾಣೆಯಲ್ಲಿ FIR ಕೂಡ ದಾಖಲಾಗಿದೆ. ಹೀಗಾಗಿ, ಶಿಸ್ತುಕ್ರಮ ಜರುಗಿಸುವಂತೆ ಅಲ್ಲಿನ ಎರಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಶಾಸಕ ಅನಿಲ್ ಚಿಕ್ಕಮಾದು ಕೋರಿದ್ದರು. ಅದನ್ನು ಆಧರಿಸಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜೆ. ವಿಜಯ್ ಕುಮಾರ್ ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಬರೆದಿದ್ದರು.

ಸೀತಾರಾಮ್ ಅವರ ಮಾತು ಒಕ್ಕಲಿಗ ಸಮುದಾಯಕ್ಕೆ ನೋವುಂಟು ಮಾಡಿರುವುದು ಹಾಗೂ ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಹಿನ್ನೆಲೆಯಲ್ಲಿ ಸೂಕ್ತ ಕ್ರಮಕ್ಕೆ ಜಿಲ್ಲಾ ಕಾಂಗ್ರೆಸ್ ಕೆಪಿಸಿಸಿಗೆ ಶಿಫಾರಸು ಮಾಡಿತ್ತು. ಈ ವಿಚಾರವನ್ನು ಪರಿಶೀಲಿಸಿದ ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯು ಸೀತಾರಾಮ್ ಅವರ ಪಕ್ಷದ ಪ್ರಾಥಮಿಕ ಸದಸ್ಯತ್ವ ರದ್ದುಪಡಿಸಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ.





