ಖ್ಯಾತ ಗಾಯಕಿ ಆಶಾ ಭೋಸ್ಲೆ ಮೊಮ್ಮಗಳು, ಸಿರಾಜ್​ಗೆ ರಾಖಿ ಕಟ್ಟಿ್ದ್ದಾರೆ.. ಇದಕ್ಕೆ ಬಲವಾದ ಕಾರಣವಿದೆ.

ರಕ್ಷಾ ಬಂಧನ ಸಹೋದರ- ಸಹೋದರಿಯರ ಸಂಬಂಧ ಬೆಸೆಯುವಂತಹ ಪವಿತ್ರವಾದ ಹಬ್ಬವಾಗಿದೆ. ಸಹೋದರಿಯೂ ತನ್ನ ಸಹೋದರನಿಗೆ ಆಯಸ್ಸು, ಆರೋಗ್ಯ, ಸಮೃದ್ಧಿ ಎಲ್ಲವೂ ಸಿಗಲಿ ಎಂದು ಹಾರೈಸುವುದು ಆಗಿದೆ. ರಕ್ಷಾ ಬಂಧನದ ಹಿನ್ನೆಲೆ ಕ್ರಿಕೆಟರ್ಸ್​, ಸೆಲೆಬ್ರಿಟಿಗಳು ತಮ್ಮ ಸಹೋದರಿಯಿಂದ ರಾಖಿ ಕಟ್ಟಿಸಿಕೊಂಡು ಖುಷಿ ಪಟ್ಟಿದ್ದಾರೆ. ಅದರಂತೆ ಸ್ಟಾರ್ ಕ್ರಿಕೆಟರ್​ ಮೊಹಮ್ಮದ್ ಸಿರಾಜ್ ಕೂಡ ರಾಖಿ ಕಟ್ಟಿಕೊಳ್ಳುವ ಮೂಲಕ ಆ ವದಂತಿಗಳಿಗೆ ಅಂತಿಮ ತೆರೆ ಎಳೆದಿದ್ದಾರೆ.

ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟ್​, ಪೇಸ್ ಬೌಲರ್ ಆಗಿರುವ ಮೊಹಮ್ಮದ್ ಸಿರಾಜ್ ಅವರಿಗೆ ಆಶಾ ಭೋಸ್ಲೆ ಅವರ ಮೊಮ್ಮಗಳು ಜನೈ ಭೋಸ್ಲೆ ಅವರು ರಾಖಿ ಕಟ್ಟಿ, ಸಿಹಿ ತಿನಿಸಿದ್ದಾರೆ. ಜನೈ ಭೋಸ್ಲೆ ಅವರು ಸಿರಾಜ್ ಅವರ ಕೈಗೆ ರಾಖಿ ಕಟ್ಟಿ, ಸಿಹಿ ತಿನಿಸಿರುವ ವಿಡಿಯೋ, ಫೋಟೋವನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ ಜನೈ ಭೋಸ್ಲೆ ವಿಶೇಷವಾದ ಟ್ಯಾಗ್​ಲೈನ್ ಬರೆದಿದ್ದಾರೆ.

ಉತ್ತಮವಾದದ್ದನ್ನ ಕೇಳಲು ಆಗಲಿಲ್ಲ ಎಂದು ಜನೈ ಭೋಸ್ಲೆ ವಿಡಿಯೋಗೆ ಟ್ಯಾಗ್​ಲೈನ್ ಬರೆದಿದ್ದಾರೆ. ಅವರು ಈ ರೀತಿಯಾದ ಟ್ಯಾಗ್​ಲೈನ್ ಬರೆಯಲು ಬಲವಾದ ಕಾರಣವಿದೆ. ಕಳೆದ ಕೆಲವು ತಿಂಗಳುಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಜನೈ ಭೋಸ್ಲೆ ಹಾಗೂ ಸಿರಾಜ್ ಬಗ್ಗೆ ಬೇರೆಯೇ ಅರ್ಥದಲ್ಲಿ ಮಾತನಾಡಿಕೊಳ್ಳಲಾಗುತ್ತಿತ್ತು. ಆದರೆ ಇಬ್ಬರು ರಕ್ಷಾ ಬಂಧನ ಹಬ್ಬ ಆಚರಣೆ ಮಾಡುವ ಮೂಲಕ ಅದಕ್ಕೆ ತೆರೆ ಎಳೆಯಲಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಯಾವುದು ಸುಳ್ಳು, ಯಾವುದು ನಿಜ ಎನ್ನುವುದನ್ನು ನಂಬೋಕೆ ಆಗಲ್ಲ. ಏಕೆಂದರೆ ಆಶಾ ಬೋಸ್ಲೆ ಅವರ ಮೊಮ್ಮಗಳಾದ ಜನೈ ಭೋಸ್ಲೆ ಹಾಗೂ ಸಿರಾಜ್ ನಡುವೆ ಲವ್ ಇದೆ ಎಂದು ವದಂತಿ ಹಬ್ಬಿಸಲಾಗಿತ್ತು. ಇಬ್ಬರು ಯಾವುದೋ ಒಂದು ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದರು. ಅಂದಿನಿಂದ ಇಬ್ಬರ ನಡುವೆ ಏನೋ ನಡೆಯುತ್ತಿದೆ ಎಂದು ವೈರಲ್ ಮಾಡಲಾಗುತ್ತಿತ್ತು. ಇದರಿಂದ ಬೇಸತ್ತಿದ್ದ ಅವರು ಅಂತಿಮವಾಗಿ ಸ್ಪಷ್ಟನೆಯನ್ನು ರಕ್ಷಾ ಬಂಧನದ ಮೂಲಕ ನೀಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!