ಹಳದಿ ಮಾರ್ಗವು ಲಕ್ಷಾಂತರ ಪ್ರಯಾಣಿಕರ ದೈನಂದಿನ ಪ್ರಯಾಣವನ್ನು ಸುಗಮಗೊಳಿಸುವುದಲ್ಲದೇ, ಪ್ರಮುಖ ವ್ಯಾಪಾರ ಮತ್ತು ತಂತ್ರಜ್ಞಾನ ಕೇಂದ್ರಗಳಿಗೆ ಸಂಪರ್ಕ ಸಾಧಿಸುವ ಮೂಲಕ ನಗರದ ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡುತ್ತದೆ ಎಂದು ಮೋದಿ ಹೇಳಿದರು. ಬೆಂಗಳೂರಿನ ಸಾರ್ವಜನಿಕ ಸಾರಿಗೆಗೆ ಇದು ಒಂದು ಮೈಲಿಗಲ್ಲು ಮತ್ತು ನಗರದ ಸಂಚಾರ ಸಮಸ್ಯೆಗಳನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಹೆಜ್ಜೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

https://youtu.be/6RWsp9y3dQM?si=u3V1YFHJ-DceyjqZತಾಕತ್ತಿದ್ರೆ ಬೆಳಗಿನ ಜಾವ ಸಮಾಧಿ ಒಡಿಬೇಕಿತ್ತು? ದಾದಾನ ಸಮಾಧಿಗೆ 5 ಕುಂಟೆ ಜಾಗ ಕೊಡ್ತೀನಿ!
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಮೆಟ್ರೋ ಹಳದಿ ಮಾರ್ಗಕ್ಕೆ ರಾಜ್ಯ ಸರ್ಕಾರ ಯೋಜನಾ ವೆಚ್ಚದ ಶೇ.80ರಿಂದ 90ರಷ್ಟು ಭರಿಸಿದೆ. ಕೇಂದ್ರದ ಕೊಡುಗೆ ತುಂಬಾ ಕಡಿಮೆ ಎಂದು ಹೇಳಿದರು. ಹಳದಿ ಮಾರ್ಗವು ರಾಗಿಗುಡ್ಡದಿಂದ ಬೊಮ್ಮಸಂದ್ರಕ್ಕೆ ಸಂಪರ್ಕಿಸುತ್ತದೆ. ಬಿಟಿಎಂ ಲೇಔಟ್, ಜಯದೇವ ಆಸ್ಪತ್ರೆ (ಪಿಂಕ್ ಲೈನ್ಗೆ ಇಂಟರ್ಚೇಂಜ್), ಸೆಂಟ್ರಲ್ ಸಿಲ್ಕ್ ಬೋರ್ಡ್ (ಮುಂಬರುವ ಬ್ಲೂ ಲೈನ್ಗೆ ಇಂಟರ್ಚೇಂಜ್) ಮತ್ತು ಎಲೆಕ್ಟ್ರಾನಿಕ್ಸ್ ಸಿಟಿ ಮಾರ್ಗವಾಗಿ ರೈಲು ಸಂಚರಿಸುತ್ತದೆ. ಈ ಕಾರಿಡಾರ್ ಪ್ರಮುಖ ವಸತಿ ಪ್ರದೇಶಗಳು, ಕೈಗಾರಿಕಾ ವಲಯಗಳು ಮತ್ತು ಐಟಿ ಕೇಂದ್ರಗಳನ್ನು ಸಂಪರ್ಕಿಸುತ್ತದೆ.
ನಮ್ಮ ಮೆಟ್ರೋದ 2ನೇ ಹಂತದ ಅಡಿ 7,600 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾದ ಹಳದಿ ಮಾರ್ಗವು ಪ್ರತಿದಿನ ಸುಮಾರು ಎಂಟು ಲಕ್ಷ ಪ್ರಯಾಣಿಕರಿಗೆ ಸೇವೆ ನೀಡುವ ನಿರೀಕ್ಷೆಯಿದೆ. ಇದು ಹೊಸೂರು ರಸ್ತೆಯಲ್ಲಿ, ವಿಶೇಷವಾಗಿ ಸಿಲ್ಕ್ ಬೋರ್ಡ್ ಜಂಕ್ಷನ್ ಮತ್ತು ಎಲೆಕ್ಟ್ರಾನಿಕ್ಸ್ ಸಿಟಿಯ ಸುತ್ತಲೂ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುತ್ತದೆ.
ಹಳದಿ ಮಾರ್ಗ ಉದ್ಘಾಟನೆಯಿಂದ ಬೆಂಗಳೂರಿನ ಮೆಟ್ರೋ ಜಾಲ 96 ಕಿ.ಮೀಗಿಂತ ಹೆಚ್ಚು ವಿಸ್ತರಿಸಿದೆ. ಇದು ದೇಶದ ಎರಡನೇ ಅತಿ ಉದ್ದದ ಮೆಟ್ರೋ ಜಾಲವಾಗಿದೆ. ನಾಳೆಯಿಂದ ಸಾರ್ವಜನಿಕರಿಗೆ ಲಭ್ಯ: ಹಳದಿ ಮಾರ್ಗದ ಸೇವೆಗಳು ನಾಳೆ ಅಂದರೆ ಸೋಮವಾರ ಬೆಳಿಗ್ಗೆಯಿಂದ ಸಾರ್ವಜನಿಕರಿಗೆ ಪ್ರಾರಂಭವಾಗಲಿದ್ದು, ಆರಂಭದಲ್ಲಿ ಪ್ರತಿ 25 ನಿಮಿಷಗಳಿಗೊಮ್ಮೆ ರೈಲುಗಳು ಚಲಿಸುತ್ತವೆ.
ನಮ್ಮ ಮೆಟ್ರೋ 3ನೇ ಹಂತಕ್ಕೆ ಶಂಕುಸ್ಥಾಪನೆ: ಇದೇ ಕಾರ್ಯಕ್ರಮದಲ್ಲೇ ಪ್ರಧಾನಿ ಮೋದಿ ಮೆಟ್ರೋ ಯೋಜನೆಯ 3ನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸಿದರು, ಇದು ₹15,600 ಕೋಟಿಗೂ ಹೆಚ್ಚು ವೆಚ್ಚದಲ್ಲಿ 44 ಕಿ.ಮೀಟರ್ಗಳಿಗೂ ಹೆಚ್ಚು ಉದ್ದದ ಹೊಸ ಮಾರ್ಗಗಳು ಮತ್ತು 31 ನಿಲ್ದಾಣಗಳನ್ನು ಸೇರಿಸಲಿದೆ. ಈ ವಿಸ್ತರಣೆಯು ನಗರದ ನೈಋತ್ಯ ಮತ್ತು ಪಶ್ಚಿಮ ಭಾಗಗಳಲ್ಲಿನ ಸೇವೆಯಿಲ್ಲದ ಪ್ರದೇಶಗಳನ್ನು ಸಂಪರ್ಕಿಸುವತ್ತ ಗಮನಹರಿಸುತ್ತದೆ.





