85 ಮೆಟ್ರೋ ಸ್ಟೇಷನ್​ಗಳಲ್ಲೂ ಅಪರ್ಣಾದ್ದೇ ಧ್ವನಿ! ಯೆಲ್ಲೋ ಲೈನ್ ಗೂ ಬಂತು ಖ್ಯಾತ ನಿರೂಪಕಿ ಕಂಠ..

ಅಪರ್ಣಾ, ಯಾರಿಗೆತಾನೇ ಗೊತ್ತಿಲ್ಲ ಹೇಳಿ , ನಟಿ ಹಾಗೂ ನಿರೂಪಕಿಯಾಗಿ ಜಯಪ್ರಿಯತೆ ಪಡೆದವರು , ಅವರ ಸುಮಧುರ ಧ್ವನಿಯು ಬೆಂಗಳೂರಿನ ಹಸಿರು ಮತ್ತು ನೇರಳೆ ಮೆಟ್ರೋ ಮಾರ್ಗಗಳಲ್ಲಿ ಜನಪ್ರಿಯವಾಗಿತ್ತು. ಇದೀಗ ಹೊಸದಾಗಿ ಉದ್ಘಾಟನೆಯಾದ ಹಳದಿ ಮೆಟ್ರೋ ಮಾರ್ಗದಲ್ಲಿ ಸಹ ಇವರ ಧ್ವನಿಯನ್ನು ಬಳಸಲಾಗಿದೆ. ಅಪರ್ಣಾ ಕ್ಯಾನ್ಸರ್‌ನಿಂದ ಬಳಲುತ್ತಿದ್ದರೂ ತಮ್ಮ ಕೊನೆಯ ದಿನಗಳಲ್ಲಿ ಯೆಲ್ಲೋ ಲೈನ್ ನ ಮೆಟ್ರೋ ಅನ್ನೊನ್ಸಮೆಂಟ್ ರೆಕಾರ್ಡಿಂಗ್‌ ಮಾಡಿದ್ದರು. 2024ರ ಏಪ್ರಿಲ್-ಮೇ ನಲ್ಲಿ ಮೆಟ್ರೋದ ತಾಂತ್ರಿಕ ತಂಡ ಅಪರ್ಣಾ ಬಳಿ ತೆರೆಳಿ ಅವರ ಧ್ವನಿಯನ್ನು ರೆಕಾರ್ಡಿಂಗ್ ಮಾಡಿಕೊಂಡಿತ್ತು.

ಕಳೆದ ವರ್ಷ ಜುಲೈನಲ್ಲಿ ನಿಧನ ಹೊಂದಿದ್ದ ನಿರೂಪಕಿ ಅಪರ್ಣಾ ಅನಾರೋಗ್ಯ ದಿಂದ ಬಳಲುತ್ತಿದ್ದರು . ಕ್ಯಾನ್ಸರ್ ಮಧ್ಯೆಯೂ ಅಪರ್ಣಾ ತಮ್ಮ ಧ್ವನಿ ನೀಡಿ ಕರ್ತವ್ಯ ಮೆರೆದಿದ್ದಾರೆ.

ಹಳದಿ ಬಣ್ಣದ ಮಾರ್ಗ ಭಾನುವಾರ (ಆಗಸ್ಟ್ 10) ಉದ್ಘಾಟನೆಗೊಂಡಿತು. ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು ಲೋಕಾರ್ಪಣೆ ಮಾಡಿದರು. ಆರ್​ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಈ ರೈಲು ಸಂಪರ್ಕ ಕಲ್ಪಿಸುತ್ತದೆ. ಒಟ್ಟೂ 16 ನಿಲ್ದಾಣಗಳನ್ನು ಈ ಮೆಟ್ರೋ ರೈಲು ಹಾದು ಹೋಗುತ್ತದೆ. ಈ ಮಾರ್ಗದಲ್ಲಿ ಅಪರ್ಣಾ ಧ್ವನಿ ಪ್ರತಿಧ್ವನಿಸಲಿದೆ.

 

ಅಪರ್ಣಾ ಧ್ವನಿ ತುಂಬಾನೇ ಸುಮಧುರವಾಗಿತ್ತು. ಅವರು ಆ್ಯಂಕರಿಂಗ್​ಗೆ ನಿಂತರೆ ಬಾಯಿಯಿಂದ ಮುತ್ತುಗಳು ಉದುರುತ್ತಿವೆ ಎಂದನಿಸುತ್ತಿತ್ತು. ಹಸಿರು ಹಾಗೂ ಪರ್ಪಲ್ ಲೈನ್ ಮೆಟ್ರೋಗೆ ಅಪರ್ಣಾ ಅವರೇ ಧ್ವನಿ ನೀಡಿದ್ದರು. ಇದು ಮೆಟ್ರೋದ ಹೈಲೈಟ್ ಕೂಡ ಆಗಿತ್ತು. ಹಳದಿ ಬಣ್ಣದ ಮೆಟ್ರೋಗೂ ಅವರದ್ದೇ ಧ್ವನಿ ಇರಬೇಕು ಎಂಬುದು ಕನ್ನಡಿಗರ ಆಸೆ ಆಗಿತ್ತು. ‘ಹಳೆಯ ಮಾರ್ಗದಲ್ಲಿ ಅಪರ್ಣಾ ಧ್ವನಿ ಮುಂದುವರಿಸುತ್ತೇವೆ. ಹಳದಿ ಬಣ್ಣಕ್ಕೆ ಕಷ್ಟ’ ಎಂದು ಮೆಟ್ರೋ ಅಧಿಕಾರಿಗಳು ಈ ಮೊದಲು ಹೇಳಿದ್ದರು. ಆದರೆ , ಇದೀಗ ಹಳದಿ ಲೈನ್ ಮೆಟ್ರೋಗೂ ಅಪರ್ಣಾ ಅವರ ಧ್ವನಿ ಮುಂದುವರೆದಿರುವುದು ಕನ್ನಡಿಗರಲ್ಲಿ ಸಂತಸ ತಂದಿದೆ .

ಸದ್ಯ ಹಸಿರು ಬಣ್ಣದ ಲೈನ್​ ನಾಗಸಂದ್ರದಿಂದ ಸಿಲ್ಕ್ ಇನ್ಸ್​ಟಿಟ್ಯೂಟ್​ವರೆಗೆ ಕಾರ್ಯ ನಿರ್ವಹಿಸುತ್ತಿದ್ದು, 32 ಮೆಟ್ರೋ ಸ್ಟೇಷನ್​ಗಳು ಇವೆ. ಪರ್ಪಲ್ ಲೈನ್​ ವೈಟ್ ಫೀಲ್ಡ್​​ನಿಂದ ಚೆಲ್ಲಘಟ್ಟದವರೆಗೆ ಕಾರ್ಯ ನಿರ್ವಹಿಸುತ್ತಿದ್ದು 37 ಮೆಟ್ರೋ ಸ್ಟೇಷನ್​ಗಳು ಇವೆ. ಈಗ ಹಳದಿ ಮೆಟ್ರೋ ಸೇರಿದರೆ 85 ಸ್ಟೇಷನ್​ಗಳಿದ್ದು , ಎಲ್ಲಾ ಸ್ಟೇಷನ್ ಗಳಲ್ಲೂ ಅಪರ್ಣಾ ಅವರದ್ದೇ ಧ್ವನಿ ಇರಲಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!