85 ಮೆಟ್ರೋ ಸ್ಟೇಷನ್​ಗಳಲ್ಲೂ ಅಪರ್ಣಾದ್ದೇ ಧ್ವನಿ! ಯೆಲ್ಲೋ ಲೈನ್ ಗೂ ಬಂತು ಖ್ಯಾತ ನಿರೂಪಕಿ ಕಂಠ..

ಅಪರ್ಣಾ, ಯಾರಿಗೆತಾನೇ ಗೊತ್ತಿಲ್ಲ ಹೇಳಿ , ನಟಿ ಹಾಗೂ ನಿರೂಪಕಿಯಾಗಿ ಜಯಪ್ರಿಯತೆ ಪಡೆದವರು , ಅವರ ಸುಮಧುರ ಧ್ವನಿಯು ಬೆಂಗಳೂರಿನ ಹಸಿರು ಮತ್ತು ನೇರಳೆ ಮೆಟ್ರೋ ಮಾರ್ಗಗಳಲ್ಲಿ ಜನಪ್ರಿಯವಾಗಿತ್ತು. ಇದೀಗ ಹೊಸದಾಗಿ ಉದ್ಘಾಟನೆಯಾದ ಹಳದಿ ಮೆಟ್ರೋ ಮಾರ್ಗದಲ್ಲಿ ಸಹ ಇವರ ಧ್ವನಿಯನ್ನು ಬಳಸಲಾಗಿದೆ. ಅಪರ್ಣಾ ಕ್ಯಾನ್ಸರ್‌ನಿಂದ ಬಳಲುತ್ತಿದ್ದರೂ ತಮ್ಮ ಕೊನೆಯ ದಿನಗಳಲ್ಲಿ ಯೆಲ್ಲೋ ಲೈನ್ ನ ಮೆಟ್ರೋ ಅನ್ನೊನ್ಸಮೆಂಟ್ ರೆಕಾರ್ಡಿಂಗ್‌ ಮಾಡಿದ್ದರು. 2024ರ ಏಪ್ರಿಲ್-ಮೇ ನಲ್ಲಿ ಮೆಟ್ರೋದ ತಾಂತ್ರಿಕ ತಂಡ ಅಪರ್ಣಾ ಬಳಿ ತೆರೆಳಿ ಅವರ ಧ್ವನಿಯನ್ನು ರೆಕಾರ್ಡಿಂಗ್ ಮಾಡಿಕೊಂಡಿತ್ತು.

ಕಳೆದ ವರ್ಷ ಜುಲೈನಲ್ಲಿ ನಿಧನ ಹೊಂದಿದ್ದ ನಿರೂಪಕಿ ಅಪರ್ಣಾ ಅನಾರೋಗ್ಯ ದಿಂದ ಬಳಲುತ್ತಿದ್ದರು . ಕ್ಯಾನ್ಸರ್ ಮಧ್ಯೆಯೂ ಅಪರ್ಣಾ ತಮ್ಮ ಧ್ವನಿ ನೀಡಿ ಕರ್ತವ್ಯ ಮೆರೆದಿದ್ದಾರೆ.

ಹಳದಿ ಬಣ್ಣದ ಮಾರ್ಗ ಭಾನುವಾರ (ಆಗಸ್ಟ್ 10) ಉದ್ಘಾಟನೆಗೊಂಡಿತು. ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು ಲೋಕಾರ್ಪಣೆ ಮಾಡಿದರು. ಆರ್​ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಈ ರೈಲು ಸಂಪರ್ಕ ಕಲ್ಪಿಸುತ್ತದೆ. ಒಟ್ಟೂ 16 ನಿಲ್ದಾಣಗಳನ್ನು ಈ ಮೆಟ್ರೋ ರೈಲು ಹಾದು ಹೋಗುತ್ತದೆ. ಈ ಮಾರ್ಗದಲ್ಲಿ ಅಪರ್ಣಾ ಧ್ವನಿ ಪ್ರತಿಧ್ವನಿಸಲಿದೆ.

 

ಅಪರ್ಣಾ ಧ್ವನಿ ತುಂಬಾನೇ ಸುಮಧುರವಾಗಿತ್ತು. ಅವರು ಆ್ಯಂಕರಿಂಗ್​ಗೆ ನಿಂತರೆ ಬಾಯಿಯಿಂದ ಮುತ್ತುಗಳು ಉದುರುತ್ತಿವೆ ಎಂದನಿಸುತ್ತಿತ್ತು. ಹಸಿರು ಹಾಗೂ ಪರ್ಪಲ್ ಲೈನ್ ಮೆಟ್ರೋಗೆ ಅಪರ್ಣಾ ಅವರೇ ಧ್ವನಿ ನೀಡಿದ್ದರು. ಇದು ಮೆಟ್ರೋದ ಹೈಲೈಟ್ ಕೂಡ ಆಗಿತ್ತು. ಹಳದಿ ಬಣ್ಣದ ಮೆಟ್ರೋಗೂ ಅವರದ್ದೇ ಧ್ವನಿ ಇರಬೇಕು ಎಂಬುದು ಕನ್ನಡಿಗರ ಆಸೆ ಆಗಿತ್ತು. ‘ಹಳೆಯ ಮಾರ್ಗದಲ್ಲಿ ಅಪರ್ಣಾ ಧ್ವನಿ ಮುಂದುವರಿಸುತ್ತೇವೆ. ಹಳದಿ ಬಣ್ಣಕ್ಕೆ ಕಷ್ಟ’ ಎಂದು ಮೆಟ್ರೋ ಅಧಿಕಾರಿಗಳು ಈ ಮೊದಲು ಹೇಳಿದ್ದರು. ಆದರೆ , ಇದೀಗ ಹಳದಿ ಲೈನ್ ಮೆಟ್ರೋಗೂ ಅಪರ್ಣಾ ಅವರ ಧ್ವನಿ ಮುಂದುವರೆದಿರುವುದು ಕನ್ನಡಿಗರಲ್ಲಿ ಸಂತಸ ತಂದಿದೆ .

ಸದ್ಯ ಹಸಿರು ಬಣ್ಣದ ಲೈನ್​ ನಾಗಸಂದ್ರದಿಂದ ಸಿಲ್ಕ್ ಇನ್ಸ್​ಟಿಟ್ಯೂಟ್​ವರೆಗೆ ಕಾರ್ಯ ನಿರ್ವಹಿಸುತ್ತಿದ್ದು, 32 ಮೆಟ್ರೋ ಸ್ಟೇಷನ್​ಗಳು ಇವೆ. ಪರ್ಪಲ್ ಲೈನ್​ ವೈಟ್ ಫೀಲ್ಡ್​​ನಿಂದ ಚೆಲ್ಲಘಟ್ಟದವರೆಗೆ ಕಾರ್ಯ ನಿರ್ವಹಿಸುತ್ತಿದ್ದು 37 ಮೆಟ್ರೋ ಸ್ಟೇಷನ್​ಗಳು ಇವೆ. ಈಗ ಹಳದಿ ಮೆಟ್ರೋ ಸೇರಿದರೆ 85 ಸ್ಟೇಷನ್​ಗಳಿದ್ದು , ಎಲ್ಲಾ ಸ್ಟೇಷನ್ ಗಳಲ್ಲೂ ಅಪರ್ಣಾ ಅವರದ್ದೇ ಧ್ವನಿ ಇರಲಿದೆ.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!