ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಕೆ.ಎನ್.​ ರಾಜಣ್ಣ !

ಲೋಕಸಭಾ ಚುನಾವಣೆ ಸಮಯದಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ ಎಂದು ಕಾಂಗ್ರೆಸ್​ನ ರಾಷ್ಟ್ರೀಯ ಮತ್ತು ರಾಜ್ಯ ​ನಾಯಕರು ಬೆಂಗಳೂರಿನಲ್ಲಿ ಬೃಹತ್​ ಪ್ರತಿಭಟನೆ ಮಾಡಿದ್ದರು. ಈ ವಿಚಾರವಾಗಿ ಸಚಿವ ಕೆಎನ್​ ರಾಜಣ್ಣ ಹೇಳಿಕೆ ನೀಡಿ ತಮ್ಮದೇ ಪಕ್ಷದ ನಾಯಕರು ಮುಜುಗುರಕ್ಕೀಡಾಗುವಂತೆ ಮಾಡಿದ್ದರು. ಕೆಎನ್​ ರಾಜಣ್ಣ ಹೇಳಿಕೆಯಿಂದ ಹೈಕಮಾಂಡ್ ತೀವ್ರ ಅಸಮಾಧಾನಗೊಂಡು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚಿಸಿದೆ.

ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕೆಎನ್​ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕೆ.ಎನ್. ರಾಜಣ್ಣ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗೀಕರಿಸಿದ್ದಾರೆ.

ರಾಜೀನಾಮೆ ಬಗ್ಗೆ ಸಚಿವ ಕೆಎನ್​ ರಾಜಣ್ಣ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿ ಬಳಿಕ ಸ್ಪಷ್ಟನೆ ನೀಡುತ್ತೇನೆ. ಯಾವ ವಿಚಾರಕ್ಕೆ ಹೈಕಮಾಂಡ್​ ನನ್ನ ಮೇಲೆ ಗರಂ ಆಗಿದೆ ಎಂಬುದು ಗೊತ್ತಿಲ್ಲ. ಹೈಕಮಾಂಡ್ ಹೇಳಿದ ಮೇಲೆ ಅಲ್ವಾ ಮಾತನಾಡುವುದು ಎಂದು ಹೇಳಿದರು.

ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಇದ್ದಾರೆ, ಅಲ್ಲೇ ಭೇಟಿಯಾಗುವೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಂತರ ಮಾತನಾಡುತ್ತೇನೆ. ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕೊಂಡವನು ಅಲ್ಲ. ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದರು.

ತಂದೆಯ ರಾಜಿನಾಮೆ ವಿಚಾರ ತಳ್ಳಿಹಾಕಿದ: MLC ರಾಜೇಂದ್ರ
ತಂದೆ, ಸಚಿವ ಸ್ಥಾನಕ್ಕೆ ರಾಜಣ್ಣ ರಾಜೀನಾಮೆ ನೀಡುತ್ತಾರೆ ಎಂಬುವುದು ಸುಳ್ಳು. ನಾನು ಈಗಷ್ಟೇ ನಮ್ಮ ತಂದೆಯ ಜೊತೆ ಮಾತನಾಡಿದ್ದೇನೆ. ಆ ರೀತಿ ಏನೂ ಇಲ್ಲ ಅಂತ ನಮ್ಮ ತಂದೆ ಹೇಳಿದ್ದಾರೆ ಎಂದು ಕೆ.ಎನ್.ರಾಜಣ್ಣ ಪುತ್ರ ಎಂಎಲ್​ಸಿ ರಾಜೇಂದ್ರ ಹೇಳಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!