ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯ : ಆರ್ ಅಶೋಕ್

ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯ : ಆರ್ ಅಶೋಕ್

ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧ ಶಕ್ತಿಗಳು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದು, ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಜಿಹಾದಿ ಮುಳ್ಳುಗಳ ದುಸ್ಸಾಹಸ ಶಾಂತಿ ಕದಡುತ್ತಿದೆ.

ನಿನ್ನೆ ರಾತ್ರಿ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಕಣ್ಮರೆಯಾಗಿರುವ ಕಾನೂನು ಸುವ್ಯವಸ್ಥೆಗೆ ಮತ್ತೂಂದು ನಿದರ್ಶನವಾಗಿದೆ. ಕಳೆದ ವರ್ಷವೂ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಇಂತಹುದೇ ಘಟನೆ ನಡೆದಿದ್ದರೂ ಈ ವರ್ಷ ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದು ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ.

ಶಾಂತಿಯುತವಾಗಿ ಸಾಗುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆಗೆ ಅಡ್ಡಿಪಡಿಸುವ ದುರುದ್ದೇಶದಿಂದ ಮುಸ್ಲಿಂ ಮತಾಂಧ ಪುಂಡರು ಪೂರ್ವನಿಯೋಜಿತವಾಗಿ ದಾಂಧಲೆ ಎಬ್ಬಿಸಿ ಸಾರ್ವಜನಿಕರು, ಪೊಲೀಸರ ಮೇಲೆ ಕಲ್ಲು ತೂರಾಟ ಮಾಡುವುದು, ಚಪ್ಪಲಿ ಎಸೆಯುವುದು, ಪೆಟ್ರೋಲ್ ಬಾಂಬ್ ಸ್ಫೋಟಿಸುವುದು, ತಲ್ವಾರ್ ಝಳಪಿಸುವಂತಹ ದುಸ್ಸಾಹಸಕ್ಕೆ ಮುಂದಾಗುತ್ತಾರೆ ಅಂದರೆ ರಾಜ್ಯದಲ್ಲಿ ಇಂತಹ ಮತಾಂಧ ಪುಂಡರಿಗೆ, ಮುಸ್ಲಿಂ ಮೂಲಭೂತವಾದಿಗಳಿಗೆ ಕಾನೂನಿನ ಭಯವೇ ಇಲ್ಲವೆಂಬುದು ಸ್ಪಷ್ಟವಾಗುತ್ತದೆ.

ಅಷ್ಟೇ ಅಲ್ಲದೆ, ರಕ್ಷಣೆ ಕೊಡಿ ಎಂದು ಪೊಲೀಸ್ ಠಾಣೆಗೆ ಬಂದವರ ಮೇಲೆಯೇ ಈ ಮತಾಂಧ ಪುಂಡರು ಹಲ್ಲೆ, ದಬ್ಬಾಳಿಕೆ ನಡೆಸುತ್ತಾರೆ ಅಂದರೆ ಈ ದುಷ್ಟರ ತಾಲಿಬಾನ್ ಮನಸ್ಥಿತಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಎಷ್ಟು ಪ್ರೋತ್ಸಾಹ, ಪೋಷಣೆ ದೊರಕುತ್ತಿದೆ ಎಂದು ಊಹಿಸಿಕೊಳ್ಳಿ.

@INCKarnataka
ಪಕ್ಷ ಮತ್ತು ರಾಜ್ಯ ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣ, ಓಲೈಕೆ ರಾಜಕಾರಣ, ತುಷ್ಟೀಕರಣವೇ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿರುವುದಕ್ಕೆ ನೇರ ಕಾರಣ.

ಇಂತಹ ಮತಾಂಧ ಪುಂಡರ ಬಾಲ ಕತ್ತರಿಸದೆ ಹೀಗೆ ಬಿಟ್ಟರೆ ಇಂತಹವರು ನಾಳೆ ಉಗ್ರವಾದಿಗಳಾಗುವುದರಲ್ಲಿ ಸಂಶಯವೇ ಇಲ್ಲ. ನಿನ್ನೆಯ ಗಲಭೆಗೆ ಕಾರಣರಾದ ಸಮಾಜ ಘಾತುಕ ಶಕ್ತಿಗಳನ್ನ ಈ ಕೊಡಲೇ ಬಂಧಿಸಿ ಕಾನೂನು ವಶಕ್ಕೆ ಒಪ್ಪಿಸಿ ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಜಿಹಾದಿ ಮಾನಸಿಕತೆಗೆ ಜಾಗವಿಲ್ಲ ಎಂಬ ದಿಟ್ಟ ಸಂದೇಶ ರವಾನಿಸಬೇಕು ಎಂದು ಮುಖ್ಯಮಂತ್ರಿ @siddaramaiahಹಾಗು ಗೃಹ ಸಚಿವ
@DrParameshwara ಅವರನ್ನ ಒತ್ತಾಯಿಸುತ್ತೇನೆ ಎಂದು ಆರ್ ಅಶೋಕ್ ಟ್ವೀಟ್​ ಮಾಡಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!