ಯೂನಿವರ್ಸಲ್ ಬಾಸ್ ಜೊತೆ ಚಂದನ್ ಶೆಟ್ಟಿ ವಿಡಿಯೋ ಸಾಂಗ್….

ಕನ್ನಡ ಹಾಡಿಗೆ ಎಗ್ಸೈಟ್ ಆದ ವಿಶ್ವಪ್ರಸಿದ್ಧ ಕ್ರಿಕೆಟ್ ಆಟಗಾರ ಕ್ರಿಸ್ ಗೇಲ್
‘ಲೈಫ್ ಈಸ್ ಕೆಸಿನೋ’ಎಂಬ ಈ ಹಾಡು ಕನ್ನಡ ಸಿನಿಮಾ ರಂಗದಲ್ಲಿ ಹೊಸ ಅಧ್ಯಾಯವನ್ನು ತೆರೆಯಲಿದೆ. ಕ್ರಿಸ್ ಗೇಲ್ ಅವರು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಈ ಬಗ್ಗೆ ಘೋಷಿಸಿದ್ದಾರೆ. ಇದು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಚಂದನ್ ಶೆಟ್ಟಿ ಅವರು ಈಗಾಗಲೇ ಹಲವು ಹಿಟ್ ಹಾಡುಗಳನ್ನು ನೀಡಿದ್ದಾರೆ. ಅದರಲ್ಲೂ ಅವರ ಆಲ್ಬಂ ಸಾಂಗ್ಗಳು ತುಂಬಾನೇ ಫೇಮಸ್. ಈಗ ಅವರು ವೆಸ್ಟ್ ಇಂಡೀಸ್, ಆರ್ಸಿಬಿಯ ಮಾಜಿ ಆಟಗಾರ ಕ್ರಿಸ್ ಗೇಲ್ ಜೊತೆ ವಿಡಿಯೋ ಸಾಂಗ್ ಒಂದನ್ನು ಶೂಟ್ ಮಾಡುತ್ತಿದ್ದಾರೆ. ಈ ವಿಷಯವನ್ನು ಸ್ವತಃ ಕ್ರಿಸ್ ಗೇಲ್ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಚಾರ ಕೇಳಿ ಚಂದನ್ ಶೆಟ್ಟಿ ಅಭಿಮಾನಿಗಳು ಹಾಗೂ ಕನ್ನಡಿಗರಿಗೆ ಖುಷಿ ಆಗಿದೆ. ಈ ವಿಡಿಯೋ ಸಾಂಗ್ ಯಾವ ರೀತಿಯಲ್ಲಿ ಇರಲಿದೆ ಎಂಬ ಕುತೂಹಲ ಅಭಿಮಾನಿಗಳಿಗೆ ಮೂಡಿದೆ.

ಚಂದನ್ ಶೆಟ್ಟಿ ಅವರು ಹಲವು ಹಿಟ್ ಹಾಡುಗಳನ್ನು ನೀಡುತ್ತಾ ಬಂದಿದ್ದಾರೆ. ಅವರ ಹಾಡುಗಳಿಗೆ ದೊಡ್ಡ ಅಭಿಮಾನಿ ವರ್ಗ ಇದೆ. ಆದರೆ, ಇತ್ತೀಚೆಗೆ ಅವರು ಹಾಡುಗಳನ್ನು ಮಾಡೋದನ್ನು ಕಡಿಮೆ ಮಾಡಿದ್ದಾರೆ. ಅಷ್ಟಾಗಿ ಸಾಂಗ್ಗಳು ಅವರಿಂದ ಮೂಡಿ ಬಂದಿರಲಿಲ್ಲ. ಬದಲಿಗೆ ನಟನೆಯ ಬಗ್ಗೆ ಹೆಚ್ಚು ಆಸಕ್ತಿ ತೋರಿಸಿದ್ದರು. ಇದರ ಜೊತೆಗೆ ಅವರ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏರಿಳಿತ ಉಂಟಾಯಿತು. ಈಗ ಅದೆಲ್ಲವನ್ನೂ ಮರೆತು ಮುಂದೆ ಸಾಗುತ್ತಿದ್ದಾರೆ.ಚಂದನ್ ಶೆಟ್ಟಿ ಅವರು ಸದ್ಯ ವಿದೇಶದಲ್ಲಿ ಇದ್ದಾರೆ. ಕ್ರಿಸ್ ಗೇಲ್ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೇಟಸ್ನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಇದರಲ್ಲಿ ಚಂದನ್ ಶೆಟ್ಟಿ ಜೊತೆ ವಿಡಿಯೋ ಸಾಂಗ್ ಶೂಟ್ ಮಾಡುತ್ತಿರುವುದಾಗಿ ಹೇಳಿದ್ದಾರೆ.

https://www.instagram.com/reel/DNNZBnLv3qD/?utm_source=ig_web_copy_link&igsh=MzRlODBiNWFlZA==

 

 

 

‘ನಾವು ಹಾಡು ಮಾಡುತ್ತಿದ್ದೇವೆ. ಅದರ ಹೆಸರು ಲೈಫ್ ಈಸ್ ಕೆಸಿನೋ. ನಾನು ಎಗ್ಸೈಟ್ ಆಗಿದ್ದೇನೆ. ನಾನು ಈ ಹಾಡಿನ ಫ್ಯಾನ್ ಆಗಿದ್ದೇನೆ’ ಎಂದಿದ್ದಾರೆ ಚಂದನ್ ಶೆಟ್ಟಿ. ಇದಕ್ಕೆ ಕ್ರಿಸ್ ಗೇಲ್ ಕೂಡ ಖುಷಿ ಆಗಿದ್ದು, ಅವರು ಹೆಮ್ಮೆಯಿಂದ ಈ ಬಗ್ಗೆ ಹೇಳಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಾಯಿರಿ ಎಂದಿದ್ದಾರೆ.ಕ್ರಿಸ್ ಗೇಲ್ ಅವರಿಗೆ ಬೆಂಗಳೂರಿನ ಬಗ್ಗೆ, ಕನ್ನಡಿಗರ ವಿಶೇಷ ಪ್ರೀತಿ ಇದೆ. ಇದಕ್ಕೆ ಕಾರಣ ಆರ್ಸಿಬಿ. ಅವರು ಹಲವು ವರ್ಷಗಳ ಕಾಲ ಆರ್ಸಿಬಿ ಪರ ಆಡಿದ್ದರು. ಅವರು ಅನೇಕ ಬಾರಿ ಬೆಂಗಳೂರಿಗೆ ಬಂದು ಹೋಗಿದ್ದಾರೆ. ಆದರೆ, ಈವರೆಗೆ ಅವರು ಕನ್ನಡದ ಮ್ಯೂಸಿಕ್ ವಿಡಿಯೋದಲ್ಲಿ ಕಾಣಿಸಿಕೊಂಡಿರಲಿಲ್ಲ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!